ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

Date:

ಸೇಡಂ ತಾಲೂಕಿನ ಅನವರ್ ಗ್ರಾಮ ಪಂಚಾಯಿತಿಗೆ ಒಳಪಡುವ ಐಪಿ ಹೊಸಳ್ಳಿ ಗ್ರಾಮದಲ್ಲಿ ರೇಷನ್(ಪಡಿತರ) ಡೀಲರ್ ಅವರು ಹೇಳಿದಂತೆಯೇ ಕೇಳಬೇಕು. ಇಲ್ಲವೇ ರೇಷನ್ ಕೊಡುವುದಿಲ್ಲವೆಂದು ಡೀಲರ್ ಮಜ್ಜಿದ್ ಪಟೇಲ್ ದಾಸ್ತಪುರ ಅವರು ಪ್ರತ್ಯಕ್ಷವಾಗಿಯೇ ಖಡಕ್ಕಾಗಿ ಧಮ್ಕಿ ಹಾಕುತ್ತಿರುವುದಾಗಿ ಆರೋಪ ವ್ಯಕ್ತವಾಗಿದೆ.

ಈ ಕುರಿತು ಐಪಿ ಹೊಸಳ್ಳಿ ಗ್ರಾಮಸ್ಥರು ಪ್ರಶ್ನಿಸಿದಾಗ ರೇಷನ್ ಸಲುವಾಗಿ ಥಂಬ್ ಮಾಡಿಕೊಳ್ಳಬೇಕೆಂದರೆ 20 ರೂಪಾಯಿ ಮತ್ತು ರೇಷನ್ ಕೊಡುವಾಗ 20 ರೂಪಾಯಿ ಹಾಗೂ ಒಂದು ಕೆಜಿ ಅಕ್ಕಿ ನೀಡಬೇಕು. ಇಲ್ಲದಿದ್ದಲ್ಲಿ ರೇಷನ್ ಕೊಡುವುದಿಲ್ಲವೆಂದು ಗ್ರಾಮಸ್ಥರಿಗೆ ಕಂಡೀಷನ್ ಹಾಕಿದ್ದಾರೆ.

ಸರ್ಕಾರವು ಸಾರ್ವಜನಿಕರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಅನ್ನಭಾಗ್ಯ ಸೇವೆಯನ್ನು ಜಾರಿಮಾಡಿದೆ. ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಆಹಾರ ತಲುಪಬೇಕು ಎಂಬ ದೃಷ್ಟಿಯಿಂದ ಸರಕಾರ ಉಚಿತ ಅಕ್ಕಿ ಮತ್ತು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಿದೆ. ಆದರೆ ಐಪಿ ಹೊಸಳ್ಳಿ ಗ್ರಾಮದಲ್ಲಿ ಡೀಲರ್ ಮಜ್ಜಿದ್ ಪಟೇಲ್ ಅವರು ತನ್ನದೇ ಆದ ನಿಯಮಗಳನ್ನು ಸೃಷ್ಟಿಸಿ ಸಾರ್ವಜನಿಕರಲ್ಲಿ ಹಣ ಮತ್ತು ಅಕ್ಕಿ ಪಡೆದು ರೇಷನ್ ನೀಡುತ್ತಿರುವುದು ಖಂಡನೀಯ. ಇಂತಹ ಅನ್ಯಾಯ ಸುಮಾರು ವರ್ಷಗಳಿಂದ ನಡೆಯುತ್ತಿದೆ ಎಂಬುದು ಗ್ರಾಮಸ್ಥರ ಆಕ್ರೋಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಗ್ಯಾರಂಟಿ vs ಸರ್ಕಾರಿ ಉದ್ಯೋಗ: ಹುಸಿ ಕಥನಕ್ಕೆ ಬಲಿಯಾಗುತ್ತಿದ್ದಾರೆಯೇ ಉದ್ಯೋಗಕಾಂಕ್ಷಿಗಳು?

ಈ ರೀತಿ ಜನರನ್ನು ಮೋಸಮಾಡಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿರುವ ಡೀಲರ್ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು ಆತನ ಡೀಲರ್ ಶಿಪ್ ಪರವಾನಿಗೆ ರದ್ದುಪಡಿಸಬೇಕು ಎಂದು ಸ್ಥಳೀಯರು ಆಗ್ರಹ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ...