ಮೈಸೂರು | ವಿಚಾರಗಳ ಪರಿಣಾಮಕಾರಿ ಅಭಿವ್ಯಕ್ತಿಗೆ ಕನ್ನಡ ಪ್ರಬಲ ಭಾಷೆ : ಸಾಹಿತಿ ಸತೀಶ್ ಜವರೇಗೌಡ

Date:

ಕನ್ನಡ ಭಾಷೆ ನಮ್ಮ ಹೃದಯದ ಭಾಷೆ. ಹಾಗೆಯೇ ಸಂವಹನದ ಭಾಷೆಯ ಜೊತೆಗೆ ಅನ್ನದ ಭಾಷೆಯೂ ಆಗಿದೆ. ನಮ್ಮ ಭಾವನೆ ಮತ್ತು ವಿಚಾರಗಳ ಪರಿಣಾಮಕಾರಿ ಅಭಿವ್ಯಕ್ತಿಗೆ ಸಹಕಾರಿಯಾದ ಪ್ರಬಲ‌ ಮಾಧ್ಯಮವೂ ಆಗಿದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಅಭಿಪ್ರಾಯಪಟ್ಟರು.

ಮೈಸೂರು ನಗರದ ದೇವರಾಜ ಮೊಹಲ್ಲಾದಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅದಮ್ಯ ರಂಗಶಾಲೆಯ ವತಿಯಿಂದ ನಡೆದ ಪಿಯುಸಿ ಪಠ್ಯಾಧಾರಿತ ರಂಗ ಪ್ರದರ್ಶನದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ‘ಅದಮ್ಯ ಕನ್ನಡ ಪ್ರೇಮಿ – ಚಿಗುರು ಪ್ರತಿಭಾ ಪುರಸ್ಕಾರ’ ಪ್ರದಾನಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅನಾದರ ಭಾವವನ್ನಾಗಲಿ, ಕೀಳರಿಮೆಯ ಭಾವವನ್ನಾಗಲಿ ಬೆಳಸಿಕೊಳ್ಳಬಾರದು. ಬದಲಿಗೆ ‘ನಮ್ಮ ಬದುಕನ್ನು ಕಟ್ಟಿಕೊಡುವ ಭಾಷೆ’ ಎಂಬ ಪ್ರೀತಿ‌ ಮತ್ತು ಅಭಿಮಾನವಿಟ್ಟುಕೊಳ್ಳಬೇಕು. ದಿನನಿತ್ಯದ ಎಲ್ಲಾ ರೀತಿಯ ಸಂವಹನವನ್ನು ಕನ್ನಡ ಭಾಷೆಯಲ್ಲಿಯೇ ಮಾಡಬೇಕು. ಆಗ ಭಾಷೆ ಉಳಿಯುತ್ತದೆ ಮತ್ತು ಬೆಳೆಯುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241113 WA0162

ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಒಂದು ತಲೆಮಾರಿನ ಅನುಭವಗಳಿರುತ್ತವೆ. ಇಂತಹ ಪುಸ್ತಕಗಳನ್ನು ಓದುವ ಮೂಲಕ ಅದನ್ನು ತಮ್ಮದಾಗಿಸಿಕೊಂಡು, ಜ್ಞಾನವನ್ನು ವಿಸ್ತರಿಸಿಕೊಳ್ಳುವ ಅಗತ್ಯವಿದೆ. ಅದರೊಂದಿಗೆ ಕನ್ನಡ ದಿನಪತ್ರಿಕೆಗಳನ್ನೂ ಓದುವ ಹವ್ಯಾಸ ಮೈಗೂಡಿಸಿಕೊಂಡು ಮುನ್ನಡೆದಾಗ ಪ್ರಚಲಿತ ವಿಷಯ ಜ್ಞಾನ ಲಭಿಸಲು ಸಾಧ್ಯ. ಆದ್ದರಿಂದ ಸಾಹಿತ್ಯದ ಪುಸ್ತಕಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಿರಿಯ ಉಪನ್ಯಾಸಕ ಎಂ. ಬಾಲರಾಜ್ ಮಾತನಾಡಿ, ಮೈಸೂರು ಸಾಂಸ್ಕೃತಿಕ ನಗರಿಎಂಬ ಹಿರಿಮೆಯನ್ನು ಹೊಂದಿದೆ. ಇಲ್ಲಿ‌ ಸಾಹಿತಿಗಳು, ವಿಚಾರವಂತರು, ಮೇಧಾವಿಗಳು, ಬುದ್ಧಿಜೀವಿಗಳಿದ್ದಾರೆ. ಅವರ ಒಡನಾಟವನ್ನು ವಿದ್ಯಾರ್ಥಿಗಳು ಹೊಂದುವ ಮೂಲಕ, ತಾವು ಅವರಂತೆಯೇ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ‘ಬುಲ್ಡೋಜರ್ ನ್ಯಾಯ’ ನಿಷೇಧ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಜಿ. ರಮಾನಂದ್ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಉಪನ್ಯಾಸಕ ಜಿ. ಮಹೇಶ್, ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರು ಮಂಡ್ಯ ಹಾಗೂ ಕಾಲೇಜಿನ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿಯ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿನಿಯರಾದ ಆರ್. ಅಮೃತಾ, ಸಂಜನಾ ಮತ್ತು ಮಾನಸ ಅವರಿಗೆ ‘ಅದಮ್ಯ ಕನ್ನಡ ಪ್ರೇಮಿ – ಚಿಗುರು ಪ್ರತಿಭಾ ಪುರಸ್ಕಾರ’ ಪ್ರದಾನ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...