ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

Date:

ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮುಂಬೈ ಸೇರಿದಂತೆ ಹಲವೆಡೆ ಬ್ಯಾಂಕಿಂಗ್‌ ವೃತ್ತಿಯ ಬಳಿಕ ನಿವೃತ್ತಿ ಪಡೆದು ಬೆಂಗಳೂರಿನಲ್ಲಿ ನೆಲೆಸಿದ್ದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 1936ರ ಏಪ್ರಿಲ್ 4ರಂದು ಜನಿಸಿದ ಇವರು, ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದು, ಬ್ಯಾಂಕಿಂಗ್ ಪರೀಕ್ಷೆ ಉತ್ತೀರ್ಣರಾಗಿದ್ದರು. ಮುಂಬೈಯಲ್ಲಿ ಕೆನರಾ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಸೇರಿ ಬೆಳಗಾವಿ, ಗೋವಾ, ಧಾರವಾಡ, ದೆಹಲಿ, ಚೆನ್ನೈ ಮತ್ತು ಬೆಂಗಳೂರುಗಳಲ್ಲಿ ಕಾರ್ಯನಿರ್ವಹಿಸಿ 1996ರಲ್ಲಿ ನಿವೃತ್ತರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಬರೆಯುತ್ತಿದ್ದ ವೈದ್ಯರು ಬಳಿಕ ಕಾದಂಬರಿಯತ್ತ ಜಿಗಿದರು. ‘ಹಳ್ಳ ಬಂತು ಹಳ್ಳ’ ಕಾದಂಬರಿಗೆ 2004ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು 2008ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಹಲವು ಷರತ್ತುಗಳೊಂದಿಗೆ ಕಾಂಗ್ರೆಸ್‌ಗೆ ದಸಂಸ ಬೆಂಬಲ

ಶ್ರೀನಿವಾಸ ವೈದ್ಯರು ಕನ್ನಡದ ಅಪರಂಜಿ ಹಾಸ್ಯ ಪತ್ರಿಕೆಯ ಬರಹಗಾರರು. ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದ ಇವರು, ‘ಸಂವಾದ’ ಎನ್ನುವ ಸಾಂಸ್ಕೃತಿಕ ಸಂಘಟನೆ ಸ್ಥಾಪಿಸಿದ್ದರು. ಅಲ್ಲಿ ಕನ್ನಡ ನಾಡಿನ ಖ್ಯಾತ ಬರಹಗಾರರಿಂದ ಭಾಷಣ, ಸಂವಾದ, ವಾಚನ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.

‘ತಲೆಗೊಂದು ತರತರ’, ‘ಮನಸುಖರಾಯನ ಮನಸು’, ‘ರುಚಿಗೆ ಹುಳಿಯೊಗರು’ ಇವರ ಲಲಿತ ಪ್ರಬಂಧಗಳ ಸಂಕಲನಗಳು. ‘ಅಗ್ನಿಕಾರ್ಯ’ ʼಕಪ್ಪೆ ನುಂಗಿದ ಹುಡುಗʼ ಸಣ್ಣ ಕತೆಗಳ ಸಂಕಲನಗಳು. ʼಕರ್ನಲ್‍ನಿಗೆ ಯಾರೂ ಬರೆಯುವುದೇ ಇಲ್ಲʼ ಎಂಬ ಕೃತಿ ಮಾರ್ಕ್ವೇಝ್‍ನ ಕಾದಂಬರಿಯ ಅನುವಾದವಾಗಿದೆ.

ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರ ಮನಸುಖರಾಯನ ಮನಸು ಕೃತಿಗೆ, 2003ರಲ್ಲಿ ’ಪರಮಾನಂದ ಪ್ರಶಸ್ತಿ’,
ಹಾಗೂ 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...