ಕಲಬುರಗಿ | ಸಾವಿತ್ರಿ ಬಾಯಿ ಫುಲೆ ಜನ್ಮದಿನ ಆಚರಣೆ

Date:

ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸಿ. ಅವುಗಳ ನಿವಾರಣೆಗೆ ಅನೇಕ ಮಹಾನ್ ವ್ಯಕ್ತಿಗಳು ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಸುಮಾರು 150 ವರ್ಷಗಳ ಹಿಂದೆ ಮಹಿಳೆಯರನ್ನು ತೀವ್ರ ಸಂಕಷ್ಟದಲ್ಲಿ ಮುಳುಗಿಸಿದ್ದ ಕಾಲದಲ್ಲಿ, ಅವುಗಳ ವಿರುದ್ಧ ಧ್ವನಿ ಎತ್ತಿ ಮಹಿಳೆಯರ ಶಿಕ್ಷಣಕ್ಕಾಗಿ, ಉನ್ನತ ಸ್ಥಾನಮಾನಗಳಿಗಾಗಿ ಹೋರಾಡಿದ ಚೇತನ ಸಾವಿತ್ರಿಬಾಯಿ ಫುಲೆ ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಸ್ನೇಹಾ ಕಟ್ಟಿಮನಿ ಹೇಳಿದ್ದಾರೆ.

ಕಲಬುರಗಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ಜ ಕಾಲೇಜಿನಲ್ಲಿ ಎಐಡಿಎಸ್‌ಒ ಆಯೋಜಿಸಿದ್ದ ‘ಸಾವಿತ್ರಿ ಬಾಯಿ ಫುಲೆ’ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “19ನೇ ಶತಮಾನದಲ್ಲಿ ಸಣ್ಣ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ವಯಸ್ಸಾದವರ ಜೊತೆ ಮದುವೆ ಮಾಡುತ್ತಿದ್ದರು. ಗಂಡ ಸತ್ತರೆ ತಲೆ ಬೋಳಿಸುವುದು ಮತ್ತು ಗಂಡನ ದೇಹದ ಜೊತೆನೆ ಚಿತೆಯನ್ನೆರಿಸಿ ಜೀವಂತವಾಗಿ ಸುಡುತ್ತಿದ್ದರು. ಇಂತಹ ಕೆಟ್ಟ ಪರಿಸ್ಥಿತಿಯ ವಿರುದ್ಧ ಸಾವಿತ್ರಿ ಬಾಯಿ ಫುಲೆ ಹೋರಾಟ ಕಟ್ಟಿದರು. ಸಮಾಜದ ವಿರೋಧ, ಅವಮಾನ, ಹಿಂಸೆಗಳ ನಡುವೆಯೂ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸಾವಿತ್ರಿಬಾಯಿ ಅವರು ತಮ್ಮ ಜೀವನದುದ್ದಕ್ಕೂ ಹೋರಾಡಿದರು” ಎಂದು ತಿಳಿಸಿದರು.

“ಮಹಿಳೆಯರಿಗಾಗಿ ಸಾವಿತ್ರಿ ಬಾಯಿ ಫುಲೆ ಹೋರಾಟ ಮಾಡಿದರು. ಹಲವಾರು ಹಕ್ಕುಗಳನ್ನು ತಂದುಕೊಟ್ಟರು. ಆದರೆ, ಇಂದಿನ ಪರಿಸ್ಥಿತಿ ಮತ್ತೆ ಶೋಚನೀಯವಾಗುತ್ತಿದೆ. ಇಂದು ಮಹಿಳೆಯರ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. 06 ತಿಂಗಳ ಮಕ್ಕಳಿಂದ ವಯಸ್ಸಾದ ಅಜ್ಜಿಯವರೆಗೂ ಮಹಿಳೆಯರ ಮೇಲೆ ಪ್ರತಿದಿನ ಅತ್ಯಾಚಾರ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಶ್ಲೀಲ ಸಿನಿಮಾ ಸಾಹಿತ್ಯಗಳನ್ನು ಇಂದು ಅಡೆತಡೆ ಇಲ್ಲದೆ ಹರಿಬಿಡಲಾಗುತ್ತಿದೆ. ಮಹಿಳೆಯರು, ವಿದ್ಯಾರ್ಥಿನಿಯರು ಇಂತಹ ದುಸ್ಥಿತಿಯ ವಿರುದ್ಧ ಒಗ್ಗಟ್ಟಾಗಿ, ಘನತೆ ಗೌರವದ ಬದುಕಿಗಾಗಿ ಹೋರಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ತುಳಜರಾಮ ಎನ್.ಕೆ. ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...