ಕಲಬುರಗಿ | ಪಟ್ಟಣ ಗ್ರಾಮದಲ್ಲಿಲ್ಲ ಶೌಚಾಲಯಗಳು; ಈಗಲೂ ಬಯಲಿಗೆ ಹೋಗುತ್ತಿರುವ ಮಹಿಳೆಯರು

Date:

ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ 1,600 ಮನೆಗಳಿದ್ದರೂ, ಸರ್ಕಾರದಿಂದ ಸ್ವಚ್ಛ ಭಾರತ್ ಅಡಿಯಲ್ಲಿ ಶಾಚಾಲಯ ವ್ಯವಸ್ಥೆಯನ್ನು ಒದಗಿಲಾಗಿಲ್ಲ. ಹೀಗಾಗಿ, ಈಗಲೂ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಚೆಂಬು ಹಿಡಿದು ಬಯಲಿಗೆ ಹೋಗುವ ಪರಿಸ್ಥಿತಿ ಇದೆ. ಕೂಡಲೇ, ಶೌಚಾಲಯಗಳನ್ನು ಕಟ್ಟಿಸಿಕೊಡಬೇಕು ಎಂಧು ಗ್ರಾಮದ ಹೆಣ್ಣು ಮಕ್ಕಳು ಒತ್ತಾಯಿಸಿದ್ದಾರೆ.

ಗ್ರಾಮದ ನಿವಾಸಿ ಕಸ್ತೂರಿಬಾಯಿ ಮಾತನಾಡಿ, “ಶೌಚಾಲಯ ಇಲ್ಲದೆ ಇರುವ ಕಾರಣ ನಾವೆಲ್ಲ ಬಯಲು ಪ್ರದೇಶಕ್ಕೆ ಹೋಗಬೇಕಾಗಿದೆ. ಊರು ಆಗಸಿಯಲ್ಲಿ ಸುಮಾರು ಗಂಡಸರು ಕುತ್ತಿರುತ್ತಾರೆ ಹಾಗೆ ಅವರ ಮುಂದೆ ಚಂಬು ಹಿಡಿದುಕೊಂಡು ಹೋಗಬೇಕು. ನಾವು ಹಿರಿಯರು ವಯಸ್ಸಾದವರು ಹೇಗೊ ಹೋಗತ್ತೀವಿ. ಸಣ್ಣ ಸಣ್ಣ ಹೆಣ್ಣುಮಕ್ಕಳು ಪರಿಸ್ಥಿತಿ ಏನು? ನಮಗೆ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದು ಅಗ್ರಹಿಸಿದರು.

ಕಮಲಬಾಯಿ ಪಟ್ಟಣ ಗ್ರಾಮದ ನಿವಾಸಿ ಈದಿನ.ಕಾಮ್ ಜೊತೆ ಮಾತನಾಡಿ, “ಮನೆ ಮನೆಗೆ ಶೌಚಾಲಯ ಎಂದು ಮಾಡಿದ್ದಾರೆ. ಆದರೆ, ಅದು ನಾಮಕೆ ವಾಸ್ತೆಗಷ್ಟೇ ಇದೆ. ಶೌಚಾಲಯ ಬಾಗಿಲು ಮುರಿದು ಹೋಗಿವೆ. ಸರಿಯಾದ ರೀತಿಯಲ್ಲಿ ನಿರ್ಮಾಣ ಆಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮದ ನಿವಾಸಿ ಶಿವಲಿಂಗಮ್ಮ ಮಾತನಾಡಿ, “ಮನೆ ಮನೆಗೆ ಶೌಚಾಲಯ ಮಾಡ್ತೀವಿ ಅಂತ ಹೇಳುತ್ತಲೇ ಇದ್ದಾರೆ. ಅದರೆ, ಈವರೆಗೂ ಯಾರ ಮನೆಗೂ ಶೌಚಾಲಯ ನೀಡಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ನಿವಾಸಿ ಜಯಶ್ರೀ ಮಾತನಾಡಿ, “ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ. ನಾವೆಲ್ಲರೂ ರೋಡಿಗೆ ಹೋಗುತ್ತೇವೆ. ನಮ್ಮ ಗ್ರಾಮದಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಹೆಣ್ಣುಮಕ್ಕಳಿಗೆ ಇದರಿಂದ ತುಂಬಾ ಸಮಸ್ಯೆ ಆಗುತ್ತಿದೆ. ಸಾರ್ವಜನಿಕರ ಶೌಚಾಲಯ ಬೇಕೇ ಬೇಕು” ಎಂದು ಅಗ್ರಹಿಸಿದರು.

ವೀರಣ್ಣ ಗೌಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಈದಿನ.ಕಾಮ್ ಪ್ರತಿನಿಧಿಯೊಂದಿಗೆ ಮಾತನಾಡಿ,
“ಪಟ್ಟಣ ಗ್ರಾಮದಲ್ಲಿ ಒಟ್ಟು ಸಾವಿರದ ಅರನ್ನೂರು ಮನೆಗಳಿವೆ. ಎಂಟುನ್ನೂರು ಮನೆಗಳಿಗೆ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಉಳಿದ ಎಂಟುನ್ನೂರು ಮನೆಗಳಿಗೆ ಶೌಚಾಲಯ ನಿರ್ಮಾಣ ಮಾಡುವುದು ಬಾಕಿ ಇದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...