ಕನಕಪುರ | ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

Date:

ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ಜಾರಿ ಮಾಡಲು ಒತ್ತಾಯಿಸಿ ಕನಕಪುರ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಪ್ರಾಂತ ಕೂಲಿಕಾರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

2004ರಲ್ಲಿ ಎಡಪಕ್ಷಗಳ ಒತ್ತಾಯದಿಂದ ಜಾರಿಯಾದ ಉದ್ಯೋಗ ಖಾತ್ರಿಯಂತಹ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡದೇ ಕೆಲಸ ಕೇಳಿದ ಎಲ್ಲ ಕೂಲಿಕಾರ ಕುಟುಂಬಗಳಿಗೆ ಕೆಲಸ ನೀಡದೇ ನಿರಾಕರಿಸುವ ನಡೆಯನ್ನು ಕಂಚನಹಳ್ಳಿ ಗ್ರಾಮ ಘಟಕದ ಪರವಾಗಿ ಪ್ರಾಂತ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ಎಂ.ಪುಟ್ಟಮಾದು ಖಂಡಿಸಿದರು.

ಉದ್ಯೋಗಖಾತ್ರಿ ಕೆಲಸವನ್ನು ಸಮರ್ಪಕವಾಗಿ ಜಾರಿ ಮಾಡಬೇಕು. ಕೆಲಸ ಕೇಳಿ ನಮೂನೆ 6ರಲ್ಲಿ ಅರ್ಜಿ ಕೊಟ್ಟಿರುವ ಎಲ್ಲ ಕೂಲಿಕಾರ ಕುಟುಂಬಗಳಿಗೆ ಸ್ಥಳದಲ್ಲೇ ಎನ್.ಎಂ.ಆರ್ ತೆಗೆದು ಕೆಲಸ ನೀಡಬೇಕು. ಈಗ ಇರುವ 349 ಕೂಲಿ 100 ದಿನ ಕೆಲಸದ ಬದಲು 600 ರೂ ಕೂಲಿ ಮತ್ತು 200 ಮಾನವ ದಿನವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳಿನ ಏರ್‍ಪಾಟು, ಪ್ರಥಮ ಚಿಕಿತ್ಸಾ ಪೆಟ್ಟಿಗೆಯಂತ ಮೂಲಭೂತ ಸೌಕರ್ಯವನ್ನು ಕಡ್ಡಾಯವಾಗಿ ನೀಡಬೇಕು. ಕಾಯಕ ಬಂಧುವಿಗೆ ಗುರುತಿನ ಚೀಟಿ ನೀಡಿ ಪ್ರೋತ್ಸಾಹಧನವನ್ನು ಅವರ ಖಾತೆಗೆ ಜಮಾ ಮಾಡಬೇಕು. ಉದ್ಯೋಗ ಖಾತ್ರಿ ಕೆಲಸದಲ್ಲಿ ಯಂತ್ರದ ಹಾವಳಿಯನ್ನು ತಪ್ಪಿಸಿ ಗುತ್ತಿಗೆದಾರರನ್ನು ನಿಯಂತ್ರಿಸಬೇಕು ಎಂದರು.

ಮನವಿ ಸ್ವೀಕರಿಸಿ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ, ಯಂತ್ರದ ಮೂಲಕ ಉದ್ಯೋಗ ಖಾತ್ರಿಯ ಕೆಲಸವನ್ನು ಗುತ್ತಿಗೆದಾರರ ನಿರ್ವಹಿಸಿದ್ದರೆ ಒಂಬುಡ್ಸ್‌ಮನ್ ಮುಂದಾಳತ್ವದಲ್ಲಿ ತನಿಖೆ ನಡೆಸಿ, ಬಿಲ್ಲನ್ನು ತಡೆ ಹಿಡಿಯುವ ಕೆಲಸ ಮಾಡಲಾಗುವುದು. ಹೆಚ್ಚಿನ ಕೆಲಸ ಹಾಗೂ ಕೂಲಿ ನೀಡುವ ವಿಚಾರಕ್ಕೆ ಮೇಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಪತ್ರ ಬರೆದು ಕ್ರಮ ವಹಿಸಲಾಗುವುದು ಎಂದರು.

ಇದನ್ನು ಓದಿದ್ದೀರಾ? ತುಮಕೂರು | ಸರ್ವರ್ ಸಮಸ್ಯೆ : ಹಾಸ್ಟೆಲ್ ಪ್ರವೇಶದಿಂದ ವಂಚಿತರಾದ ವಿದ್ಯಾರ್ಥಿಗಳು

ಈ ಸಂದರ್ಭದಲ್ಲಿ ಬಿ.ಎಂ.ಶಿವಮಲ್ಲಯ್ಯ, ಸಹಕಾರ್ಯದರ್ಶಿ, ರಾಜ್ಯ ಸಹಕಾರ್ಯದರ್ಶಿ ಬಿ ಹನುಮೇಶ್, ರಾಮಯ್ಯ ರಾಜ್ಯ ಸಮಿತಿ ಸದಸ್ಯರು ಲಕ್ಷ್ಮೀ ಕಂತೂರು, ರಾಜ್ಯ ಸಮಿತಿ ಸದಸ್ಯರು, ಲಕ್ಷ್ಮಮ್ಮ ಕಂಚನಹಳ್ಳಿ ಗ್ರಾಮ ಘಟಕದ ಅಧ್ಯಕ್ಷರು, ರಾಜಮ್ಮ ಉಪಾಧ್ಯಕ್ಷರು ಮಂಚೇಗೌಡ, ಮಂಗಳಮ್ಮ ಹಾಗೂ ಇನ್ನಿತರ ಮುಖಂಡರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...