ಉಡುಪಿ | ಕಾರ್ಕಳದ ಮಿಯ್ಯಾರು ಗ್ರಾಮ ಪಂಚಾಯತ್ ನಲ್ಲಿ ಬಾರಿ ಗೋಲ್ ಮಾಲ್

Date:

ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ‌ನಲ್ಲಿ‌ ನಡೆದಿದೆ.

ಮಿಯ್ಯಾರು ಗ್ರಾಮ ಪಂಚಾಯತ್ ಬಾರಿ ಅವವ್ಯಹಾರ ಹಾಗೂ ಭ್ರಷ್ಟಾಚಾರ ನಡೆದಿರುವ ಬಗ್ಗೆ ಪ್ರಶ್ನೆ ಹಾಗೂ ಗಂಭೀರ ಆರೋಪ ಹೊರಿಸಿದ ರಾಜೇಶ್ ಅವರು ಲೆಕ್ಕಪತ್ರದಲ್ಲಿ ಮೂರು ಪ್ಯಾನ್ ದುರಸ್ತಿಗೆ 13 ಸಾವಿರಕ್ಕೂ ಅಧಿಕ ಹಣವನ್ನು ವ್ಯಯ ಮಾಡಿದ್ದೀರಿ ನೀವು ಏನು ವೈಂಡಿಂಗ್ ಗೆ ಬೆಳ್ಳಿಯ ವಯರ್ ಅನ್ನು ಬಳಸಿದ್ದೀರಾ? ಎಂದು ಅವರು ಪ್ರಶ್ನಿಸಿದರು. ಈ ವೇಳೆ ಪಿಡಿಓ ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಕಕ್ಕಾಬಿಕ್ಕಿಯಾಗಿ ಅವರು ಸರಿಯಾದ ಮಾಹಿತಿ ‌ನೀಡದೇ ಉಡಾಫೆ ಉತ್ತರ ನೀಡಿದ್ದೇ ವಿವಾದಕ್ಕೆ ‌ಕಾರಣವಾಯಿತು. ಗ್ರಾಪಂ ಸದಸ್ಯ ಡೆನಿಯಲ್ ರೇಂಜರ್ ಮಾತನಾಡಿ ಪಿಡಿಓ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಗ್ರಾಮ ಸಭೆಯಲ್ಲಿ ನಡೆದ ಪಗ್ರತಿ ಪರಿಶೀಲನೆ ವರದಿಯನ್ನು ಸಂಬಂಧ ಪಟ್ಟ ಅಧಿಕಾರಿಗಳ ಅಥವಾ ಜನಪತ್ರಿನಿಧಿಗಳಿಗ ಗಮನಕ್ಕೆ ತರಲಾಗಿದೆಯೇ? ತರಲಾಗಿದ್ದಲ್ಲಿ ಅದರ ದಾಖಲೆಯನ್ನು ಸಭೆಗೆ ಒದಗಿಸುವಂತೆ ಪಟ್ಟು ಹಿಡಿದ್ದಾರೆ. ಈ ವೇಳೆ‌ ಪಿಡಿಓ ಉತ್ತರಿಸಿ ಮಾಹಿತಿ ನೀಡಿರುವುದಾಗಿ ಸುಳ್ಳು ಹೇಳಿಕೆ ನೀಡಿದ್ದೆ ಮತ್ತಷ್ಟು ಅಕ್ರೋಶಕ್ಕೆ ಕಾರಣವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರಿಗೆ ಮಾಹಿತಿ ನೀಡಿದೆ ಕಾಟಚಾರಕ್ಕಾಗಿ ಗ್ರಾಮ ಸಭೆ ‌ನಡೆಸಲಾಗುತ್ತಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕೋರಂ ಇಲ್ಲದೇ ಸಭೆ ನಡೆಸುವಂತೆ ಇಲ್ಲ ಅದ್ದರಿಂದ ಈ ಗ್ರಾಮ ಸಭೆ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ಒಂದೇ ದಿನದಲ್ಲಿ ಏಳು ಗ್ರಾಮ ಸಭೆಗಳನ್ನು ನಡೆಸಲಾಗಿದೆ. ಅದು ಅಲ್ಲದೇ ಅಧ್ಯಕ್ಷರ ಮೇಲೆ ಹಣಕಾಸಿನ ಅರೋಪ ಜೊತೆಗೆ ಹಕ್ಕುಚ್ಯುತ್ತಿ ಇದ್ದು ಅವರು ಯಾವುದೇ ಸಭೆಯಲ್ಲಿ ಅಧ್ಯಕ್ಷರಾಗಿ ಭಾಗವಹಿಸುವಂತಿಲ್ಲ. ಇಷ್ಟೆಲ್ಲಾ ಗೊತ್ತಿದ್ದರೂ ಪಿಡಿಓ‌ ಮಾತ್ರ ಸಾರ್ವಧಿಕಾರಿಯಂತೆ ವರ್ತಿಸಿರುವುದು ಸರಿಯಲ್ಲ ಎಂದು ಡೇನಿಯಲ್ ರೇಂಜರ್ ಆರೋಪಿದ್ದಾರೆ.

