ಕನಕಪುರ | ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ಹಿನ್ನೆಲೆ: ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿ

Date:

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ.

ಕೂನೂರು ಗ್ರಾಮದಲ್ಲಿ ದಲಿತರೊಂದಿಗೆ ಊರಿನ ಮೇಲ್ವರ್ಗ ಸಮುದಾಯದವರು ಒಳ್ಳೆತ ಬಾಂಧವ್ಯ ಹೊಂದಿದ್ದಾರಾದರೂ, ದೇವಸ್ಥಾನಕ್ಕೆ ಪ್ರವೇಶ ಇರಲಿಲ್ಲ. ಬಸವೇಶ್ವರ, ಆಂಜನೇಯ, ಮಾರಮ್ಮ ಗುಡಿಗಳಿಗೆ ಪರಿಶಿಷ್ಟ ಜನರಿಗೆ ಪ್ರವೇಶ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.25ರ ಬುಧವಾರದಂದು ತಹಶೀಲ್ದಾರ್ ಮಂಜುನಾಥ್, ಸಮಾಜ ಕಲ್ಯಾಣ ಅಧಿಕಾರಿ ಜಯಪ್ರಕಾಶ್, ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣ ಲಮಾಣಿ ಮುಂದಾಳತ್ವದಲ್ಲಿ ಶಾಂತಿ ಸಭೆ ಸೇರಿ ಅರಿವು ಮೂಡಿಸಲಾಯಿತು.

ನಂತರ ಬಸವೇಶ್ವರ, ಆಂಜನೇಯ ಗುಡಿಗಳಿಗೆ ದಲಿತರೊಡನೆ ತಹಶೀಲ್ದಾರರು ಹಾಗೂ ಇನ್ನಿತರ ಅಧಿಕಾರಿಗಳು ಪ್ರವೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂನೂರಿನಲ್ಲಿ ಪರಿಶಿಷ್ಟರಿಗೆ ಹಿಂದಿನಿಂದಲೂ ಗುಡಿಗೆ ಪ್ರವೇಶವಿರಲಿಲ್ಲ. 15 ವರ್ಷದ ಹಿಂದೆ ಜಾತ್ರೆಯ ಸಂದರ್ಭದಲ್ಲಿ ಪರಿಶಿಷ್ಟ ಜನಾಂಗದ ಹುಡುಗನೊಬ್ಬ ನೂಕುನುಗ್ಗಲಿನಿಂದ ಆಯತಪ್ಪಿ ಮೆರವಣಿಗೆಯ ದೇವರನ್ನು ಸ್ಪರ್ಶಿಸಿದ ಘಟನೆ ಗ್ರಾಮಸ್ಥರನ್ನು ಕೆರಳಿಸಿ, ದಲಿತರಿಗೆ ಸಾಮೂಹಿಕವಾಗಿ ಥಳಿಸಿದ ಘಟನೆ ನಡೆದಿತ್ತು.

ಆನಂತರ ಪ್ರತಿ ವರ್ಷದ ಜಾತ್ರೆಯಲ್ಲೂ ಸಹ ಪರಿಶಿಷ್ಟರ ಪೂಜೆಗೆ ತಡೆ ಮಾಡಿದ್ದು, ಪರಿಶಿಷ್ಟರು ತಮಗೆ ಪರಿಚಯವಿರುವ ಮೇಲ್ವರ್ಗದ ಜನಾಂಗದವರಲ್ಲಿ ಕಾಡಿ ಬೇಡಿ ಪೂಜಾ ಸಾಮಗ್ರಿಗಳನ್ನು ನೀಡಿ ಅವರಿಂದ ಪೂಜೆ ಮಾಡಿಸಿಕೊಳ್ಳಬೇಕಿತ್ತು.

