ಕೊಡಗು | ಬಿಜೆಪಿ ಭದ್ರಕೋಟೆ ಛಿದ್ರ; ದಶಕಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಜಿಲ್ಲೆ

Date:

  • ಅಪ್ಪಚ್ಚು ರಂಜನ್‌ ಅಧಿಪತ್ಯ ಅಂತ್ಯ
  • ಬೋಪಯ್ಯಗೆ ಬ್ರೇಕ್‌ ಹಾಕಿದ ಕಾಂಗ್ರೆಸ್

ಬಿಜೆಪಿಯ ಭದ್ರಕೋಟೆ ಎನಿಸಿದ್ದ ಕೊಡಗಿನಲ್ಲಿ ಈ ಬಾರಿ ಅಚ್ಚರಿ ಎಂಬಂತೆ ʻಕೈʼ ಮೇಲುಗೈ ಸಾಧಿಸಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.

ಮಡಿಕೇರಿ ಕ್ಷೇತ್ರದಲ್ಲಿ ಅಪ್ಪಚ್ಚು ರಂಜನ್‌ ಅಧಿಪತ್ಯಕ್ಕೆ ಮಂಥರ್ ಗೌಡ ಅಂತ್ಯ ಹಾಡಿದ್ದಾರೆ. ಮತ್ತೊಂದೆಡೆ ವಿರಾಜಪೇಟೆಯಲ್ಲಿ ಹ್ಯಾಟ್ರಿಕ್‌ ಗೆಲುವಿನ ಸರದಾರ ಕೆ.ಜಿ ಬೋಪಯ್ಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್‌ನ ಎ.ಎಸ್‌ ಪೊನ್ನಣ್ಣ ಬ್ರೇಕ್‌ ಹಾಕಿದ್ದಾರೆ.

ಮಡಿಕೇರಿ ಕ್ಷೇತ್ರದಲ್ಲಿ 7ನೇ ಬಾರಿ ಚುನಾವಣಾ ಕಣದಲ್ಲಿದ್ದ 5 ಬಾರಿಯ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್‌ನ ಯುವ ನಾಯಕ ಮಂಥರ್ ಗೌಡ ವಿರುದ್ಧ 4,520 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ವಿಶೇಷವೆಂದರೆ ಪಕ್ಕದ ಅರಕಲಗೂಡು ಕ್ಷೇತ್ರದಲ್ಲಿ ಮಂಥರ್‌ ಗೌಡ ಅವರ ತಂದೆ ಮಾಜಿ ಸಚಿವ ಎ. ಮಂಜು ಅವರು ಜೆಡಿಎಸ್‌ ಟಿಕೆಟ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಮಂಥರ್ ಗೌಡ 53,767 ಮತಗಳನ್ನು ಪಡೆದರೆ ಅಪ್ಪಚ್ಚು ರಂಜನ್ 48,975 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಕ್ಷೇತ್ರದಲ್ಲಿದ್ದ ಉಳಿದ ಎಲ್ಲ ಅಭ್ಯರ್ಥಿಗಳೂ ಠೇವಣಿ ಕಳೆದುಕೊಂಡಿದ್ದಾರೆ. ಜೆಡಿಎಸ್​ನಿಂದ ಸ್ಪರ್ಧಿಸಿದ್ದ ನಾಪಂಡ ಮುತ್ತಪ್ಪ ಕೇವಲ 4,642 ಮತಗಳನ್ನಷ್ಟೇ ಪಡೆಯಲು ಶಕ್ತರಾದರು. ಹಾಲಿ ಶಾಸಕರ ವಿರುದ್ಧದ ಜನಾಭಿಪ್ರಾಯ, ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಾಬಲ್ಯ ಹಾಗೂ ಜೆಡಿಎಸ್ ಅಭ್ಯರ್ಥಿ ಪಡೆದ ಮತಗಳು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ.

ಮಡಿಕೇರಿ; ವಿಧಾನಸಭಾ ಚುನಾವಣೆ 2023 ಫಲಿತಾಂಶ ವಿವರ:

  • ಕಾಂಗ್ರೆಸ್: ಡಾ. ಮಂಥರ್ ಗೌಡ– 53,767 ಮತಗಳು
  • ಬಿಜೆಪಿ: ಡಾ. ಅಪ್ಪಚ್ಚುರಂಜನ್– 48,975 ಮತಗಳು
  • ಜೆಡಿಎಸ್: ನಾಪಂಡ ಮುತ್ತಪ್ಪ– 4,642 ಮತಗಳು
  • ಗೆಲುವಿನ ಅಂತರ: 4520 ಮತಗಳು

ಈ ಸುದ್ದಿ ಓದಿದ್ದೀರಾ?: ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು…

ಬೋಪಯ್ಯಗೆ ಬ್ರೇಕ್‌ ಹಾಕಿದ ಕಾಂಗ್ರೆಸ್!

ವಿರಾಜಪೇಟೆಯಲ್ಲಿ ನಾಲ್ಕನೇ ಬಾರಿಗೆ ಸ್ಪರ್ಧಿಸಿದ್ದ ಹಾಲಿ ಶಾಸಕ ಮತ್ತು ಮಾಜಿ ಸ್ಪೀಕರ್‌ ಕೆ.ಜಿ ಬೋಪಯ್ಯ ಸೋಲು ಕಂಡಿದ್ದಾರೆ. ಇಲ್ಲಿ ಎ.ಕೆ ಸುಬ್ಬಯ್ಯ ಅವರ ಪುತ್ರ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್‌ ಪೊನ್ನಣ್ಣ 4,291 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿನ 20 ವರ್ಷಗಳ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್‌ ಹಾಕಿದೆ.

ಕೊಡಗು ಜಿಲ್ಲೆಯಲ್ಲಿ 4,56,313 ಮತದಾರರ ಪೈಕಿ ಈ ಬಾರಿ 3,41,046 ಮಂದಿ ಮತ ಚಲಾಯಿಸುವ ಮೂಲಕ ಒಟ್ಟು ಶೇ.74.74 ಮತದಾನವಾಗಿತ್ತು. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಹೊರತು ಪಡಿಸಿ ಜಿಲ್ಲೆಯಲ್ಲಿ ಇತರೆ 10 ರಾಜಕೀಯ ಪಕ್ಷಗಳ ಒಟ್ಟು 29 ಮಂದಿ ಕಣದಲ್ಲಿದ್ದರು..  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...