ಬೀದರ್‌ | ಕನ್ನಡವೆಂಬುದು ಅನ್ನ ಮತ್ತು ಅರಿವಿನ ಮಾರ್ಗ : ಭೀಮಶಂಕರ ಬಿರಾದರ್

Date:

ಕನ್ನಡ ಎಂಬುದು ಏಕಕಾಲದಲ್ಲಿ ಜ್ಞಾನ ಮಾರ್ಗ, ಅರಿವಿನ ಮಾರ್ಗ ಮತ್ತು ಅನ್ನದ ಮಾರ್ಗವಾಗುತ್ತದೆ. ಲೋಕಜ್ಞಾನ ಮೂಡಿಸುವ ಕನ್ನಡ ಸಾಹಿತ್ಯ ಬದುಕಿನ ಅಸ್ತಿತ್ವವನ್ನು ಹಾಗೂ ಸಾಂಸ್ಕೃತಿಕ ಪ್ರಜ್ಞೆಯನ್ನು ರೂಪಿಸುತ್ತದೆ ಎಂದು ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ. ಭೀಮಾಶಂಕರ ಬಿರಾದಾರ ಹೇಳಿದರು.

ಬಸವಕಲ್ಯಾಣ ನಗರದ ಎಸ್.ಎಸ್.ಕೆ. ಬಸವೇಶ್ವರ ಪದವಿ ಕಾಲೇಜಿನಲ್ಲಿ ಬೀದರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ʼಕನ್ನಡ ಸಾಹಿತ್ಯ ಮತ್ತು ಉದ್ಯೋಗಾವಕಾಶಗಳುʼ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, “ವಸಾಹತುಶಾಹಿ ಮತ್ತು ಜಾಗತೀಕರಣ ನಮ್ಮ ನೆಲದ ಜ್ಞಾನ ಪರಂಪರೆಯನ್ನು ವಿಸ್ಮೃತಿಗೆ ತಳ್ಳುತಿವೆ. ತಾಯ್ನುಡಿ ಉಳಿದರೆ ಈ ನೆಲಕ್ಕೊಂದು ಅಸ್ತಿತ್ವ ಮತ್ತ ಅಸ್ಮಿತೆ ಇದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಕನ್ನಡ ಭಾಷೆಯನ್ನು ಸಮಾಜೋ-ಸಾಂಸ್ಕೃತಿಕ ಮತ್ತು ಆರ್ಥಿಕ ನೆಲೆಯಲ್ಲಿ ಕಾಣುವ ಅಗತ್ಯ ಈ ಕಾಲದ್ದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ, ಕೆ.ಎ.ಎಸ್., ಐಎಎಸ್ ಗಳಲ್ಲಿ ಕನ್ನಡ ಸಾಹಿತ್ಯಕ್ಕೆ ನೀಡಿದ ಮಹತ್ವವನ್ನು ವಿದ್ಯಾರ್ಥಿಗಳು ಅರಿಯಬೇಕಿದೆ. ತಾಯ್ನುಡಿಯನ್ನು ಅನ್ನದ ಹಾಗೂ ಬದುಕಿನ ಮಾತಾಗಿಸುವ ಹೊಣೆಗಾರಿಕೆ ಸರಕಾರದ ಮೇಲಿದೆ. ಕನ್ನಡ ಒಂದು ಕಡೆಗೆ ಅನ್ನಕ್ಕೆ ಮೂಲವಾದರೆ, ಇನ್ನೊಂದು ಕಡೆಗೆ ವೈಚಾರಿಕ, ಬೌದ್ಧಿಕ, ಸಂಶೋಧನಾತ್ಮಕ, ವಿಮರ್ಶಾತ್ಮಕ ನಿಲುವುಗಳಿಗೆ ದಾರಿಯಾಗಿದೆ. ಲೋಕದ ಗ್ರಹಿಕೆಗೆ ಸಾಹಿತ್ಯದ ಅಗತ್ಯವಿದೆ. ವ್ಯಕ್ತಿಯ ಅಸ್ತಿತ್ವ, ಸಾಮಾಜಿಕ ಆಯಾಮ, ಬದುಕಿನ ಆತಂಕಗಳನ್ನು ಅರ್ಥೈಸಿಕೊಳ್ಳಲು ಕನ್ನಡ ಸಾಹಿತ್ಯ ಹಲವು ಒಳನೋಟಗಳು ರೂಪಿಸುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ ಪ್ರೊ. ಆರ್. ಡಿ. ಬಾಲಕಿಲೆ ಅವರು ಮಾತನಾಡಿ, “ಪ್ರತಿಯೊಂದು ಕೋರ್ಸ್‌ಗೂ ಅದರದೇ ಆದ ಅಸ್ತಿತ್ವವಿರುತ್ತದೆ. ಯಾವುದೇ ಕೋರ್ಸುಗಳ ಬಗೆಗೆ ಸಿನಿಕತೆ, ತಾತ್ಸಾರಗಳು ಇರಬಾರದು. ವಿದ್ಯಾರ್ಜನೆಗಾಗಿ
ಆಧುನಿಕ ತಂತ್ರಜ್ಞಾನಗಳ ಬಳಕೆಯಾಗಲಿ. ಬರೀ ಮನರಂಜನೆಯ ಪರಿಕರಗಳಾಗಿ ಮೊಬೈಲ್‌ ಬಳಕೆಯಾಗದಿರಲಿ. ಪ್ರತಿಯೊಂದು ಕೋರ್ಸಿನಲ್ಲಿ ಕೌಶಲ್ಯ ಪಡೆಯುವ ಮೂಲಕ ಜೀವನ ಸುಧಾರಿಸುತ್ತದೆ. ಧನಾತ್ಮಕ ಚಿಂತನೆಗಳು ಬದುಕು ರೂಪಿಸುವ ಶಕ್ತಿ ಪಡೆದಿವೆ” ಎಂದರು.

