ಔರಾದ್ | ಕನಕದಾಸರು ಹಲವು ವ್ಯಕ್ತಿತ್ವಗಳ ಸಂಗಮ

Date:

ಕನಕದಾಸರು ಈ ನಾಡು ಕಂಡ ಕವಿಯು ಹೌದು ಕಲಿಯು ಹೌದು ಎಂದು ಇಂಗ್ಲೆಂಡ್‌ನ ಸಂಶೋಧಕರು ಅಭಿಪ್ರಾಯಪಟ್ಟಿದ್ದರು ಎಂದು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉಪನ್ಯಾಸಕ ದೇವಿದಾಸ ಜೋಶಿ ಹೇಳಿದರು.

ಔರಾದ್ ಪಟ್ಟಣದ ತಹಸೀಲ್ ಆವರಣದಲ್ಲಿ ಸೋಮವಾರ ತಾಲೂಕು ಆಡಳಿತದಿಂದ ನಡೆದ ಕನಕ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ, ‘ವಿದೇಶಿಗರು ಕನಕನಲ್ಲಿನ ಪ್ರತಿಭೆ, ಸಾಮರ್ಥ್ಯ ಹಾಗೂ ಯೋಗ್ಯತೆಯನ್ನು ಮುಕ್ತ ಕಂಠದಿಂದ ಹೊಗಳಿದ್ದಾರೆ’ ಎಂದರು.

ಕನ್ನಡಿಗರು ಕನಕದಾಸರನ್ನು ಇಲ್ಲಿವರೆಗೂ ಅರಿತುಕೊಳ್ಳಲು ಸಾದ್ಯವಾಗಿಲ್ಲ. ಕನಕ ಒಬ್ಬ ಹರಿದಾಸರು ಅಥವಾ ಒಂದು ಸಮುದಾಯದ ವ್ಯಕ್ತಿ ಎಂದು ಪರಿಗಣಿಸದೆ ಅವರು ಹಲವು ವ್ಯಕ್ತಿತ್ವಗಳ ಸಂಗಮ ಎಂಬುದು ಮನನ ಮಾಡಿಕೊಳ್ಳಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಅಧ್ಯಕ್ಷೆ ಸರುಬಾಯಿ ಘುಳೆ ಮಾತನಾಡಿ, ‘ಕನಕದಾಸರು ಬಸವಾದಿ ಶರಣರಂತೆ ಬದುಕಿನ ಆಶಯ ಜನಸಾಮಾನ್ಯರಿಗೆ ತೋರ್ಪಡಿಸಿದ ಮೇರು ವ್ಯಕ್ತಿತ್ವ’ ಎಂದರು.

1001899809

ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ ಮಾತನಾಡಿ, ‘ಇಂದು ಕನಕದಾಸರ ವಿಚಾರಗಳು ನಮ್ಮೆಲ್ಲರ ಬದುಕಿಗೆ ಅವಶ್ಯಕವಾಗಿವೆ’ ಎಂದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷೆ ರಾಧಾಬಾಯಿ ಕೃಷ್ಣ ನರೋಟೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಧೋಂಡಿಬಾ ನರೋಟೆ, ಪಪಂ ಸದಸ್ಯ ಗುಂಡಪ್ಪ ಮುದಾಳೆ, ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಬಿಇಒ ಪ್ರಕಾಶ ರಾಠೋಡ್, ಟಿಎಚ್ಒ ಡಾ. ಗಾಯತ್ರಿ, ವಕೀಲರ ಸಂಘದ ಅಧ್ಯಕ್ಷ ಸಂದೀಪ ಮೇತ್ರೆ, ಗಣಪತಿ ಮೇತ್ರೆ, ಸಂಜೀವ ಮೇತ್ರೆ, ಮಾದಪ್ಪ ಕೋಟೆ, ಸುಧಾಕರ ಕೊಳ್ಳುರ್, ಶಿವಾಜಿರಾವ ಪಾಟೀಲ್, ಸೂರ್ಯಕಾಂತ ಸಿಂಗೆ, ಬಾಲಾಜಿ ಅಮರವಾಡಿ, ಅರ್ಜುನ ಭಂಗೆ, ರಾಜಕುಮಾರ ಮುದಾಳೆ, ಹಣಮಂತ ಮೇತ್ರೆ ಎಕಲಾರ ಸೇರಿದಂತೆ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಇನ್ನಿತರರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಬಸ್ ನಿಲ್ದಾಣ ಹತ್ತಿರದಲ್ಲಿನ ಕನಕದಾಸ ವೃತ್ರದಲ್ಲಿ ಪೂಜೆಗೈದು ಮೆರವಣಿಗೆಗೆ ಪಪಂ ಅಧ್ಯಕ್ಷೆ ಸರುಬಾಯಿ ಘುಳೆ ಚಾಲನೆ ನೀಡಿದರು. ಬಸವೇಶ್ವರ ವೃತ್ರ, ಸಾರ್ವಜನಿಕ ಆಸ್ಪತ್ರೆ, ಅಗ್ನಿಕುಂಡ, ಪೋಲಿಸ್ ಠಾಣೆ, ನ್ಯಾಯಾಲಯ, ಪ್ರವಾಸಿ ಮಂದಿರ ಮಾರ್ಗವಾಗಿ ತಹಸೀಲ್ ಆವರಣ ತಲುಪಿತು.

ಈ ಸುದ್ದಿ ಓದಿದ್ದೀರಾ? ಮನುವಾದದ ಮಡಿವಂತಿಕೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಬಂಡಾಯಗಾರ ಕನಕದಾಸ

ಮೆರವಣಿಗೆಯಲ್ಲಿ ಕಲಬುರ್ಗಿಯ ಡೊಳ್ಳು ಕುಣಿತ ಗಮನ ಸೆಳೆಯಿತು. ವೇದಿಕೆ ಮೇಲೆ ವಿವಿಧ ಶಾಲಾ ಕಾಲೇಜು ಮಕ್ಕಳು ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದರು. ವಿವಿಧ ಶಾಲಾ ಮಕ್ಕಳಿಂದ ಕನಕದಾಸರ ಭಕ್ತಿ ಗೀತೆ ಮತ್ತು ಕೀರ್ತನೆಗಳ ನೃತ್ಯ ಎಲ್ಲರ ಗಮನ ಸೆಳೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...