ಉಡುಪಿ | ವಿಧಾನಪರಿಷತ್ ಚುನಾವಣೆಯಲ್ಲಿ ರಾಜು ಪೂಜಾರಿ ಗೆಲುವು ಖಚಿತ: ಕಾಂಗ್ರೆಸ್ ಮುಖಂಡ ವಿಶ್ವಾಸ

Date:

ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ಡಿ ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದ ಪ್ರಕಾಶ್ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ರಾಜು ಪೂಜಾರಿಯವರು ರಾಜಕಾರಣದಲ್ಲಿ ಸುದೀರ್ಘ ಅನುಭವ ಹೊಂದಿರುವ ರಾಜಕಾರಣಿ. ಕಾರ್ಕಳದಲ್ಲಿ ಗೋಪಾಲ ಭಂಡಾರಿಯವರಂತಹ ಸರಳ ವ್ಯಕ್ತಿತ್ವದ ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಈ ಬಾರಿ ಅವಕಾಶ ನೀಡಿದೆ. ರಾಜು ಪೂಜಾರಿಯವರು ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ
ಜನಪ್ರತಿನಿಧಿಯಾಗಿ ಸಾಕಷ್ಟು ಜನಪರ ಕೆಲಸಗಳನ್ನು ಮಾಡಿಕೊಂಡು ಸ್ಥಳೀಯ ಆಡಳಿತ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಸುಮಾರು 6 ಸಾವಿರ ಮತಗಳ ಪೈಕಿ ಸುಮಾರು 1800 ಕಾಂಗ್ರೆಸ್ ಪಕ್ಷದ ಮತಗಳಿದ್ದು, ಮಾತ್ರವಲ್ಲದೇ ರಾಜು ಪೂಜಾರಿಯವರ ಒಳ್ಳೆಯತನ ಹಾಗೂ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಉಳಿದ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಚಲಾವಣೆಯಾಗಲಿವೆ” ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅನುದಾನದ ಕೊರತೆಯಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲವೆಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿ ಆರ್ ರಾಜು ಅವರು, “ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಯಾಪೈಸೆ ಅನುದಾನ ಬಿಡುಗಡೆ ಮಾಡದೇ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ ಕಾಮಗಾರಿ ಮಾಡಿಸಿದ್ದಾರೆ. ಆದರೆ ಕಾಮಗಾರಿಯ ಬಳಿಕ ಗುತ್ತಿದೆಗಾರರಿಗೆ ಒಂದು ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ್ತೂರಿರಂಗನ್ ವರದಿ ಜಾರಿಯ ವಿಚಾರವಾಗಿ ಮಾತನಾಡಿದ ಅವರು, “ಈ ಯೋಜನೆ ಜಾರಿಯಾದರೆ ಸಾವಿರಾರು ಅರಣ್ಯವಾಸಿ ಕುಟುಂಗಳಿಗೆ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರೂ ಕೂಡ ಕಸ್ತೂರಿ ರಂಗನ್ ವರದಿ ಜಾರಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು: ಪ್ರೊ. ರಾಮ್ ರಾಮಸ್ವಾಮಿ

“ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಪ್ರಮುಖವಾಗಿ ಸ್ಥಳೀಯಮಟ್ಟದ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಇಚ್ಚಾಶಕ್ತಿ ಹಾಗೂ ಬದ್ಧತೆ ಕೊರತೆಯಿಂದ ಈ ಸಮಸ್ಯೆ ಉದ್ಭವಿಸಿದೆ. ಅಂದು ಕಸ್ತೂರಿ ರಂಗನ್ ವರದಿ ಜಾರಿಯ ಕುರಿತು ಚಕಾರ ಎತ್ತದೇ ಈ ಗೊಂದಲಕ್ಕೆ ಎಡೆಮಾಡಿದೆ. ಆದರೆ ಕೇರಳದಲ್ಲಿ ಅಲ್ಲಿನ ಸರ್ಕಾರ ಈ ವರದಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಪರಿಣಾಮ ಈ ವರದಿ ಜಾರಿಯನ್ನು ಕೈಬಿಡಲಾಗಿದೆ” ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪ್ರಭಾಕರ ಬಂಗೇರ, ತಾರಾನಾಥ ಕೋಟ್ಯಾನ್, ಮಾಜಿ ಪುರಸಭಾ ಅಧ್ಯಕ್ಷ ಸುಬಿತ್ ಏನ್ ಆರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...