ಉಡುಪಿ | ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

Date:

ಉಡುಪಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (KABR) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು . ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,”ಸ್ಟೇಟಸ್ ಕಥೆಗಳು” ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ ಡಿಸೆಂಬರ್ 2024 ವರೆಗೆ 1,635 ಸಣ್ಣ ಕಥೆಗಳನ್ನು ಬರೆಯುವ ಮೂಲಕ ಈ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ.

ಈ ಕಥೆಗಳು ಕನ್ನಡ ವೆಬ್ಸೈಟ್ ನಲ್ಲಿ ನಿರಂತರವಾಗಿ ಪ್ರಕಟವಾಗುತ್ತಿದ್ದು, ನೈತಿಕ ಮೌಲ್ಯಗಳು, ಜೀವನ ಪಾಠಗಳು ಮತ್ತು ಪ್ರಬಲ ಸಾಮಾಜಿಕ ಸಂದೇಶಗಳನ್ನು ಉತ್ತೇಜಿಸಲು ಹೆಸರುವಾಸಿಯಾದ ಇವರ ಕಥೆಗಳು ಓದುಗರನ್ನು ಶ್ರೀಮಂತಗೊಳಿಸುವುದಲ್ಲದೆ, ಸಾಮಾಜಿಕ ಯೋಗಕ್ಷೇಮಕ್ಕೂ ಪ್ರಮುಖ ಕೊಡುಗೆ ನೀಡಿವೆ. ಇವರ ಮೊದಲ‌ ನೂರು ಕತೆಗಳನ್ನ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಲಾಗಿದೆ.ಕತೆ ಬರವಣಿಗೆ ಜೊತೆ, ನಾಟಕ, ಅಭಿನಯದಲ್ಲೂ ತನ್ನ ಛಾಪು ಮೂಡಿಸುತ್ತಿರುವ ಬಹುಮುಖ ಪ್ರತಿಭೆ.

ಇವರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಶುಭಹಾರೈಸಿದ್ದಾರೆ. ಮಣಿಮಜಲು ಗುರುವಪ್ಪ ಮತ್ತು ಸುಮತಿ ದಂಪತಿಗಳ ಪುತ್ರ. ಬಾಳಿಲ ವಿದ್ಯಾಬೋಧಿನಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆಯ ಹಳೆಯ ವಿದ್ಯಾರ್ಥಿ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...