ಕಮಲನಗರ ಪಟ್ಟಣ ಪಂಚಾಯತಿಯನ್ನಾಗಿ ಮೇಲ್ದರ್ಜೆಗೆ : ಕಾಂಗ್ರೆಸ್‌ ಸರ್ಕಾರದ ಕೊಡುಗೆ ಎಂದ ಭೀಮಸೇನ್‌ರಾವ್‌ ಶಿಂಧೆ

Date:

ಕಮಲನಗರ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್ ಸರಕಾರ ಮಾಡಿರುವ ಕೆಲಸಗಳು ನಾನೇ ಮಾಡುತ್ತಿದ್ದೇನೆ ಎಂದು ಶಾಸಕ ಪ್ರಭು ಚವ್ಹಾಣ ಅವರು ಹೇಳಿಕೊಳ್ಳುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರ ಕ್ಷೇತ್ರದಲ್ಲಿ ಮಾಡದ ಕೆಲಸಗಳು ನಮ್ಮ ಕಾಂಗ್ರೆಸ್ ಸರಕಾರ ಮಾಡುತ್ತಿದೆʼ ಎಂದರು.

ʼಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಅವರಿಂದ ಹೊರತು ಶಾಸಕ ಪ್ರಭು ಚವ್ಹಾಣ ಅವರಿಂದ ಅಲ್ಲ. ಜಿಲ್ಲೆಯವರೇ ಆದ ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸತತ ಪ್ರಯತ್ನದಿಂದ ಆಗಿದೆ. ನಾನೂ ಸಿಎಂ ಸಿದ್ದರಾಮಯ್ಯಯವರಿಗೆ ಮನವಿ ಮಾಡಿದ್ದೆʼ ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‌ʼಕಮಲನಗರ ಪಟ್ಟಣ ಪಂಚಾಯಿತಿ ಆಗುತ್ತಿರುವ ವಿಷಯ ತಿಳಿದ ಶಾಸಕ ಪ್ರಭು ಚವ್ಹಾಣ ಪಟ್ಟಣ ಪಂಚಾಯಿತಿ ಶ್ರೇಯಸ್ಸು ಪಡೆಯಲು, ಮಾಧ್ಯಮದಲ್ಲಿ ಪ್ರಚಾರ ಪಡೆಯವುದು ಸರಿಯಲ್ಲ. ಜನ ಬುದ್ಧಿವಂತರಾಗಿದ್ದಾರೆ. ಬಿಜೆಪಿ ಸರಕಾರದಲ್ಲಿ ಎರಡು ಬಾರಿ ಪ್ರಭು ಚವ್ಹಾಣ ಸಚಿವರಾದ ಅವಧಿಯಲ್ಲಿ ಔರಾದ್ ಪಟ್ಟಣ ಪಂಚಾಯಿತಿಯನ್ನು ಪುರಸಭೆ, ಕಮಲನಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಮಾಡಲು ಏಕೆ ಆಗಿಲ್ಲʼ ಎಂದು ಶಿಂಧೆ ಪ್ರಶ್ನಿಸಿದರು.

ಇದನ್ನೂ ಓದಿ : ಬೀದರ್‌ ವಿಶ್ವವಿದ್ಯಾಲಯದಲ್ಲಿ ‘ಕೀರ್ತನೆಗಳ ಸಂಗ್ರಹ’ ಕೃತಿ ಬಿಡುಗಡೆ

ʼಔರಾದ್ ಕ್ಷೇತ್ರದ ಜನರ ಸಮಸ್ಯೆಗಳು ಅಗತ್ಯ ಅಭಿವೃದ್ಧಿಯ ಬಗ್ಗೆ ನಾನಾ ಯೋಜನೆಗಳು ರೂಪಿಸಿಕೊಂಡು ಸರಕಾರಕ್ಕೆ ಮನವಿ ಮಾಡುವ ಮೂಲಕ ಕೆಲಸಗಳು ಮಾಡುತ್ತಿದ್ದೇನೆ. ಕೆಲಸ ಮಾಡಿರುವುದು ಕಾಂಗ್ರೆಸ್ ಸರಕಾರ ಮತ್ತು ಪೌರಾಡಳಿತ ಸಚಿವರು ಅವರ ಕೆಲಸಕ್ಕೆ ಪ್ರಭು ಚವ್ಹಾಣ ಕೃತಜ್ಞತೆ ಸಲ್ಲಿಸಬೇಕು ಹೊರತು ನಾನೇ ಮಾಡಿದ್ದೇನೆ ಎನ್ನುವುದು ಸರಿಯಾದ ಕ್ರಮವಲ್ಲʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...