ಕಲಬುರಗಿ | ದಲಿತ ಸಂಘರ್ಷ ಸಮಿತಿಯಿಂದ ಮನುಸ್ಮೃತಿ ಪ್ರತಿಕೃತಿ ದಹನ

Date:

ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸುವ ಬ್ರಾಹ್ಮಣಶಾಹಿಯ ವಿರುದ್ಧ ಪ್ರತಿಭಟನೆಯ ಅಸ್ತ್ರವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ಸೋಮವಾರ ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಕಾರ್ಯಕರ್ತರು ಮನುಸ್ಮೃತಿ ದಹನ ಕಾರ್ಯಕ್ರಮ ಆಯೋಜಿಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಮನುಸ್ಮೃತಿ ಪ್ರತಿಕೃತಿ ಅಣಕು ಶವಯಾತ್ರೆ ಮೂಲಕ ತೆರಳಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯ ಹತ್ತಿರ ಸಮಾವೇಶಗೊಂಡು ಮನುಸ್ಮೃತಿ ಪ್ರತಿಕೃತಿಯನ್ನು ಇಟ್ಟು ಪೆಟ್ರೋಲ್‌ ಸುರಿದು ಬೆಂಕಿ ಹೊತ್ತಿಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ ಮಾತನಾಡಿ, “ಭಾರತದಲ್ಲಿ ಬ್ರಾಹ್ಮಣ್ಯದ ನೆಲೆಯನ್ನು ಗಟ್ಟಿಗೊಳಿಸಲು ರೂಪಿಸಿದ ಸಂಹಿತೆಗಳನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬರುವ ಒಂದು ಬೃಹತ್ ಜನಸಮುದಾಯ ನಮ್ಮ ನಡುವೆ ಇದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸುವ ಮೂಲಕ ಆ ಗ್ರಂಥ ಭಾರತೀಯ ಸಮಾಜಕ್ಕೆ ಎಷ್ಟು ಅಪಾಯಕಾರಿ ಎನ್ನುವುದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡಿದರು. ಹಾಗೆಯೇ ನಾವು ಇಂದು ಕೇವಲ ಗ್ರಂಥವನ್ನು ಸುಡುತ್ತಿದ್ದೇವೆ. ಮುಂದೊಂದು ದಿನ ಗ್ರಂಥದಲ್ಲಿನ ಜಾತಿ ಶ್ರೇಷ್ಠತೆಯ ವಿಕೃತ ಚಿಂತನೆಗಳನ್ನು ಹೀಗೆಯೇ ದಹಿಸುತ್ತೇವೆ” ಎಂದು ಅವರು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನುಸ್ಮೃತಿಯನ್ನು ಪೋಷಿಸಿಕೊಂಡು ಬರುತ್ತಿರುವ ಹಿಂದುತ್ವ ಭಾರತವನ್ನು ನುಂಗಿದೆ. ಮನುಸ್ಮೃತಿ ಮತ್ತು ಹಿಂದುತ್ವ ಜನರ ತಲೆ ಕೆಡಿಸಬಹುದೇ ಹೊರತು ಹೊಟ್ಟೆಯ ಹಸಿವಿನ ಸಮಸ್ಯೆಗಳನ್ನು ನಿವಾರಿಸಲಾಗುವುದಿಲ್ಲ. ಮನುಸ್ಮøತಿ ಸಮಾಜದ ವ್ಯವಸ್ಥೆ ಹದಗೆಡಿಸಿದೆ. ಮನುಸ್ಮೃತಿಯ ನಿಯಮಗಳನ್ನು ಮುಂದುವರೆಸಿ ಕಾಪಾಡಿಕೊಂಡು ಬರುತ್ತಿರುವ ಸಂಘ ಪರಿವಾರದ ಹುನ್ನಾರಗಳಿಗೆ ಕಡಿವಾಣ ಹಾಕುವುದು ಅವಶ್ಯಕವಾಗಿದೆ ಎಂದು ಅವರು ಪ್ರತಿಪಾದಿಸಿದರು.

“ಡಿಸೆಂಬರ್ 25 ರಂದು ರಾತ್ರಿ 9 ಗಂಟೆಗೆ ಮನುಸ್ಮೃತಿ ಗ್ರಂಥಕ್ಕೆ ಬಾಪು ಸಾಹೇಬ್ ಸೇರಿದಂತೆ ಸಹಸ್ರ ಜನರು ಮನುಸ್ಮೃತಿ ಗ್ರಂಥಕ್ಕೆ ಬೆಂಕಿ ಇಟ್ಟಾಗ ಅವರೊಂದಿಗೆ ಐದು ಜನ ದಲಿತ ಸಮುದಾಯದ ಸ್ವಾಮೀಜಿಗಳು ಜೊತೆಯಲ್ಲಿದ್ದರು. ಅಂದಿನಿಂದ ಇಲ್ಲಿಯವರೆಗೂ ಆ ಘಟನೆ ವಾರ್ಷಿಕೋತ್ಸವವನ್ನು ಆಚರಿಸಲು ಹಲವಾರು ಜನ ಮಹಾಡಕ್ಕೆ ಹೋಗಿ ಮನುಸ್ಮೃತಿ ಪ್ರತಿಕೃತಿ ಸುಡುತ್ತಿದ್ದು, ಅದೇ ರೀತಿ ಚಳುವಳಿ ಮುಂದುವರೆಯಲಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಾಲ ಮರುಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳ ನೋಟಿಸ್; ರೈತರ ಆಕ್ರೋಶ

ಪ್ರತಿಭಟನೆಯಲ್ಲಿ ಸಮಿತಿಯ ಪ್ರಮುಖರಾದ ಮಹಾಂತೇಶ್ ಬಡದಾಳ್, ಮಲ್ಲಿಕಾರ್ಜುನ್ ಕ್ರಾಂತಿ, ಮಲ್ಲಿಕಾರ್ಜುನ್ ಖನ್ನಾ, ರಾಜಕುಮಾರ್ ನಿಂಬಾಳ್, ಸೂರ್ಯಕಾಂತ್ ಆಜಾದಪೂರ್, ಶಿವಕುಮಾರ್ ಕೊರಳ್ಳಿ, ಮಹೇಶ್ ಕೋಕಿಲೆ, ಪರಶುರಾಮ್ ಯಡ್ರಾಮಿ, ಸುಭಾಷ್ ಕಲ್ಲೂರೆ, ರಾಜು ಆರೇಕರ್, ಮಾರುತಿ ಕಟ್ಟಿಮನಿ, ಸಾಯಿಬಣ್ಣಾ ಕೋಟನೂರ್, ಕಪಿಲ್ ಸಿಂಗೆ ಸೇರಿಂದಂತೆ ಅನೇಕರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...