ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

Date:

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ) ಬಿಡುಗಡೆ ಮಾಡಿದೆ.

ಉಡುಪಿಯ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾರ್ಕಳ ಮತ್ತು ಉಡುಪಿ ಯುವ ಕಾಂಗ್ರೆಸ್ ನಾಯಕರು ಫೋಟೋ ಬಿಡುಗಡೆಗೊಳಿಸಿದ್ದಲ್ಲದೇ, ಬಿಜೆಪಿಯ ದ್ವಂದ್ವ ನಿಲುವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣದ ಮೊದಲ ಆರೋಪಿ ಅಲ್ತಾಫ್ ಎಂಬಾತನ ಬಂಧನ ನಡೆದಾಗ ಬಿಜೆಪಿ ಪಟಾಲಂ ಅಬ್ಬರಿಸಿ ಬೊಬ್ಬಿರಿಯಿತು. ಸಂತ್ರಸ್ತ ಹುಡುಗಿ ಹಿಂದೂವಾಗಿ ಕಂಡಳು. ಅತ್ಯಾಚಾರ ಪ್ರಕರಣವನ್ನು “ಜಿಹಾದಿ” ಕೃತ್ಯವಾಗಿ ಚಿತ್ರಿಸಲಾಯಿತು. ಸರಣಿ ಪ್ರತಿಭಟನೆ, ಪತ್ರಿಕಾ ಹೇಳಿಕೆಗಳು ಹೊರಟವು. ಎನ್‌ಐಎ ತನಿಖೆ ನಡೆಯಬೇಕೆಂಬ ಆಗ್ರಹಗಳು ಕೇಳಿ ಬಂದವು. ಆದರೆ ಬಂಧನಕ್ಕೊಳಗಾಗಿದ್ದ ಮೂರನೇ ಆರೋಪಿ ಅಭಯ್, ಬಿಜೆಪಿ ಕಾರ್ಯಕರ್ತ ಎಂದು ಗೊತ್ತಾದ ಬಳಿಕ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಅಭಯ್, ಮಾಜಿ ಸಚಿವ ಸುನಿಲ್ ಆಪ್ತನಾಗಿದ್ದಾನೆ. ಇದಕ್ಕೆ ಸಾಕ್ಷಿ ಎಂಬಂತೆ ಫೇಸ್‌ಬುಕ್ ಪ್ರೊಫೈಲ್‌ನಲ್ಲೂ ಕೂಡ ಸುನಿಲ್ ಕುಮಾರ್ ಫೋಟೋ ಹಾಕಿಕೊಂಡಿದ್ದಾನೆ. ಈತ ಕಾರ್ಕಳ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ನಗರಸಭೆ ಸದಸ್ಯ ರಮೇಶ್ ಕಾಂಚನ್ ಫೋಟೋವನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದರು.

ಮೂರನೇ ಆರೋಪಿ ಅಭಯ್ ಬಂಧವಾಗಿರುವುದು ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಇಡೀ ಹೋರಾಟವನ್ನು ಕೈಬಿಟ್ಟಿದ್ದಾರೆ. ಕಾರ್ಕಳದಲ್ಲಿ ಅತ್ಯಾಚಾರ ಪ್ರಕರಣವನ್ನು ನಾವೆಲ್ಲರೂ ಖಂಡಿಸುತ್ತೇವೆ. ಆದರೆ ಅತ್ಯಾಚಾರದಂತಹ ಪ್ರಕರಣದಲ್ಲಿ ಯಾವುದೇ ಧರ್ಮ, ಪಕ್ಷದವರಿದ್ದರೂ ಅದನ್ನು ಖಂಡಿಸುವ ಬದಲು ಬಿಜೆಪಿಯವರು ಧರ್ಮಾಧಾರಿತವಾಗಿ ನೋಡುತ್ತಿದ್ದಾರೆ. ಇದು ಖಂಡನೀಯ. ಜನರು ಬಿಜೆಪಿಯ ದ್ವಂದ್ವ ನಿಲುವುಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.

ಇದನ್ನು ಓದಿದ್ದೀರಾ? ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಡ್ರಗ್ಸ್‌ ಪೂರೈಸಿದ್ದ 3ನೇ ಆರೋಪಿ ಅಭಯ್ ಬಂಧನ

ಈ ವೇಳೆ ಉಡುಪಿ ಎನ್‌ಎಸ್‌ಯುಐ ಮುಖಂಡ ಸೌರಭ್ ಬಲ್ಲಾಳ್, ಕಾರ್ಕಳ ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೇಶ್, ದಿನೇಶ್ ಕೋಟ್ಯಾನ್ ಸೇರಿದಂತೆ ಹಲವರಿದ್ದರು.

WhatsApp Image 2024 08 28 at 1.43.41 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...