ಉಡುಪಿ | ಕಾರ್ಕಳ – ಪಡುಬಿದ್ರೆ ಟೋಲ್ ಗೇಟ್‌ಗೆ ವಿರೋಧ: ಆ. 24ರಂದು ಬೃಹತ್ ಪ್ರತಿಭಟನೆ

Date:

ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿರುವ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇದರ ವಿರುದ್ಧ ಜನಾಂದೋಲನ ರೂಪಿಸಲು ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಟೋಲ್ ಗೇಟ್ ಹೋರಾಟ ಸಮಿತಿಯ ಸುಹಾಸ್ ಹೆಗ್ಡೆ ನಂದಳಿಕೆ ಹೇಳಿದರು.

ಅವರು ಇಂದು ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “ಪಡುಬಿದ್ರೆ-ಕಾರ್ಕಳ ಹಳ್ಳಿ ಪ್ರದೇಶವಾಗಿದ್ದು ಹೆದ್ದಾರಿ ಆದ ಬಳಿಕ ಸ್ವಲ್ಪ ಮಟ್ಟಿನ ಬೆಳವಣಿಗೆ ಕಾಣುತ್ತಿದೆ. ಸುಮಾರು 40ಕ್ಕೂ ಹೆಚ್ಚಿನ ಹಳ್ಳಿಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು, ಸುಂಕ ವಸೂಲಾತಿ ಕೇಂದ್ರ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಿಂದ 4 ಕಿಲೋ ಮೀಟರ್ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಹೆಜಮಾಡಿ ಟೋಲ್ ಗೇಟ್ ಕಾರ್ಯನಿರ್ವಹಿಸುತ್ತಿದೆ. ಈ ರಾಜ್ಯ ಹೆದ್ದಾರಿಯಲ್ಲಿ ದಿನನಿತ್ಯ ಹಳ್ಳಿಯ ಜನರು ತಮ್ಮ ದಿನ ನಿತ್ಯದ ಕೆಲಸಗಳಿಗೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದು, ಸುಂಕದ ಹೊರೆ ಜನಸಾಮಾನ್ಯರ ಮೇಲೆ ಅತೀ ಗಂಭೀರ ಪರಿಣಾಮ ಬೀರುತ್ತದೆ. ಅದಕ್ಕಾಗಿ ಕಾರ್ಕಳ-ಪಡುಬಿದ್ರೆ ಹೆದ್ದಾರಿ ಅವಲಂಬಿಸಿರುವ ಸುಮಾರು 40ಕ್ಕೂ ಹೆಚ್ಚಿನ ಹಳ್ಳಿಯ ಎಲ್ಲಾ ಜನ ಸಾಮಾನ್ಯರು ಪಕ್ಷಾತೀತವಾಗಿ ಹೋರಾಡಲು ತಯಾರಿ ನಡೆಸಿದ್ದೇವೆ” ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, “ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ಎಲ್ಲ ಧರ್ಮದ ಧಾರ್ಮಿಕ ಮುಖಂಡರು, ಎಲ್ಲ ಜಾತಿ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು, ಸಮಾಜ ಸೇವಾ ಸಂಸ್ಥೆಗಳು, ಉದ್ಯಮಿಗಳು, ಕೈಗಾರಿಕೆಗಳು, ವರ್ತಕರು, ಎಲ್ಲ ಸಂಘ-ಸಂಸ್ಥೆಗಳು, ಬಸ್ಸು ಚಾಲಕ-ಮಾಲೀಕರು, ರಿಕ್ಷಾ ಚಾಲಕ-ಮಾಲೀಕರು, ಟ್ಯಾಕ್ಸಿ ಅಸೋಸಿಯೇಶನ್, ಕ್ರಷರ್ ಉದ್ಯಮಿಗಳು, ಕಲ್ಲು ಗಣಿಗಾರಿಕೆಯ ಉದ್ಯಮಿಗಳು, ಕೃಷಿಕರು ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಅದರಂತೆ ಎಲ್ಲ ಸಿದ್ಧತೆ ಮಾಡಿದ್ದು, ಆಗಸ್ಟ್ 24ರಂದು ಪಡುಬಿದ್ರೆ ಸಮೀಪ ಕಂಚಿನಡ್ಕ ಎಂಬಲ್ಲಿ ಬೆಳಗ್ಗೆ 9.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರು 10 ಸಾವಿರಕ್ಕಿಂತಲೂ ಹೆಚ್ಚಿನ ಜನರು ಬರುವ ನಿರೀಕ್ಷೆಯಿದ್ದು, ಬಹಳ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಸನ್ನದ್ಧರಾಗಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

ನಮ್ಮ ಶಾಂತಿಯುತ ಹೋರಾಟದಿಂದ ಪಡುಬಿದ್ರಿ-ಕಾರ್ಕಳ ಹೆದ್ದಾರಿಯಲ್ಲಿ ಸುಂಕ ವಸೂಲಾತಿ ಕೇಂದ್ರದ ಪ್ರಸ್ತಾವನೆಯಿಂದ ಸರಕಾರ ಕೂಡಲೇ ಹಿಂದೆ ಸರಿಯಬೇಕು. ಈ ರಸ್ತೆಯಲ್ಲಿ ಜನ ಸಾಮಾನ್ಯರಿಗೆ ಹೊರೆಯಾಗುವ ಟೋಲ್ ಗೇಟ್ ಪ್ರಸ್ತಾವನೆ ಶಾಶ್ವತವಾಗಿ ರದ್ದಾಗಬೇಕು. ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಲಕ್ಷಣ್ ಎಲ್ ಶೆಟ್ಟಿ, ಶಶಿಧರ್ ಶೆಟ್ಟಿ, ದಿನೇಶ್ ಕೊಟ್ಯನ, ಜಯ ಎಸ್ ಶೆಟ್ಟಿ, ಸರ್ವಜ್ಞ ತಂತ್ರಿ ಬೆಳ್ಮಣ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...