ಈ ಬಗ್ಗೆ ಪ್ರತಿಭಟಿಸಿ ಎರಡು ವರ್ಷದ ಹಿಂದೆ ಗ್ರಾಮದ ದಲಿತ ಯುವಕರಾದ ಶ್ರೀನಿವಾಸಮೂರ್ತಿ, ರಾಮು, ಮಾದೇಶ್, “ನಾವೂ ಸಹ ನಿಮ್ಮಷ್ಟೇ ಹಣ ಪಾವತಿಸುತ್ತೇವೆ. ಗುಡಿ ಕಟ್ಟಲು ನಾವೂ ಹಣ ನೀಡಿದ್ದೇವೆ. ನಮಗೂ ಸಮಾನತೆಯಿದೆ. ನಮ್ಮ ಕೇರಿಗೂ ಮೆರವಣಿಗೆ ಬರಲಿ, ನಮ್ಮ ಪೂಜಾ ಸಾಮಗ್ರಿಗಳನ್ನು ಸ್ವೀಕರಿಸಿ ದೇವರ ಪೂಜೆ ಮಾಡಿ” ಎಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಉತ್ತರಿಸಿದ್ದ ಗ್ರಾಮದ ಸವರ್ಣೀಯ ಮುಖಂಡರು, “ಅದು ಆಗುವುದಿಲ್ಲ. ಹಿಂದಿನಿಂದಲೂ ನಡೆದು ಬಂದ ಪದ್ದತಿಯನ್ನು ನಾವು ಬಿಡಲಾಗದು. ನಿಮ್ಮ ಪೂಜೆ ಸಾಮಗ್ರಿಗಳನ್ನು ನೀಡುವುದಾದರೆ ನಾವು ಜಾತ್ರೆಯನ್ನೇ ನಿಲ್ಲಿಸುತ್ತೇವೆ” ಎಂದು ಬಹಿಷ್ಕರಿಸಿದ್ದರು.

ಈ ಬಗ್ಗೆ ಜಿಲ್ಲಾಡಳಿತಕ್ಕೆ ದಲಿತ ಯುವಕರು ದೂರು ನೀಡಿದ್ದರು. ಅಧಿಕಾರಿಗಳಿಂದ ವರದಿ ತರಿಸಿಕೊಂಡು ದೂರಿನಲ್ಲಿ ಸತ್ಯಾಂಶವಿರುವುದನ್ನು ಮನಗಂಡು, ತಹಶೀಲ್ದಾರ್ ಅವರಿಗೆ ತೊಡಕು ಬಗೆಹರಿಸುವಂತೆ ನಿರ್ದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಗ್ರಾಮಕ್ಕೆ ಬಂದ ತಾಲೂಕು ಆಡಳಿತಾಧಿಕಾರಿಗಳು ಎರಡು ಗಂಟೆಗೂ ಹೆಚ್ಚು ಸಭೆ ನಡೆಸಿ ದಲಿತರೊಡನೆ ಗುಡಿ ಪ್ರವೇಶಿಸಿದ್ದಾರೆ.

‘ಊರಗೌಡರು ಹೇಳಿದರೆ ಮಾತ್ರ ಮಾರಿಗುಡಿಯ ಕೀ ನೀಡುತ್ತೇನೆ’ ಎಂದ ಮಹಿಳೆ

ಮಾರಿಗುಡಿಯಲ್ಲಿ ಅಸ್ಪೃಶ್ಯತೆಯ ಕರಾಳತೆ ತಹಶೀಲ್ದಾರ್ ಮಂಜುನಾಥ್ ಅವರಿಗೂ ಬಡಿಯಿತು. ಮಹಿಳೆಯೋರ್ವರು ಊರಗೌಡರು ಹೇಳಿದರೆ ಮಾತ್ರ ಮಾರಿಗುಡಿಯ ಬೀಗದ ಕೀ ನೀಡುತ್ತೇನೆ ಎಂದು ಗುಡಿಯ ಕೀ ಕೊಡಲು ನಿರಾಕರಿಸಿದ ಘಟನೆಯೂ ಜರುಗಿತು.

ಊರಿನ ಮೇಲ್ವರ್ಗ ಸಮುದಾಯಕ್ಕೆ ಸೇರಿದ ಮುಖಂಡರು ಮಾರಿಗುಡಿಗೆ ದಲಿತರ ಪ್ರವೇಶ ನಿರಾಕರಿಸಿ ಊರು ತೊರೆದಿದ್ದರು. ಅರ್ಧ ತಾಸಿಗೂ ಹೆಚ್ಚು ಹೊತ್ತು ಕಾಯಬೇಕಾಯಿತು.

ಹತ್ತು ದಿನಗಳ ಗಡುವು ನೀಡಿದ್ದಲ್ಲದೇ, ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ದಲಿತ ಸಂಘಟನೆಗಳ ಜೆ ಎಂ ಶಿವಲಿಂಗಯ್ಯ, ಮಲ್ಲಿಕಾರ್ಜುನ್, ಪ್ರಶಾಂತ್ ಹೊಸದುರ್ಗ, ಗುರುಮೂರ್ತಿ, ನೀಲಿ ರಮೇಶ್ ಕನಕಪುರ, ನಟರಾಜ್, ಜೀವನ್, ಮಾದೇಶ್, ಶೋಭಾ ಮೆಳೆಕೋಟೆ ಮುಂತಾದವರು ಹಾಜರಿದ್ದರು.

photo 6314303143411827026 y 1
photo 6314303143411827025 y
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...