ಕಲಬುರಗಿ | ದೆವ್ವ ಹಿಡಿದಿದೆ ಎಂದು ಗಂಡನ ಮನೆಯವರಿಂದ ಹಲ್ಲೆ : ಮಹಿಳೆ ಸಾವು

Date:

ದೆವ್ವ ಹಿಡಿದಿದೆ ಎಂದು ಮಹಿಳೆಗೆ ಬಡಿಗೆಯಿಂದ ಹೊಡೆದ ಪರಿಣಾಮ ನೆರೆಯ ಮಹಾರಾಷ್ಟ್ರದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕುರಿತು ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಮುಕ್ತಾಬಾಯಿ (26) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಆಳಂದ ಪಟ್ಟಣದ ಮುಕ್ತಾಬಾಯಿ ಅವರನ್ನು 6 ವರ್ಷಗಳ ಹಿಂದೆ ಮಹಾರಾಷ್ಟ್ರದ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬುವವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಅವರಿಗೆ ಐದು ವರ್ಷದ ಮಗನಿದ್ದಾನೆ. ಕೆಲವು ದಿನಗಳಿಂದ ಮುಕ್ತಾಬಾಯಿಗೆ ದೆವ್ವ ಹಿಡಿದಿದೆ ಎಂದು ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು.

ಬೇವಿನ ಕಟ್ಟಿಗೆಯಿಂದ ಹೊಡೆದರೆ ದೆವ್ವ ಬಿಡುತ್ತದೆ ನಿರಂತರವಾಗಿ ಹಲ್ಲೆ ಮಾಡುತ್ತಿದ್ದರು ಎಂದು ಮುಕ್ತಾಬಾಯಿ ತವರುಮನೆಯವರು ಆರೋಪಿಸಿದ್ದರು. ಮುಕ್ತಾಬಾಯಿ ಕೆಲವು ದಿನಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಾಗ ದೆವ್ವ ಹಿಡಿದಿದೆ ಎಂದುಕೊಂಡ ಸಂಬಂಧಿಕರು ಬೇವಿನ ಕಟ್ಟಿಗೆಗಳಿಂದ ಮನಬಂದಂತೆ ಹೊಡೆದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಕಲಬುರಗಿ | ಅಪರಿಚಿತ ವಾಹನ ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ನಂತರ ಮಹಿಳೆಯನ್ನು ಡಿ.21ರಂದು ಗಾಣಗಾಪುರದ ಸಂಗಮ ನದಿಯಲ್ಲಿ ಸ್ನಾನ ಮಾಡಿಸಿ ದತ್ತಾತ್ರೇಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದಾರೆ. ಅಲ್ಲಿಂದ ಗುರುಮಠಕಲ್ ಕಡೆಗೆ ಮತ್ತೊಂದು ಪೂಜೆಗಾಗಿ ಕರೆದೊಯ್ಯುತ್ತಿದ್ದ ವೇಳೆ ಅಸ್ವಸ್ಥರಾಗಿದ್ದಾರೆ. ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಹಿಳೆ ಬದುಕುಳಿಯಲಿಲ್ಲ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...