ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿರುವುದನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದ ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿಯನ್ನು ಈ ಕೂಡಲೇ ಪ್ರಾರಂಭಿಸಬೇಕೆಂದು ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ಆರ್ ಜಾನೆಗೆ ಮನವಿ ಸಲ್ಲಿಸಿದರು.
ಇದೇ ವೇಳೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಮೊಬಿನ್ ಅಹಮ್ಮದ್ ಮಾತನಾಡಿ, ಎಂ.ಜಿ.ರಸ್ತೆ ದುರಸ್ತಿಗಾಗಿ ಅನೇಕ ಬಾರಿ ಪ್ರತಿಭಟನೆ ಮಾಡಿದ್ದು, ಪಾಲಿಕೆ ಅಧಿಕಾರಿಗಳಿಂದ ಲಿಖಿತ ಭರವಸೆ ದೊರೆತಿದ್ದರೂ ಕೂಡಾ ಇದುವರೆಗೆ ಕಾಮಗಾರಿ ಪ್ರಾರಂಭವಾಗದಿರುವುದು ವಿಷಾದನೀಯ’ ಎಂದರು.

‘ರಸ್ತೆಯ ಗುಂಡಿಗಳಿಂದ ವಾಹನ ಸವಾರರಿಗೆ, ಅಪಘಾತದ ಭೀತಿ ಹೆಚ್ಚಾಗುತ್ತಿದೆ, ವಿಪರೀತ ಧೂಳಿನಿಂದ ಸಾರ್ವಜನಿಕರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವುದಾಗಿ ಭರವಸೆ ನೀಡಿ ಕಾಮಗಾರಿ ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಪಾಲಿಕೆಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಎಂಜಿ ನರೇಗಾ ಬದಲಿಗೆ ಹೊಸ ಮಸೂದೆ ವಿರೋಧಿಸಿ ಎಡಪಕ್ಷಗಳ ಪ್ರತಿಭಟನೆ
ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಬೃಹತ್ ಪ್ರಮಾಣದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡುವುದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಲೀಮ್ ಅಹಮ್ಮದ್ ಚಿತಾಪುರಿ, ಎಸ್ಡಬ್ಲ್ಯೂಸಿ ಸದಸ್ಯರಾದ ಸಿದ್ದಣ್ಣ ಚಾಲ್ರಾ , ಸಿದ್ದಣ್ಣ ಚಕ್ರಾ, ಸದ್ದಾಂ ಮದ್ರಾಸಿ, ಸಯೀದ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.





