ಕರ್ನಾಟಕ ಮೂಲದ ಗಣಿತ ಶಾಸ್ತ್ರಜ್ಞ ಸಿ.ಆರ್ ರಾವ್ ಅಮೆರಿಕದಲ್ಲಿ ನಿಧನ : ಸಿಎಂ ಸಂತಾಪ

Date:

  • 2001ರಲ್ಲಿ ಕೇಂದ್ರ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು
  • ರಾಧಾಕೃಷ್ಣ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯವರು

ಸಿ.ಆರ್. ರಾವ್ ಎಂದೇ ಖ್ಯಾತರಾಗಿದ್ದ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞರಾದ ಕಲ್ಕಂಪುಡಿ ರಾಧಾಕೃಷ್ಣ ರಾವ್‌ ಇಂದು (ಬುಧವಾರ) ಬೆಳಗ್ಗೆ ಅಮೆರಿಕದಲ್ಲಿ ನಿಧನರಾಗಿದ್ದಾರೆ.

ಅವರಿಗೆ 102 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರು.

ರಾಧಾಕೃಷ್ಣ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ತೆಲುಗು ಕುಟುಂಬದಲ್ಲಿ ಜನಿಸಿದ್ದರು. ಗುಡೂರು, ನಂದಿಗಾಮ ಮತ್ತು ವಿಶಾಖಪಟ್ಟಣದಲ್ಲಿ ಶಾಲಾ ಶಿಕ್ಷಣ ಮುಗಿಸಿದ್ದರು. ಬಳಿಕ ಆಂಧ್ರ ವಿಶ್ವವಿದ್ಯಾಲಯದಲ್ಲಿ ಎಂಎಸ್ಸಿ (ಗಣಿತಶಾಸ್ತ್ರ) ಮತ್ತು 1943ರಲ್ಲಿ ಕೋಲ್ಕತ್ತ ವಿಶ್ವವಿದ್ಯಾಲಯದಲ್ಲಿ ಸಂಖ್ಯಾಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದರು. 1948ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕಿಂಗ್ಸ್ ಕಾಲೇಜಿನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಣಿತ ಮತ್ತು ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿ ರಾವ್ ಅವರು ಮಾಡಿರುವ ಸಾಧನೆಗಾಗಿ 1968ರಲ್ಲಿ ಪದ್ಮಭೂಷಣ, 2001ರಲ್ಲಿ ಕೇಂದ್ರ ಸರ್ಕಾರ ಭಾರತದ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

75 ವರ್ಷಗಳ ಹಿಂದೆ ಸಂಖ್ಯಾಶಾಸ್ತ್ರದಲ್ಲಿ ಕ್ರಾಂತಿಯನ್ನು ಮಾಡಿದ್ದ ರಾವ್ ಅವರ ಅಪಾರ ಕೊಡುಗೆಯ ಸ್ಮರಣಾರ್ಥ 2023ರ ಸಾಲಿನ ನೊಬೆಲ್ ಪ್ರಶಸ್ತಿಗೆ ಸಮಾನವಾದ ಇಂಟರ್‌ನ್ಯಾಷನಲ್ ಪ್ರೈಝ್ ಆಫ್ ಸ್ಟ್ರಾಟಸ್ಟಿಕ್ಸ್ 2023′ ಪ್ರಶಸ್ತಿಗೆ ಭಾಜನರಾಗಿದ್ದರು.

ಸಿ.ಆರ್ ರಾವ್ ಅವರು 19 ದೇಶಗಳಿಂದ 39 ಡಾಕ್ಟರೇಟ್ ಪಡೆದಿದ್ದಾರೆ. ಜತೆಗೆ, 477 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದು, 15 ಪುಸ್ತಕಗಳನ್ನು ಕೂಡ ಬರೆದಿದ್ದಾರೆ.

2002ರಲ್ಲಿ ಅಮೆರಿಕ ಅಧ್ಯಕ್ಷರಾಗಿದ್ದ ಜಾರ್ಜ್ ಬುಷ್ ಅವರು ದೇಶದ ಅತ್ಯುನ್ನತ ಪ್ರಶಸ್ತಿ ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಅನ್ನು ನೀಡಿ ಗೌರವಿಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ
ಸಿ ಆರ್ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ, ಟ್ವೀಟ್ ಮಾಡಿದ್ದಾರೆ.

‘ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ಅತ್ಯುನ್ನತ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...