ತುಮಕೂರು | ಜಮೀನು ಹಿಂದಿರುಗಿಸಲು ಕರ್ನಾಟಕ ಬ್ಯಾಂಕ್ ಒಪ್ಪಿಗೆ : ಪ್ರತಿಭಟನೆ ಹಿಂಪಡೆದ ರೈತ ಸಂಘ

Date:

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ಕೃಷ್ಣಪ್ಪ ಎಂಬುವವರ ಭೂಮಿಯನ್ನು ಕರ್ನಾಟಕ ಬ್ಯಾಂಕ್‌ನವರು ಸರ್ಫೇಸಿ ಕಾಯ್ದೆಯ ಅನ್ವಯ ಇ-ಟೆಂಡರ್ ಮೂಲಕ ಹರಾಜು ಹಾಕಿದ್ದ, ಭೂಮಿಯ ಟೆಂಡರ್ ರದ್ದು ಪಡಿಸಿ, ರೈತರಿಗೆ ಜಮೀನು ನೀಡಲು ಒಪ್ಪಿರುವ ಹಿನ್ನೆಲೆಯಲ್ಲಿ ಆಗಸ್ಟ್ 12 ರಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗು ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ತುಮಕೂರು ನಗರದ ವಿಜ್ಞಾನ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ತುಮಕೂರು ನಗರದ ಕರ್ನಾಟಕ ಬ್ಯಾಂಕಿನ ವಲಯ ಕಚೇರಿಯಲ್ಲಿ ಶುಕ್ರವಾರ ರಾತ್ರಿ ನಡೆದ ಬ್ಯಾಂಕಿನ ಜಿ.ಎಂ.ಕೆ. ಸುಬ್ರಾಮ್ ಮತ್ತು ಎಜಿಎಂ ಮಲ್ಲನಗೌಡ ಅವರುಗಳು, ಲೀಡ್ ಬ್ಯಾಂಕ್ ಸಮ್ಮುಖದಲ್ಲಿ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ, ರೈತರ ಭೂಮಿಯನ್ನ ಹರಾಜು ಹಾಕಿರುವುದು ತಪ್ಪಾಗಿದೆ. ಹಾಗಾಗಿ ಮುಂದಿನ ಎರಡು ತಿಂಗಳ ಒಳಗೆ ರೈತರ ಜಮೀನು ಹರಾಜನ್ನು ರದ್ದುಪಡಿಸಿ, ರೈತರಿಗೆ ವಾಪಸ್ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದು ರೈತ ಸಂಘದ ನಿರಂತರ ಹೋರಾಟಕ್ಕೆ ಸಂದ ಜಯವಾಗಿದೆ. ಹಾಗಾಗಿ ಆಗಸ್ಟ್ 12 ರಂದು ತುರುವೇಕೆರೆಯ ಬ್ಯಾಂಕ್ ಕಚೇರಿ ಮುಂದೆ ಕರೆದಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ” ಎಂದರು.

ಕರ್ನಾಟಕ ಬ್ಯಾಂಕಿನ ಜಿ.ಎಂ ಮತ್ತು ಎಜಿಎಂ ಅವರುಗಳು ರೈತರೊಂದಿಗೆ ನಡೆದ ಸಭೆಯಲ್ಲಿ,ರೈತ ಮುಖಂಡರು ಬ್ಯಾಂಕಿನ ಕ್ರಮವನ್ನು ತೀವ್ರವಾಗಿ ವಿರೋಧಿಸಿದ್ದು, ಬ್ಯಾಂಕ್ ಅಧಿಕಾರಿಗಳು ಒಟಿಎಸ್‌ಗೆ ಅವಕಾಶ ನೀಡದೆ. ಸುಮಾರು 3.59 ಕೋಟಿ ಬೆಲೆ ಬಾಳುವ ಭೂಮಿಯನ್ನು ಕೇವಲ 35.80 ಲಕ್ಷ ರೂಗಳಿಗೆ ಇ ಟೆಂಡರ್ ಮೂಲಕ ಹರಾಜು ನಡೆಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು,ಇನ್ನೂ ಮುಂದೆ ಈಗಾಗದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಒಟಿಎಸ್‌ಗೆ ಅವಕಾಶ ಕಲ್ಪಿಸಬೇಕು ಎಂಬ ಒತ್ತಾಯವನ್ನು ಮಾಡಿದ್ದು, ಇದಕ್ಕೆ ಬ್ಯಾಂಕ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರೈತ ಕೃಷ್ಣಪ್ಪ ಅವರಿಗೆ ಭೂಮಿ ಹಿಂದಿರುಗಿಸಿದ ನಂತರ, ರೈತರು ತೆಗೆದುಕೊಂಡಿರುವ ಸಾಲದ ಅಸಲನ್ನು ಕಟ್ಟಿಸಿಕೊಂಡು, ಬಡ್ಡಿ ಮನ್ನಾ ಮಾಡುವಂತೆ ಸಹ ಬ್ಯಾಂಕಿನ ಅಧಿಕಾರಿಗಳ ಮುಂದೆ ಬೇಡಿಕೆ ಇಡಲಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಈ ಕಾಯ್ದೆಯಿಂದ ರೈತರ ಕೃಷಿ ಭೂಮಿಯನ್ನು ಹೊರಗಿಡುವಂತೆ ಈಗಾಗಲೇ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದರೂ ಸಹ ಕೇಂದ್ರ ಸರಕಾರ ಸ್ಪಂದಿಸಿಲ್ಲ. ಈಗಲೂ ನಾವು ಸರಕಾರಕ್ಕೆ ಒತ್ತಾಯಿಸುತ್ತಿದ್ದು, ರೈತರಿಗೆ ಜೀವನಾಧಾರವಾಗಿರುವ ಕೃಷಿ ಭೂಮಿಯನ್ನು ಈ ಕಾಯ್ದೆಯಿಂದ ಹೊರಗಿಡಬೇಕು. ಇಲ್ಲದಿದ್ದಲ್ಲಿ ರೈತರು ತೀವ್ರ ಸಂಕಷ್ಟ ಅನುಭವಿಸುವುದರ ಜೊತೆಗೆ, ರೈತರು ಮತ್ತು ಬ್ಯಾಂಕಿನ ಸಿಬ್ಬಂದಿ ನಡುವೆ ನಿರಂತರ ಸಂಘರ್ಷಕ್ಕೆ ಕಾರಣವಾಗಲಿದೆ ಎಂದರು.

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ‘ನಮ್ಮ ಭೂಮಿ ಕೊಡಲು ನಾವು ಸಿದ್ಧ’ ಎಂದ ಗ್ರಾಮಸ್ಥರು; ಭೂ ಮಾಲೀಕರಿಂದ ಅಡ್ಡಿ?

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ತುರುವೇಕೆರೆ ಶ್ರೀನಿವಾಸಗೌಡ, ಕೆ.ಎನ್.ವೆಂಕಟೇಗೌಡ, ಅಸ್ಲಂ ಪಾಷ, ತಿಮ್ಮೇಗೌಡ, ರಹ್ಮತುಲ್ಲಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್, ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಶೇಖರ್, ಪುರುಷೋತ್ತಮ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...