ಕಲ್ಲಡ್ಕ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಫ್ತಾರ್‌ – 2025

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಫ್ತಾರ್ – 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆಯಿಷಾ ವಿದ್ಯಾ ಸಂಸ್ಥೆಗಳ ಸ್ಥಾಪಕಧ್ಯಕ್ಷ ಅಮೀನ್ ಅಹ್ಸನ್ ಉಪವಾಸದ ಮಹತ್ವ ಮತ್ತು ಕುರ್‌ಆನ್‌ ಸಂದೇಶವನ್ನು ನೀಡಿದರು.

“ಯಾವ ರೀತಿ ಮನುಷ್ಯನಿಗೆ ಓರ್ವ ತಂದೆ-ತಾಯಿ ಇರುತ್ತಾರೆಯೋ, ಅದೇ ರೀತಿ ಈ ಲೋಕಕ್ಕೆ ಓರ್ವನೇ ದೇವನು ಮಾತ್ರ ಇರಲು ಸಾಧ್ಯ. ಆ ದೇವನನ್ನು ಅನುಸರಿಸಿ ಈ ಲೋಕದಲ್ಲಿ ಬದುಕಿ ಪರಲೋಕದಲ್ಲಿ ಮೋಕ್ಷ ಪಡೆಯಲು ಪ್ರಯತ್ನಿಸುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿದೆ” ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಕಾಲೇಜಿನ ಖಜಾಂಜಿ ಹೈದರ್ ಅಲಿ ಮಾತನಾಡಿ, ಜೀವನದಲ್ಲಿ ದೇವ ಭಯವನ್ನು ಅಳವಡಿಸಲು ರಂಝಾನ್ ತಿಂಗಳ ಉಪವಾಸ ಆಚರಣೆಯಿಂದ ಹೇಗೆ ಸಾಧ್ಯವೆಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಇಫ್ತಾರ್‌ 1

ಪ್ರಾಂಶುಪಾಲೆ ಡಾ. ಹೇಮಲತಾ ಬಿ ಡಿ ಮಾತನಾಡಿ ಕಾಲೇಜಿನಲ್ಲಿ ಸತತ ಎರಡನೇ ವರ್ಷವೂ ಇಫ್ತಾರ್ ಕೂಟ ಆಯೋಜಿಸಿದ ಆಡಳಿತ ಮಂಡಳಿ ಹಾಗೂ ಸಹಕರಿಸಿದ ಎಲ್ಲ ಸಿಬ್ಬಂದಿ ವರ್ಗದವರಿಗೆ ಮತ್ತು ವಿದ್ಯಾರ್ಥಿಗಳಿಗೆ ವಂದಿಸಿ, ಪ್ರಶಂಸಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಆಡಳಿತ ಮಂಡಳಿಯ ಸಂಚಾಲಕ ಅಮಾನುಲ್ಲ ಖಾನ್ ಅಧ್ಯಕ್ಷೀಯ ಭಾಷಣ ಮಾಡಿ, “ಮನುಷ್ಯನ ಹೃದಯದ ರೋಗಗಳಿಗೆ ಕುರ್‌ಆನ್ ಅತ್ಯುತ್ತಮ ಔಷಧ” ಎಂಬ ಕುರ್‌ಆನ್‌ನ ಸೂಕ್ತದೊಂದಿಗೆ ತಮ್ಮ ಮಾತುಗಳನ್ನು ಕೊನೆಗೊಳಿಸಿದರು. ‌

ಇಫ್ತಾರ್‌ 2

ವೇದಿಕೆಯಲ್ಲಿ ಪ್ರಗತಿಪರ ಕೃಷಿಕ ಜನಾಬ್ ಇದಿನಬ್ಬ, ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಇಮಾರತ್ ಅಲಿ, ಜೊತೆ ಕಾರ್ಯದರ್ಶಿ ಅಬ್ದುಲ್ಲಾಕುಂಞ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕುಮಾರಿ ಮುಫೀದ ಮತ್ತು ಕಾರ್ಯದರ್ಶಿ ಕುಮಾರಿ ನಬೀಸತುಲ್ ಅಫ್ನ ಇದ್ದರು. ಕುಮಾರಿ ಸುಖೈಬ ಖಿರಾಅತ್ ಪಠಿಸಿದರು, ಕುಮಾರಿ ಫಸೀಲ ಸ್ವಾಗತಿಸಿ ಕುಮಾರಿ ಶಮ್ಯ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಈ ಸುದ್ದಿ ಓದಿದ್ದೀರಾ? ಯುಗಾದಿ, ರಂಜಾನ್ ಪ್ರಯುಕ್ತ ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಸಭಾ ಕಾರ್ಯಕ್ರಮದ ನಂತರ ಇಫ್ತಾರ್‌ನ ವ್ಯವಸ್ಥೆ ಮಾಡಲಾಗಿತ್ತು. ಮುಸ್ಸಂಜೆಯ ಪ್ರಶಾಂತವಾದ ವಾತಾವರಣದಲ್ಲಿ, ಕಾಲೇಜಿನ ಮುಂಭಾಗದಲ್ಲಿ ಶಾಂತಿಯುತವಾಗಿ ಶಿಸ್ತಿನಿಂದ ಇಫ್ತಾರ್ ಮಾಡಲಾಯಿತು. ತದನಂತರ ಮಗರಿಬ್‌ ನಮಾಝ್ ಹಾಗೂ ಊಟದ ವ್ಯವಸ್ಥೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...