ಉಡುಪಿ‌ | ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ದುರ್ಬಳಕೆ, ಕಠಿಣ ಕ್ರಮಕ್ಕೆ ಎಸ್ಪಿಗೆ ದೂರು

Date:

ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು ಪತ್ರಕರ್ತರ ಸೂಗಿನಲ್ಲಿ ಆಕ್ರಮ ಚಟುವಟಿಕೆ ‌ನಡೆಸಲಾಗುತ್ತಿದ್ದು ಇದಕ್ಕೆ ಕೂಡಲೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ‌ಮಾಡಿ‌ ದುರ್ಬಳಕೆ ಮಾಡದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಮಾ. 8ರಂದು ದೂರು ನೀಡಿಲಾಯಿತು.

ಕೆಲವೊಂದು ಯೂಟ್ಯೂಬರ್ಸ್ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯರಾಗಿರುವವರು ತಾವು ಪತ್ರಕರ್ತರು ಎಂದು ಹೇಳಿಕೊಂಡು ಸರಕಾರಿ ಅಧಿಕಾರಿಗಳಿಗೆ ಪೊಲೀಸರು ಹಾಗೂ ಜನಪ್ರತಿನಿಧಿಗಳ ಬಳಿ ಮಾಹಿತಿ ಪಡೆದು, ವ್ಯಾಪಾರಸ್ಥರಿಗೆ ಬೆದರಿಸುವ ಕೆಲಸ ಮಾಡುತ್ತಿರುವುದು ಸಂಘದ ಗಮನಕ್ಕೆ ಬಂದಿರುತ್ತದೆ.

ಪತ್ರಕರ್ತರೆಂದು ಬಿಂಬಿಸಿ ವಾಹನಗಳಲ್ಲಿ ತಿರುಗಾಡುವ ನಕಲಿ ಪತ್ರಕರ್ತರು, ಯೂಟ್ಯೂಬರ್‍ಸ್‌ಗಳು ಹಾಗೂ ಸಾಮಾಜಿಕ ಜಾಲತಾಣ ಖಾತೆ ನಿರ್ವಹಿಸುವವರು ಆಧಾರ ರಹಿತ ಸುದ್ದಿಗಳನ್ನು ಪ್ರಕಟಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವುದರ‌‌ ಜೊತೆಗೆ ಪತ್ರಕರ್ತರ ಘನತೆಯ ದಕ್ಕೆ ತರುವ ಕೆಲಸ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ ಆರ್‌ಎನ್‌ಐ ಅಥವಾ ಟ್ರಾಯ್‌ನ ಅಡಿಯಲ್ಲಿ ನೋಂದಾವಣೆಯಾದ ಮುದ್ರಣ ಮಾಧ್ಯಮ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅಧಿಕೃತ ಪತ್ರಕರ್ತರಿಗೆ ಮಾತ್ರ ವಾಹನಗಳಲ್ಲಿ ಹಾಗೂ ಗುರುತಿನ ಚೀಟಿ ಹೊಂದಿರುವ ಪತ್ರಕರ್ತರು ಮೀಡಿಯಾ ಎಂಬ ನಾಮಫಲಕ‌ ಅಳವಡಿಸಲು ರಾಜ್ಯ ಸಂಘದಿಂದ ಸೂಚನೆ ಇದ್ದು ಆದರೆ ಇಂದು ಯೂಟ್ಯೂಬರ್‍ಸ್ ಎಂಬ ನಕಲಿ ಪತ್ರಕರ್ತರು ಮೀಡಿಯಾ ಸ್ಟಿಕ್ಕರ್‌ನ್ನು ತಮ್ಮ ವಾಹನಗಳಲ್ಲಿ ಹಾಗೂ ತಮ್ಮ ಗುರುತಿನ ಚೀಟಿಯಲ್ಲಿ ಮೀಡಿಯಾ ಎಂಬ ಪದವನ್ನು ಬಳಸಿಕೊಂಡು ದುರುಪಯೋಗ ಮಾಡುತ್ತಿದ್ದಾರೆ. ಇದರಿಂದ ಅಸಲಿ ಹಾಗೂ ನಕಲಿ ಪತ್ರಕರ್ತರು ಯಾರೆಂಬುದು ತಿಳಿಯದೆ ಜನರು ಗೊಂದಲಕ್ಕೀಡಾಗುವ ಘಟನೆಗಳು ನಡೆಯುತ್ತಿದೆ. ನಕಲಿ ಪತ್ರಕರ್ತರು ತಮ್ಮ ವಾಹನ ಹಾಗೂ ಗುರುತಿನ ಚೀಟಿಯಲ್ಲಿ ಮೀಡಿಯಾ ಪದವನ್ನು ಬಳಸುವುದನ್ನು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘವು ಖಂಡಿಸಿದ್ದು‌ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ಸಲ್ಲಿಸಲಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಡಾ ಅರುಣ್ ಕುಮಾರ್ ತಕ್ಷಣವೇ ನಕಲಿ ಪತ್ರಕರ್ತ ಬಗ್ಗೆ ಮಾಹಿತಿ ಕಲೆ ಹಾಕಿ ಕ್ರಮ ಕೈಗೊಳ್ಳುವ ದಾಗಿ ಭರವಸೆ ನೀಡಿದ್ದಾರೆ ಇದೇ ವೇಳೆ ನಗರ ಪಿಎಸ್ ಐ ಸಂದೀಪ್ ಶೆಟ್ಟಿಯವರಿಗೆ ಸೂಚನೆ ‌ನೀಡಿದ್ದಾರೆ. ಮುಂದೆಯೂ ಇದೇ ರೀತಿ ನಕಲಿ ಪತ್ರಕರ್ತರು ಮೀಡಿಯಾ ಪದವನ್ನು ಬಳಸಿದ್ದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಕಲಿ ಪತ್ರಕರ್ತರ ಮಾಹಿತಿ ಪೊಲೀಸರಿಗೆ ನೀಡಲಿದ್ದು ಅಂತವರ ವಿರುದ್ಧ ಹೋರಾಟ ನಡೆಸಲಿದೆ.

ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಷರೀಫ್, ಉಪಾಧ್ಯಕ್ಷ ಹರೀಶ್ ಸಚ್ಚೇರಿಪೇಟೆ, ಜಿಲ್ಲಾ ಸಮಿತಿ ಸದಸ್ಯರಾದ ಉದಯ ಕುಮಾರ್, ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ಜತೆ ಕಾರ್ಯದರ್ಶಿ ವಾಸುದೇವ ಭಟ್, ಕೋಶಾಧಿಕಾರಿ ಕೆ.ಎಂ. ಖಲೀಲ್, ಸದಸ್ಯರಾದ ರಮಾನಂದ ಅಜೆಕಾರು, ಹರಿಪ್ರಸಾದ್ ನಂದಳಿಕೆ, ಸತೀಶ್ ಶೆಟ್ಟಿ, ಸಂಪತ್ ನಾಯಕ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...