ಯುವಕರ ಕೈಗೆ ಬಂದೂಕು ಕೊಟ್ಟು, ಅವರನ್ನು ಹಾದಿ ತಪ್ಪಿಸಿದವರೇ ನಕ್ಸಲರು: ದತ್ತಾತ್ರೇಯ ಹೊಸಬಾಳೆ

Date:

ಸಮಾಜದೊಳಗಿನ ಬಡತನ, ಅನ್ಯಾಯ ಹಾಗೂ ಶೋಷಣೆ ಹೋಗಲಾಡಿಸಲು ಕ್ರಾಂತಿಯಿಂದಲೇ ಸಾಧ್ಯ ಎಂದು ಯುವಕರ ತಲೆಯಲ್ಲಿ ತುಂಬಿ, ಅವರ ಕೈಗೆ ಬಂದೂಕು ಕೊಟ್ಟು‌ ನಕ್ಸಲರು ಹಾದಿ ತಪ್ಪಿಸಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು.

ಕಲಬುರಗಿ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಶುಕ್ರವಾರ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಕ್ಸಲರ ಮಾತು ನಂಬಿ ಅದೆಷ್ಟೋ ಯುವಕರು ಈಗ ಜೈಲಿನಲ್ಲಿ ಕೊಳೆಯುವಂತಾಗಿದೆ” ಎಂದರು.

ಬಂದೂಕು ಹಿಡಿದ ಯುವಕರ ಬಗ್ಗೆ ನಾವು ಯೋಚಿಸಬೇಕು. ಬಂದೂಕು ಹಿಡಿದಾಗ ತಾನು ಆತ್ಮಾಹುತಿ ಮಾಡಿಕೊಂಡಾದರೂ ಸರಿ ಸಮಾಜದಲ್ಲಿ ಬದಲಾವಣೆ ತರಬೇಕು ಎಂಬ ಹುಚ್ಚು ಇರುತ್ತದೆ. ಅದನ್ನೇ ಯೌವನದ ಬಿಸಿರಕ್ತ ಎನ್ನಬಹುದು. ಆದರೆ, ದೇಶದ ಮುಕ್ತಿಗೆ ಏಳಿಗೆಗೆ ಸರಿಯಾದ ದಾರಿ ಯಾವುದೆಂದು ತೋರಿಸುವ ಹೊಣೆಗಾರಿಕೆ ತಂದೆ, ತಾಯಿಗಳದ್ದು ಹಾಗೂ ಸಮಾಜಿಕ ಸಂಸ್ಥೆಗಳದ್ದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂದೂಕಿನ ನಳಿಕೆಯ ಮೂಲಕವೇ ಇದಕ್ಕೆ ಪರಿಹಾರ ಎಂದು ಯುವಕರನ್ನು ನಕ್ಸಲ್ ನಾಯಕರು ನಂಬಿಸಿದ್ದರು. ಆದರೆ, ಸಮಾಜದಲ್ಲಿ ಪರಿವರ್ತನೆ ತರಬೇಕು ಎಂದು ಬಯಸಿರುವ ಹಲವು ಯುವಕರಿಗೆ ಹಿಂಸೆ ಮಾಡದೆಯೂ ಏನಾದರೂ ಸಾಧಿಸಬಹುದು ಎಂಬುದನ್ನು ಹೇಳಿಕೊಡಬೇಕಿದೆ” ಎಂದರು.

“ಕೃತಕ ಬುದ್ಧಿಮತ್ತೆಯಂತಹ ತಾಂತ್ರಿಕ ಆವಿಷ್ಕಾರ, ಸಾಮಾಜಿಕ ಮಾಧ್ಯಮಗಳು ಬೆಳವಣಿಗೆ ತಡೆಯಲಾಗುವುದಿಲ್ಲ. ಭಾರತೀಯು ಯುವಕರು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಅವರನ್ನು ಇಲ್ಲಿಯೇ ಹಿಡಿದಿಟ್ಟುಕೊಂಡು ದೇಶದ ಒಳಿತಿಗಾಗಿ ಸಂಶೋಧನೆಗಳನ್ನು ನಡೆಸುವಂತೆ ಮನವೊಲಿಸಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

“ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಅನಿವಾರ್ಯತೆ ಈಗ ನಮ್ಮ ಮುಂದಿಲ್ಲ. ಆದರೆ, ನಮ್ಮಲ್ಲಿನ ಹೇಡಿತನವನ್ನು ಮರೆತು ಸಮಸ್ಯೆಗಳನ್ನು ಮೆಟ್ಟಿ ಮುನ್ನುಗ್ಗುವ ಛಾತಿ ಯುವಕರಲ್ಲಿ ಬರಬೇಕಿದೆ. ಆಧುನಿಕತೆಯ ಭರಾಟೆಯಲ್ಲಿ ಮನುಷ್ಯ ಸಂಬಂಧಗಳನ್ನು ಮರೆಯುತ್ತಿದ್ದೇವೆ. ತಂದೆ-ತಾಯಿಗಳಿಗೆ ವೃದ್ದಾಶ್ರಮ ಹುಡುಕುವ ಪರಿಸ್ಥಿತಿ ಬಂದಿದೆ. ಇದನ್ನು ತಪ್ಪಿಸಲು ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡುವ ಕೆಲಸ ಆಗಬೇಕು” ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಿವಿಮಾತು ಹೇಳಿದರು.

“1ನೇ ತರಗತಿಯಿಂದ ಪಿಯುಸಿವರೆಗೆ ದೇಶದಲ್ಲಿ 39 ಕೋಟಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ದೇಶದ 1500ಕ್ಕೂ ಅಧಿಕ ವಿಶ್ವವಿದ್ಯಾಲಯ, 50 ಸಾವಿರ ಕಾಲೇಜುಗಳಲ್ಲಿ 11.68 ಕೋಟಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 51 ಕೋಟಿ ಯುವಕರು 25 ವಯಸ್ಸಿನ ಒಳಗಿದ್ದಾರೆ. ಈ ಅಂಕಿ ಅಂಶ ಗಮನಿಸಿದರೆ ಭಾರತವು ಬೃಹತ್ ಯುವಪಡೆಯನ್ನು ಹೊಂದಿದೆ. ಇದರ ಮೇಲೆ ಪಾಶ್ಚಾತ್ಯ ದೇಶಗಳ ಕಣ್ಣು ನೆಟ್ಟಿದೆ. ಭಾರತದ ಯುವಕರು ವಿದೇಶಕ್ಕೆ ರಫ್ತಾಗದಂತೆ ತಡೆಯಬೇಕು” ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಆಳ್ವ ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...