ಬೀದರ್ | ಗ್ರಾಮೀಣ ಪ್ರತಿಭೆ ಗುರುತಿಸುವ ಕಾರ್ಯ ಶ್ಲಾಘನೀಯ

Date:

  • ಕಷ್ಟದ ಜೀವನ ನಮಗೆ ಶಿಸ್ತಿನ ಪಾಠ ಕಲಿಸುತ್ತದೆ
  • ಬದುಕು ಎಂಬುದು ಸುಖ-ದುಃಖಗಳ ಸಮ್ಮಿಲನ

ಕನ್ನಡ ಸಾಹಿತ್ಯ ಪರಿಷತ್ತು ನಗರ ಪ್ರದೇಶಕ್ಕೆ ಸೀಮಿತವಾಗದೆ ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಭಾವಂತ ಸಾಹಿತಿ, ಕಲಾವಿದರನ್ನು ಗುರುತಿಸಿ ನಾಡಿನ ಜನರಿಗೆ ಪರಿಚಯಿಸುತ್ತಿರುವುದು ಅಭಿನಂದನಾರ್ಹ ಕಾರ್ಯ ಎಂದು ನಿವೃತ್ತ ಶಿಕ್ಷಕ ಬಸವಣಪ್ಪ ಐನೂಲೆ ಅಭಿಪ್ರಾಯಪಟ್ಟರು.

ಬೀದರ್ ತಾಲೂಕಿನ ಬಗದಲ್ ಗ್ರಾಮದ ಬಹುಮುಖ ಪ್ರತಿಭಾವಂತ ಕಲಾವಿದ ವೈಜಿನಾಥ ಸಜ್ಜನಶೆಟ್ಟಿ ಅವರ ಮನೆಯಲ್ಲಿ ಬೀದರ್ ಜಿಲ್ಲಾ ಮತ್ತು ತಾಲೂಕು ಕಸಾಪ ಆಯೋಜಿಸಿದ ’66ನೇಯ ಮನೆಯಂಗಳದಲ್ಲಿ ಮಾತು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪ ನಡೆಸುತ್ತಿರುವ ‘ಮನೆಯಂಗಳದಲ್ಲಿ ಮಾತು’ ಕಾರ್ಯಕ್ರಮದ ಜೊತೆಗೆ ಗ್ರಾಮೀಣ ಭಾಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿದರೆ ಕನ್ನಡ ಭಾಷೆ, ನಾಡು-ನುಡಿಗೆ ಹೆಚ್ಚಿನ ಗೌರವ ನೀಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಕಸಾಪ ಕೆಲಸ ಮಾಡಬೇಕು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಷ್ಟದ ಜೀವನ ಶಿಸ್ತಿನ ಪಾಠ ಕಲಿಸುತ್ತದೆ. ಬದುಕು ನಾವು ಅಂದುಕೊಂಡಂತೆ ಇರದೇ ಸುಖ-ದುಃಖಗಳ ಸಮ್ಮಿಲನವಾಗಿದ್ದು, ಬಡತನ ಬದುಕಿನ ದೌರ್ಭಾಗ್ಯವಲ್ಲ, ಸಾಧನೆ ಮಾಡಲು ಅದೊಂದು ಸದಾವಕಾಶ. ಅವಕಾಶಗಳಿಲ್ಲವೆಂದು ಕೈಕಟ್ಟಿ ಕೂಡದೆ ನಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡು ಮುಂದುವರೆಯಬೇಕು. ನವರಸ ಕಲಾಲೋಕದ ಅಧ್ಯಕ್ಷ ವೈಜಿನಾಥ ಸಜ್ಜನಶೆಟ್ಟಿ ತಮ್ಮ ಬದುಕಿನ ಸ್ವಾರಸ್ಯಕರ ಸಂಗತಿಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಈ ಸುದ್ದಿ ಓದಿದ್ದೀರಾ? ಬೀದರ್ | ‘ಇಂದಿರಾ ಕ್ಯಾಂಟೀನ್’ಗೆ ಬೇಕಿದೆ ಕಾಯಕಲ್ಪ

ಕಸಾಪ ಬೀದರ್ ತಾಲೂಕು ಅಧ್ಯಕ್ಷ ಎಂ ಎಸ್ ಮನೋಹರ ಅಧ್ಯಕ್ಷತೆ ವಹಿಸಿದರು. ಕಸಾಪ ಜಿಲ್ಲಾ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಆಶಯ ನುಡಿ ನುಡಿದರು. ಡಾ. ಸಂಗಪ್ಪ ತವಡಿ, ಬಸವರಾಜ ಹೂಗಾರ ಹಾಗೂ ಡಾ. ಬಸವರಾಜ ಬಲ್ಲೂರ ಅವರುಗಳು ಸಂವಾದ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಘಟಕದ ಉಪಾಧ್ಯಕ್ಷ ರಾಘವೇಂದ್ರ ಮುತ್ತಂಗಿ, ತಾಲೂಕು ಗೌರವ ಕಾರ್ಯದರ್ಶಿ ಜಗನ್ನಾಥ ಕಮಲಾಪೂರೆ, ಶ್ರೀ ರೇಣಸಿದ್ದೆಶ್ವರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶಾಂತಕುಮಾರ ಸ್ವಾಮಿ, ಶಿವಸ್ವಾಮಿ, ಬಸವರಾಜ ಹಮ್ಮಾ, ವೀರಶೆಟ್ಟಿ ದೇಸಾಯಿ, ಪ್ರಭುರಾವ ಹಲಬುರ್ಗಿ, ಗುರುನಾಥ ರಾಜಗೀರಾ, ವೈಜಿನಾಥ ಬಂಪಳ್ಳಿ, ಕಲ್ಯಾಣರಾವ ನೇಳಗೆ, ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ಟಿ ಎಂ ಮಚ್ಛೆ, ಬಸವರಾಜ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...