ಕಣ್ವ ಹಗರಣ | ಸಿಬಿಐ ತನಿಖೆ ನಡೆಸುವಂತೆ ಸಂತ್ರಸ್ತರ ಆಗ್ರಹ

Date:

1,500 ಕೋಟಿ ರೂಪಾಯಿ ವಂಚನೆಯಾದ ಕಣ್ವ ಸಹಕಾರ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ರಾಜ್ಯದ ಸಂತ್ರಸ್ತರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಾದ್ಯಂತ 23,000ಕ್ಕೂ ಹೆಚ್ಚು ಠೇವಣಿದಾರರು ಕಣ್ವ ಹಗರಣದಲ್ಲಿ ಹಣ ಕಳೆದುಕೊಂಡಿದ್ದೇವೆ. ಹಗರಣದ ತನಿಖೆ ನಡೆಸಿ, ತಮಗೆ ನ್ಯಾಯ ಒದಗಿಸುವಂತೆ ಹಲವು ಭಾರಿ ಮನವಿ ಮಾಡಿದರೂ, ಸರ್ಕಾರಗಳು ಕೇವಲ ಭರವಸೆಯನ್ನಷ್ಟೇ ನೀಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ, ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಕಣ್ವ ಹಗರಣದ ಹಕ್ಕುದಾರರ ಹಿತರಕ್ಷಣಾ ವೇದಿಕೆಯ ಮುಖಂಡರು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಶಶಿಲ್ ಜಿ ನಮೋಶಿ ಭೇಟಿ ಮಾಡಿದ್ದಾರೆ. ಹಗರಣದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

“45 ತಿಂಗಳ ತನಿಖೆಯಲ್ಲಿ ಕೇವಲ ಒಂದು ಮಧ್ಯಂತರ ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗಳನ್ನು ಬಂಧಿಸುವಲ್ಲ ತನಿಖಾ ತಂಡ ವಿಫಲವಾಗಿದೆ. ತಮ್ಮ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಸಂಪನ್ಮೂಲಗಳಿಲ್ಲದೆ ನರಳುತ್ತಿರುವ ಸಾವಿರಾರು ಜನರು ನ್ಯಾಯ ಸಿಗದೆ ಪರದಾಡುತ್ತಿದ್ದಾರೆ” ಎಂದು ವೇದಿಕೆಯ ಆಡಳಿತಾಧಿಕಾರಿ ಮುರಳೀಧರ ಲಕಣ್ಣವರ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1985ರಲ್ಲಿ ‘ಶ್ರೀ ಕಣ್ವ ಸೌಹಾದ್ರ ಸಹಕಾರಿ ಕ್ರೆಡಿಟ್ ಲಿಮಿಟೆಡ್‌’ನಲ್ಲಿ ಆರ್‌ಡಿ ಮತ್ತು ಎಫ್‌ಡಿಗಳ ರೂಪದಲ್ಲಿ ಹಣವನ್ನು ಠೇವಣಿ ಮಾಡುವಂತೆ ಜನರನ್ನು ಗುಂಪೊಂದು ಪ್ರೇರೇಪಿಸಿತ್ತು. 5.5 ವರ್ಷಗಳಲ್ಲಿ 12% ಬಡ್ಡಿದರ ಅಥವಾ ಠೇವಣಿ ದ್ವಿಗುಣಗೊಳಿಸುವ ಭರವಸೆಯನ್ನೂ ಆ ಗುಂಪು ನೀಡಿತ್ತು. ಅವರ ಮಾತುಗಳನ್ನು ನಂಬಿದ ಹಲವರು ಲಕ್ಷಾಂತರ ರೂಪಾಯಿ ಹಣವನ್ನು ಠೇವಣಿ ಇಟ್ಟಿದ್ದರು. ಅವರಲ್ಲಿ ಕೆಲವರು 2019ರ ಅಕ್ಟೋಬರ್‌ನಲ್ಲಿ ಹಣವನ್ನು ಹಿಂಪಡೆಯಲು ಮುಂದಾದಾಗ ಹಗರಣ ಬಯಲಿಗೆ ಬಂದಿತ್ತು.

ಅಂದಿನ ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದರು. ಸಾರ್ವಜನಿಕ ಒತ್ತಡ ಕೇಳಿಬಂದ ಹಿನ್ನೆಲೆ ಪ್ರಕಣವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ 2023ರ ಜನವರಿಯಲ್ಲಿ ಭರವಸೆ ನೀಡಿದ್ದರು. ಆದರೆ, ಅವರ ಮಾತು ಭರವಸೆಯಾಗಿಯೇ ಉಳಿಯಿತು.

ಸಂತ್ರಸ್ತರಲ್ಲಿ ಒಬ್ಬರಾಗಿರುವ ರಾಜಾಜಿನಗರದ ನಿವಾಸಿ ವಿಮಲಾ ಅವರು 2018ರಲ್ಲಿ ತಮ್ಮ ಉಳಿತಾಯದ ಹಣ 5 ಲಕ್ಷವನ್ನು ಎಫ್‌ಡಿ ಇಟ್ಟಿದ್ದರು. ಬರುವ ಹಣದಲ್ಲಿ ತಮ್ಮ ಅಸ್ವಸ್ಥ ಮಗನಿಗೆ ಚಿಕಿತ್ಸೆ ಮತ್ತು ಶಿಕ್ಷಣ ಕೊಡಿಸಲು ಇಚ್ಛಿಸಿದ್ದರು. ಆದರೆ, ಈಗ ಅವರು ಮೋಸಹೋಗಿದ್ದಾರೆ. ಅವರ ಪತಿ ಕೂಡ ಎರಡು ವರ್ಷಗಳ ಹಿಂದೆ ಸಾವಪ್ಪಿದ್ದಾರೆ. ಇದೆಲ್ಲದರ ಪರಿಣಾಮ ಅವರು ದೈನಂದಿನ ಜೀವನಕ್ಕೂ ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...