ಮಾರ್ಚ್ 22 ರಂದು ವಿವಿಧ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲೀಕರ ಸಂಘದ ನೈತಿಕ ಬೆಂಬಲವಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಸ್ ಗಳು ಎಂದಿನಂತೆ ಓಡುತ್ತವೆ ಕನ್ನಡಕ್ಕೆ ಅನ್ಯಾಯವಾದಾಗ ಬಸ್ ಮಾಲೀಕರು ಅದರ ಜೊತೆ ಇರುತ್ತೇವೆ ಆದರೆ ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಬಸ್ ಗಳು ಎಂದಿನಂತೆ ಕಾರ್ಯಚಲಿಸುತ್ತವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದ ಹದಿನೇಳು ಜಿಲ್ಲೆಯಲ್ಲಿ ಸುಮಾರು ಆರು ಸಾವಿರ ಖಾಸಗಿ ಬಸ್ ಗಳಿವೆ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಹ ನಡೆಯುತ್ತಲಿದೆ, ಆಸ್ಪತ್ರೆ, ಚಿಕಿತ್ಸೆಗಾಗಿ ಹೊರ ಜಿಲ್ಲೆಗಳಿಂದ ಇತರೇ ಜಿಲ್ಲೆಗಳಿಗೆ ಓಡಾಡುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು ಹಾಗಾಗಿ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು.




