ಬೀದರ್‌ | ಹಿಂದಿ ಸಪ್ತಾಹ ಆಚರಣೆ ಕೈಬಿಡಲು ಕರವೇ ಒತ್ತಾಯ

Date:

  • ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು.
  • ಹಿಂದಿ ಸಪ್ತಾಹ ಆಚರಣೆ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕು.

ರಾಜ್ಯ ಸೇರಿದಂತೆ ಹಿಂದಿಯೇತರ ರಾಜ್ಯಗಳಲ್ಲಿ ಕೇಂದ್ರ ಸರಕಾರ ಸೆ. 14ರಂದು ಹಿಂದಿ ಸಪ್ತಾಹ ಕಾರ್ಯಕ್ರಮ ಆಚರಿಸಲು ಸೂಚಿಸಿರುವುದು ಸರಿಯಲ್ಲ. ಸ್ಥಳೀಯ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ಹೀಗಾಗಿ ಹಿಂದಿ ಸಪ್ತಾಹ ಆಚರಣೆ ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಭಾಲ್ಕಿ ತಾಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಪ್ರಧಾನಿ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಾಲೂಕಾಡಳಿತಕ್ಕೆ ಸಲ್ಲಿಸಿದರು.

“ಕೇಂದ್ರ ಸರಕಾರ ಹಿಂದಿ ಹೇರಿಕೆ ನೆಪದಲ್ಲಿ ಹಿಂದಿ ಸಪ್ತಾಹ ಆಚರಿಸುತ್ತಿರುವುದು, ಭಾರತ ಒಕ್ಕೂಟ ರಾಷ್ಟ್ರ, ಅಖಂಡ ಭಾರತದ ಬುಡದಲ್ಲಿಯೇ ಕೊಡಲಿ ಪೆಟ್ಟು ಹಾಕುತ್ತಿದೆ. ಆದರೆ ಅಂದಿನ ರಾಷ್ಟ್ರ ಪ್ರೇಮಿ, ಸ್ವಾತಂತ್ರ ಹೋರಾಟಗಾರರು
ಸಂವಿಧಾನದಲ್ಲಿಯೇ ಲಿಖಿತ ರೂಪದಲ್ಲಿ ಎಲ್ಲ ಭಾಷೆಗಳನ್ನು ಸಮಾನವಾದ ಸ್ಥಾನ ಮಾನ ನೀಡುವ ವಾಗ್ದಾನವಿದೆ. ಆದರೆ ಇಂದಿನ ದಿನಮಾನ ಕಾಲದಲ್ಲಿ ಹಿಂದಿ ಮಾತ್ರ ರಾಷ್ಟ್ರ ಭಾಷೆ ಎಂದು ಹೇರಿಕೆ ಮಾಡಿ, ಎಲ್ಲ ರಾಜ್ಯಗಳಿಂದ ರಜಸ್ವಿ ಪಡೆದು ಹಿಂದಿ ಅಭಿವೃದ್ಧಿಗೆ ಕೈ ಹಾಕುವುದು ನಾವು ಒಪ್ಪುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಸಾವಿರಾರು ವರ್ಷಗಳ ಇತಿಹಾಸವಿದೆ. ರಾಜ್ಯದಲ್ಲಿ ಕನ್ನಡವೇ ಸರ್ವಸ್ವ ನಮಗೆ ಕನ್ನಡವೇ ರಾಷ್ಟ್ರ ಭಾಷೆ, ಇತರೆ ಯಾವುದೇ ಇಲ್ಲ. ಕನ್ನಡವೇ ಆಡಳಿತ ಭಾಷೆ, ರೂಢಿ ಭಾಷೆ ನಡೆ – ನುಡಿ ಎಲ್ಲವೂ ಕನ್ನಡ ಅದನ್ನು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ. ಕೂಡಲೇ ಕೇಂದ್ರ ಸರಕಾರ ಆಚರಿಸುವ ಹಿಂದಿ ಸಪ್ತಾಹ ಆಚರಣೆ ಕೂಡಲೇ ಕೈಬಿಟ್ಟು ಅಖಂಡ ಭಾರತದ ಸಿದ್ಧಾಂತ ಕಾಪಾಡಬೇಕೆಂದು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

ಈ ಸಂದರ್ಭದಲ್ಲಿ ಕರವೇ ಪ್ರಮುಖರಾದ ಮಾಳಸ್ಕಾಂತ ವಾಘೆ, ಬಸವರಾಜ ಕಾರಬಾರಿ, ಭದ್ರೇಶ ಸ್ವಾಮಿ, ಲೋಕೇಶ ಪಾಟೀಲ್, ಚೇತನ ಬಿರಾದಾರ್, ಸಂಗಮೇಶ ಮಾತ್ರಾAಢ, ಸಾಹಿಲ್ ಮಾಸುಲ್ದಾರ, ಅಭೀಷೇಕ ಸ್ವಾಮಿ, ರಾಹುಲ ಶೀರೂರೆ, ದಯಾನಂದ ಮೇತ್ರೆ, ನರೇಶ ಗಾಯಕವಾಡ, ಕಿರಣ ಜೋಳದಾಪಗೆ, ಅಭೀಷೇಕ ಬಿರಾದಾರ್, ರಾಹುಲ ಜಾಧವ, ರೋಹಿತಸಿಂಗ ಹಜಾರಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...