ಕನಕಪುರ | ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರ ಪರದಾಟ: ಸರಿಪಡಿಸಲು ಆಗ್ರಹಿಸಿ ಮನವಿ

Date:

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಬೂದಿಕೇರಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಈ ರಸ್ತೆಯ ನೀಲನಕ್ಷೆಯೇ ಅವೈಜ್ಞಾನಿಕವಾಗಿದೆ. ವಾಹನ ಸವಾರರು ಹಾಗೂ ರಸ್ತೆ ಪಕ್ಕದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಪರದಾಡುವ ಸನ್ನಿವೇಶ ಎದುರಾಗಿದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಆರೋಪಿಸಿದರು.

ರೈತ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳೊಡನೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಲಿಂಗಯ್ಯರಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಬೂದಿಕೇರಿ ರಸ್ತೆ ಸಂಪೂರ್ಣ ವಾಣಿಜ್ಯ ಮಳಿಗೆಗಳಿಂದ ಕೂಡಿದೆ. ರಸ್ತೆ ಕಾಮಗಾರಿ ಅತ್ಯಂತ ನಿಧಾನವಾಗಿ ನಡೆದಿತ್ತು. ಇದರಿಂದಾಗಿ ಸಾರ್ವಜನಿಕರು ದೈನಂದಿನ ಪ್ರಯಾಣದಲ್ಲಿ ತೀವ್ರ ತೊಡಕು ಅನುಭವಿಸಿದ್ದರು” ಎಂದು ತಿಳಿಸಿದರು.

ಮನವಿ 5

ಕಾಮಗಾರಿ ಮುಗಿದು ರಸ್ತೆ ಸಂಚಾರ ಆರಂಭವಾಯಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ ಇನ್ನೊಂದು ತರದ ತೊಡಕು ಆರಂಭ ಆಗಿದೆ. ಕಾಂಕ್ರೀಟಿನಲ್ಲಿ ಸರಿಯಾದ ಪ್ರಮಾಣದ ಸಿಮೆಂಟ್ ಬಳಸಿಲ್ಲ. ಬಳಸಿದ ಡಸ್ಟ್ ಪ್ರಮಾಣ ಹೆಚ್ಚಾದ್ದರಿಂದ ಜಲ್ಲಿ ಕಲ್ಲುಗಳು ಎದ್ದು ಬಂದಿವೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ ಮಾತನಾಡಿ, ಕೆಲವೇ ದಿನಗಳಲ್ಲೇ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಉಂಟಾಗಿದ್ದು ವಾಹನ ಸವಾರರು ಓಡಾಡಲು ಅಡಚಣೆ ಆಗಿದೆ. ಅವೈಜ್ಞಾನಿಕವಾಗಿ ರಸ್ತೆ ವಿಭಜಕವನ್ನು ಅಗಲವಾಗಿ ನಿರ್ಮಿಸಿದ ಪರಿಣಾಮ ರಸ್ತೆ ಕಿರಿದಾಗಿದೆ. ಈ ಕಿರಿದಾದ ವಾಣಿಜ್ಯ ರಸ್ತೆಯಲ್ಲಿ ವಾಹನಗಳ ನಿಲುಗಡೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಪಾದಚಾರಿ ಮಾರ್ಗವನ್ನು ರಸ್ತೆಯಿಂದ ಎತ್ತರವಾಗಿ ಕಟ್ಟಿರುವುದರಿಂದ ಮನೆಯ ಗೇಟ್ ಒಳಗೆ ವಾಹನ ತೆಗೆದುಕೊಂಡು ಹೋಗಲು ಸಾಧ್ಯವಾಗದೆ ರಸ್ತೆಯಲ್ಲೇ ನಿಲ್ಲಿಸುವಂತಾಗಿದೆ ಎಂದು ವಿವರಿಸಿದರು.

ಇಂತಹ ಕಳಪೆಯಾದ ಅವೈಜ್ಞಾನಿಕ ಕಾಮಗಾರಿ ನಿರ್ಮಿಸಿದ ಎಸ್‌ಸಿಸಿ ಕನ್ಷ್ಟ್ರಕ್ಷನ್‌ನ ಮಾಲಿಕರು ಹಾಗೂ ಗುತ್ತಿಗೆದಾರರಾದ ದಿನೇಶ್‌ ಅವರಿಗೆ ಬಿಲ್ ಪಾವತಿಸದೆ ಕಪ್ಪು ಪಟ್ಟಿಗೆ ಸೇರಿಸಿ. ಕಾನೂನು ಕ್ರಮಕೈಗೊಂಡು, ಸಂಪೂರ್ಣವಾಗಿ ಜನೋಪಯೋಗಿ ಆಗುವಂತೆ ರಸ್ತೆಯನ್ನು ಪುನರ್ ನಿರ್ಮಿಸಲು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಸೆ. 5 | ಗೌರಿ ಲಂಕೇಶ್‌ಗೆ 7ನೇ ವರ್ಷದ ನುಡಿನಮನ: ಬೆಂಗಳೂರಿನಲ್ಲಿ ‘ಗೌರಿ ನೆನಪು’ ಕಾರ್ಯಕ್ರಮ

ಈ ಸಭೆಯಲ್ಲಿ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಚೀಲೂರು ಮುನಿರಾಜ್, ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ, ಕನ್ನಡ ಭಾಸ್ಕರ್, ಕಹಳೆ ರುದ್ರೇಶ್, ಜಯಕರ್ನಾಟಕ ಜನಪರ ವೇದಿಕೆಯ ಮುಖಂಡರಾದ ಹಾರೋಹಳ್ಳಿ ಗಿರೀಶ್, ಕುಮಾರ್, ಪರಮೇಶ್, ಸಾಗರ್, ಅಂಗಡಿ ರಮೇಶ್, ರೈತಸಂಘದ ಶಿವರಾಮು, ಕೆ ಬಿ ಬಸವರಾಜು, ಮಾದೇಶ, ಇನ್ನೂ ಇತರ ಪದಾಧಿಕಾರಿಗಳು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...