ಎನ್‌ಎಸ್‌ಎಸ್  ಶಿಬಿರಾಧಿಕಾರಿ ಪ್ರೊ. ವಿಠೋಬಾ ದೊಣ್ಣೆಗೌಡರು ಮಾತನಾಡಿ, “ಕನ್ನಡ ಭಾಷೆಯ ಜೀವಂತಿಕೆ ಇರುವುದೇ ಅದು ತಿಳಿಸಿದ ಮೌಲ್ಯಗಳಲ್ಲಿ. ಕನ್ನಡ ಪರಂಪರೆ ಎಂದಿಗೂ ಆತ್ಮವಿಶ್ವಾಸ, ಆತಂಕಗಳನ್ನು ಎದುರಿಸುವ ಸ್ಥೈರ್ಯ ಬೆಳೆಸಿದೆ. ಭಾಷೆ ಅನ್ನಕೊಡುವ ಗುಣದಿಂದ ಶ್ರೇಷ್ಠತೆ ಪಡೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಆದೇಶ ಪಾಲಿಸದ ಕಲ್ಯಾಣ ಮಂಡಳಿ; ಹೈಕೋರ್ಟ್‌ ಅಸಮಾಧಾನ

ಕಾರ್ಯಕ್ರಮದಲ್ಲಿ ಎಸ್.ಎಸ್.ಕೆ.ಬಿ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಎವಲೆ, ಪ್ರೊ. ಶಾಂತಕುಮಾರ ಬಾಬನಗೋಳ್, ಡಾ. ಸುರೇಶ ಎಚ್. ಆರ್, ಡಾ. ಶಿವಕುಮಾರ ಪಾಟೀಲ, ಶಾಂತಕುಮಾರ ಭುರೆ, ವಿನಾಯಕ ಮುಳ್ಳೂರು, ಲಕ್ಷ್ಮಿಬಾಯಿ ಭಂಕೂರ, ಕಲ್ಯಾಣಪ್ಪ ನಾವದಗಿ ಇದ್ದರು. ನೇತ್ರಾ ನಿರೂಪಿಸಿದರು, ಅಜಯ ಸ್ವಾಗತಿಸಿದರು, ಭಾಗ್ಯಶ್ರೀ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...