ಕಲಬುರಗಿಯಲ್ಲಿ ʼಪ್ರಬುದ್ಧ ಅಕಾಡೆಮಿʼ ಉದ್ಘಾಟನೆ

Date:

ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಅಗತ್ಯ ತರಬೇತಿ‌ ನೀಡಬೇಕು ಎನ್ನುವ ಉದ್ದೇಶದಿಂದ ಪ್ರಬುದ್ಧ ಅಕಾಡೆಮಿ ಕೇಂದ್ರ ನಿರ್ಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲಬುರಗಿ ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಸುಮಾರು 10,000 ಚದುರ ಅಡಿಯಲ್ಲಿ ₹30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಬುದ್ಧ ಪರೀಕ್ಷಾ ಪೂರ್ವ ತರಬೇತಿ ಅಕಾಡೆಮಿ ಕೇಂದ್ರವನ್ನು ಭಾನುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ʼಈ ಹಿಂದೆ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಈ ಕೇಂದ್ರಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರ ಕಳೆದುಕೊಂಡಿತ್ತು. ಆ ನಂತರ ಬಂದ ಸರ್ಕಾರ ಕೆಲಸ ಮಾಡಲೇ ಇಲ್ಲ. ಮಕ್ಕಳ ವಿದ್ಯಾಭ್ಯಾಸ, ಉದ್ಯೋಗ ಹಾಗೂ ಭವಿಷ್ಯದ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ನಮ್ಮ ನಂತರ ಅಧಿಕಾರಕ್ಕೆ ಬಂದ ಸರ್ಕಾರ ಈ ಕೇಂದ್ರದ ಕಾಮಗಾರಿ ಕೈಗೊಳ್ಳಲಿಲ್ಲ. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ಪ್ರಬುದ್ಧ ಅಕಾಡೆಮಿಯನ್ನು ನಿರ್ಮಿಸಿ ನಾವೇ ಉದ್ಘಾಟಿಸಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ನುಡಿದಂತೆ ನಡೆಯುತ್ತಿದ್ದೇವೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಕಾಡೆಮಿ ಕೇವಲ ಕಟ್ಟಡವಲ್ಲ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ಅವರ ಕನಸುಗಳು ಇಲ್ಲಿ ಸಾಕಾರಗೊಳ್ಳಲಿವೆ. ಈ ಹಿಂದೆ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಾಗ ಅದರಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಒಂದು ಹೊತ್ತಿನ ಊಟಕ್ಕೆ ಪರದಾಡುವಂತಾಗಿತ್ತು. ತರಬೇತಿ ಪಡೆಯಲು ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿಗಳು ʼಮೂರು ನಾಲ್ಕು ಅನ್ನ ಹಾಕುʼ ಎಂದು ವಾಟ್ಸಪ್ ಗ್ರೂಪ್ ಮಾಡಿಕೊಂಡು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಉಚಿತ ಊಟ ಸಿಗುತ್ತದೆ ಎಂದು ಮಾಹಿತಿ ಹಂಚಿಕೊಂಡು ಛತ್ರಗಳ ವಿವರ ಹಾಕಿ ಅಲ್ಲಿ ಊಟ ಮಾಡಿಕೊಂಡು ಬರುತ್ತಿದ್ದರು. ಆ ದೃಶ್ಯ ನನ್ನ ಕಣ್ಣ‌ಮುಂದೆ ಬಂದು, ಕಣ್ಣೀರು ಬರುವಂತಾಗುತ್ತಿತ್ತು. ಅಂತಹ ಯಾವುದೇ ಸ್ಥಿತಿ ನಮ್ಮ ಭಾಗದ ಮಕ್ಕಳಿಗೆ ಬಾರದಿರಲಿ ಎಂದು ಪ್ರಬುದ್ಧ ಅಕಾಡೆಮಿ ಕೇಂದ್ರ ಸ್ಥಾಪನೆಗೆ ಒತ್ತು ನೀಡಿ, ಇಂದು ಕಾರ್ಯರೂಪಕ್ಕೆ ತರಲಾಗಿದೆʼ ಎಂದು ತಿಳಿಸಿದರು.

ಪ್ರಬುದ್ಧ ಅಕಾಡೆಮಿ ಒಂದು ಉತ್ಕೃಷ್ಟ ತರಬೇತಿ ಕೇಂದ್ರವಾಗಿ ಬಲಗೊಳ್ಳಬೇಕು. ಈ ಭಾಗದ ಐಎಎಸ್ ಅಧಿಕಾರಿಗಳು ಇಲ್ಲಿನ ಅಭ್ಯರ್ಥಿಗಳಿಗೆ ಪಾಠ ಮಾಡಲು ಮುಂದೆ ಬರಬೇಕು. ಅದಕ್ಕೆ ಅನುಕೂಲವಾಗುವಂತೆ ರೋಸ್ಟರ್ ಪದ್ದತಿ ರೂಪಿಸಬೇಕು. ಅಕಾಡೆಮಿಗೆ ಅಭ್ಯರ್ಥಿಗಳು ಬಂದು ಹೋಗಲು ಕೆಕೆಆರ್‌ಟಿಸಿ ವತಿಯಿಂದ ಎರಡು ನಗರ ಸಾರಿಗೆ ಸೇವೆಯನ್ನು ಇಂದಿನಿಂದಲೇ ಪ್ರಾರಂಭಿಸಲಾಗಿದೆ. ಜೊತೆಗೆ ನಿವೃತ್ತ ಪ್ರೊಫೆಸರ್ ಗಳು ಕೂಡಾ ಇಲ್ಲಿನ ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಈಗಾಗಲೇ 10,000 ಅಭ್ಯರ್ಥಿಗಳು ಕೆಇಎ ಮೂಲಕ ಪರೀಕ್ಷೆ ಎದುರಿಸಿದ್ದಾರೆ. ಅವರಲ್ಲಿ ಮೆರಿಟ್ ಆಧಾರದ ಮೇಲೆ 500 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತದೆʼ ಎಂದರು.

ಇದನ್ನೂ ಓದಿ : ಬೀದರ್‌ | ʼವಿಬಿ- ಜಿ ರಾಮ್‌ ಜಿʼ ಕರಾಳ ಕಾಯ್ದೆ ಹಿಂಪಡೆಯಲು ದೇಶಾದ್ಯಂತ ಆಂದೋಲನ : ಸಚಿವ ಈಶ್ವರ ಖಂಡ್ರೆ

ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್‌, ಶಾಸಕರಾದ ಎಂ.ವೈ.ಪಾಟೀಲ್‌, ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್‌ ಸದಸ್ಯರಾದ ತಿಪ್ಪಣಪ್ಪ ಕಮಕನೂರ ಜಗದೇವ ಗುತ್ತೇದಾರ್‌, ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...