ಕನಕಪುರ | ಶಾಸಕ ಸ್ಥಾನದಿಂದ ಮುನಿರತ್ನರನ್ನು ವಜಾಗೊಳಿಸಿ: ದಲಿತ, ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

Date:

ಕನಕಪುರದಲ್ಲಿ ಶುಕ್ರವಾರದಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಂದಾಳತ್ವದಲ್ಲಿ ಶಾಸಕ ಮುನಿರತ್ನರನ್ನು ಶಾಸಕ ಸ್ಥಾನ ವಜಾ ಮಾಡಿ, ಗಡಿಪಾರು ಮಾಡಬೇಕೆಂದು ಪ್ರತಿಭಟನೆ ನಡೆಸಲಾಯಿತು.

ನಗರದ ಚನ್ನಬಸಪ್ಪ ವೃತ್ತದಲ್ಲಿರುವ ಅಶೋಕ ಸ್ಥಂಭದ ಬಳಿ ನೂರಾರು ಪ್ರತಿಭಟನಾಕಾರರು ಜಮಾವಣೆಗೊಂಡು, ಮುನಿರತ್ನ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಎಂಜಿ ರಸ್ತೆಯ ಮೂಲಕ ತಾಯಿ ಮತ್ತು ಮಗು ಆಸ್ಪತ್ರೆ ವೃತ್ತದವರೆಗೆ ಸಾಗಿದರು.

ನಂತರ, ಅವರು ರೂರಲ್ ಕಾಲೇಜು ಮುಂಭಾಗ ತಲುಪಿ, ರಸ್ತೆಯಲ್ಲಿ ನೂರಾರು ಜನರಿಂದ ಬೃಹತ್ ಮಾನವ ಸರಪಳಿ ರಚಿಸಿದರು. ಈ ಪ್ರಕ್ರಿಯೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಹಿರಿಯ ದಲಿತ ಮುಖಂಡ ಜೆ ಎಂ ಶಿವಲಿಂಗಯ್ಯ ಮಾತನಾಡಿ, “ಮುನಿರತ್ನ ದಲಿತ ಹಾಗೂ ಒಕ್ಕಲಿಗ ಸಮುದಾಯವನ್ನು ನಿಂದಿಸಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ. ಇಂತಹ ವ್ಯಕ್ತಿಯನ್ನು ಒಂದು ಕ್ಷಣವೂ ಇಲ್ಲಿ ಇರಿಸಬಾರದು, ಶಾಶ್ವತವಾಗಿ ಗಡಿಪಾರು ಮಾಡಬೇಕು. ಇಂತಹವರಿದ್ದರೆ ದಲಿತರು, ಹಿಂದುಳಿದವರು ಹಾಗೂ ಮಹಿಳೆಯರು ಶಾಂತಿಯಾಗಿ ಬದುಕಲು ಸಾಧ್ಯವಿಲ್ಲ” ಎಂದರು.

ಕನಕಪುರ2

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, “ಶಾಸಕರ ಹೇಳಿಕೆ ಅಮಾನವೀಯವಾಗಿದೆ. ಬಿಜೆಪಿ ತಕ್ಷಣವೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ನ್ಯಾಯಾಲಯವು ಇಂತಹವರಿಗೆ ಜಾಮೀನು ನೀಡುವುದು ಸರಿಯಲ್ಲ. ಇವರು ಪರಿವರ್ತನೆಗೊಳ್ಳುವುದು ಕಷ್ಟ. ಇಂತಹವರು ಸಮಾಜಕ್ಕೆ ಅಪಾಯವಾಗಿರುವುದರಿಂದ ಅವರನ್ನು ಜೈಲಿನಲ್ಲಿರಿಸಬೇಕು” ಎಂದು ಹೇಳಿದರು.

ದಲಿತ ಮುಖಂಡ ಮಲ್ಲಿಕಾರ್ಜುನ ಮಾತನಾಡಿ, ಶಾಸಕ ಮುನಿರತ್ನರ ಹಿನ್ನೆಲೆಯನ್ನು ಗಮನಿಸಿದರೆ ರೌಡಿಸಂ ಹಿನ್ನೆಲೆಯಿಂದ ಬಂದವರು. ಇಂತವರಿಂದ ಕೀಳು ವರ್ತನೆಯಲ್ಲದೆ ಮತ್ತೇನು ನಿರೀಕ್ಷಿಸಲು ಸಾಧ್ಯ ಎಂದರು.

ರೈತ ಸಂಘದ ಚೀಲೂರು ಮುನಿರಾಜು ಮಾತನಾಡಿ, ಯಾವುದೇ ಸಮುದಾಯದ ಅವಹೇಳನ ಕ್ಷಮೆಗೆ ಅರ್ಹವಲ್ಲ ಎಂದು ಹೇಳಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಮಂಜುನಾಥ್,”ನಿಮ್ಮ ಮನವಿಯನ್ನು ಸರ್ಕಾರಕ್ಕೆ ತಲುಪಿಸಿ ಪ್ರತಿಕ್ರಿಯೆ ಬಂದ ನಂತರ ತಮಗೆ ತಿಳಿಸುತ್ತೇನೆ” ಎಂದರು.

ಇದನ್ನು ಓದಿದ್ದೀರಾ? ಉಡುಪಿ | ವಿದ್ಯಾರ್ಥಿಗಳು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು: ಚಿಂತಕ ಶಿವಸುಂದರ್

ಪ್ರತಿಭಟನೆಯಲ್ಲಿ ದಲಿತಪರ ಮುಖಂಡರಾದ ಪ್ರಶಾಂತ್ ಹೊಸದುರ್ಗ, ಮಳಗಾಳು ದಿನೇಶ್, ನಟರಾಜ್, ನೀಲಿ ರಮೇಶ್, ನವೀನ್ ಕುಮಾರ್, ಛಲವಾದಿ ನವೀನ್, ರಾಜ್ ಕೆಆರ್‌ಎಸ್ ಪಕ್ಷದ ಶಿವಮ್ಮ, ಗೋಪಿ, ಸೋಮಣ್ಣ, ಜೀವನ್, ಕನ್ನಡ ಭಾಸ್ಕರ್, ಶೇಷಣ್ಣ , ಮಲ್ಲೇಶ್, ಶಾಂತಣ್ಣ, ಗುಂಡಣ್ಣ, ಕುರುಬರಹಳ್ಳಿ ನವೀನ್, ನಲ್ಲಹಳ್ಳಿ ಶ್ರೀನಿವಾಸ್, ಮುಂತಾದವರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...