ಗಲಾಟೆ ಗದ್ದಲ ನಡೆಯುತ್ತಿದ್ದರೂ ಅಧ್ಯಕ್ಷೆ ಸನ್ಮತಿ ನಾಯಕ್ ಮಾತ್ರ ‌ಮೌನಕ್ಕೆ ಜಾರಿದ್ದು ಬದಲಾಗಿ ಸದಸ್ಯ
ಗಿರೀಶ್ ಅಮಿನ್ ಅವರೇ ಎಲ್ಲದಕ್ಕೂ ಉತ್ತರ ನೀಡುತ್ತಿರುವುದು ಸಾರ್ವಜನಿಕರು ಆಕ್ಷೇಪ ಎತ್ತಿದ್ದಾಗ ಅಧ್ಯಕ್ಷರು ತನ್ನ ಪರವಾಗಿ ಸದಸ್ಯರು ಉತ್ತರ ನೀಡುತ್ತಿದ್ದಾರೆ ಎಂದು ಸಬೂಬು ನೀಡಿದರು ಮಾತ್ರವಲ್ಲದೆ ಕೋರಂ ಇಲ್ಲ ಎಂಬ ಗೊಂದಲ ಸಾರ್ವಜನಿಕರಲ್ಲಿ ಮೂಡುತ್ತಿದ್ದಂತೆ ಸಬೆಯನ್ನು ಮುಂದೂಡಿದರು.

ಪಿಡಿಓ ‌ನಾಗರಾಜ್ ವಿರುದ್ದ ಭ್ರಷ್ಟಾಚಾರದ ಆರೋಪ!
ಪಿಡಿಓ‌ ಅವರ ಕಾರ್ಯವ್ಯಾಪ್ತಿಗೆ ಬಾರದ ಪ್ರದೇಶಕ್ಕೆ ತೆರಳಿ ಅನಧಿಕೃತ ಮರಳುಗಾರಿಗೆ ಬೆಂಬಲಿಸಿ ಅವರಿಂದ ಮಾಮೂಲಿ ಪಡೆದುಕೊಂಡು ಯಾವುದೇ ಕ್ರಮ ಕೈಗೊಳ್ಳದೇ‌ ಇರುವುದು ಹಲವು ಅನುಮಾನಕ್ಕೆ ‌ಎಡೆಮಾಡಿಕೊಟ್ಟಿದೆ. ಈ ಬಗ್ಗೆ ನೊಡೆಲ್ ಅಧಿಕಾರಿ ಮೇಲಾಧಿಕಾರಿ ಗಮನಕ್ಕೆ ತಂದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವೇದಿಕೆಯಲ್ಲಿ ರಾಜೇಶ್ ನೆಲ್ಸನ್ ಡಿಸೋಜ, ಸೀತಾ, ಲೇನಿ ವೈಲೆಟ್ ರೇಂಜರ್, ಇಂದಿರಾ, ಶೋಬಾ, ರೇವತಿ ನಾಯಕ್, ಶೋಭಾ ಶೆಟ್ಟಿ, ಸುಮನಾ, ನವೀನ್ ಪೂಜಾರಿ, ಪ್ರಶಾಂತ್ ಪೂಜಾರಿ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...