ಮಂಡ್ಯ | ‘ಬಡವರಿಂದ ಭಂಗಗೊಳ್ಳುವಷ್ಟು ನಾಜೂಕಲ್ಲ ದೇವಾಲಯದ ಪಾವಿತ್ರ್ಯ’- ಹೈಕೋರ್ಟ್ ತಾಕೀತು

Date:

ಸಮೀಪದಲ್ಲಿ ಕೊಳೆಗೇರಿ ಇರುವುದು ದೇವಾಲಯದ ಪಾವಿತ್ರ್ಯ ಮತ್ತು ಪ್ರಶಾಂತತೆಗೆ ಭಂಗ ತರುತ್ತದೆಂಬ ವಾದವನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆಯೆಂದು ‘ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್’ ವರದಿ ಮಾಡಿದೆ.

ಪಕ್ಕದಲ್ಲೇ ಕೊಳೆಗೇರಿಗೆ ಅವಕಾಶ ನೀಡಿರುವುದು ದೇವಾಲಯದ ಪಾವಿತ್ರ್ಯ ಮತ್ತು ಪ್ರಶಾಂತತೆಗೆ ಭಂಗ ಉಂಟು ಮಾಡಿದೆ ಎಂಬುದಾಗಿ ಮಂಡ್ಯದ ಶ್ರೀ ಕಾಳಿಕಾಂಬ ಸೇವಾ ಸಮಿತಿಯು ಹೈಕೋರ್ಟ್ ಮೆಟ್ಟಿಲೇರಿತ್ತು. “ಸಮಾನತೆಗೆ ಬಡತನ ಸಿರಿತನದ ಭೇದ ಭಾವಗಳಿಲ್ಲ. ಇಂತಹ ವಾದ ಅಸಮರ್ಥನೀಯ. ವಿಧಾತನ ಬಡ ಮಕ್ಕಳು ಸಂದರ್ಭವಶಾತ್ ನೆರೆಹೊರೆಯಲ್ಲಿ ಬದುಕಿ ಬಾಳಿದಾಕ್ಷಣ ಭಂಗಗೊಳ್ಳುವಷ್ಟು ನಾಜೂಕು ಅಲ್ಲ ದೇವಾಲಯವೊಂದರ ಪಾವಿತ್ರ್ಯ. ಭಂಗ ಬರುತ್ತದೆಂದು ಆಕ್ಷೇಪಿಸುವುದು ನಮ್ಮ ಸಂವಿಧಾನ ಸಾರಿರುವ ಸಾರ್ವತ್ರಿಕ ಮೌಲ್ಯಗಳ ತಿರಸ್ಕಾರವೇ ಸರಿ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ತೀರ್ಪು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಹೈಕೋರ್ಟ್‌ ಆದೇಶದಂತೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬಾಸ್ಟ್‌: ಕೃಷಿ ಸಚಿವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಳೆಗೇರಿ ನಿವಾಸಿಗಳಿಗೆ ಮನೆಗಳನ್ನು ಕಟ್ಟಿಸಿಕೊಡಲು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಗಾಗಿ ದೇವಸ್ಥಾನದ ಸನಿಹದ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಅಧಿಸೂಚನೆಯನ್ನು ಮಂಡ್ಯ ಜಿಲ್ಲಾಧಿಕಾರಿ 2018ರಲ್ಲಿ ಹೊರಡಿಸಿದ್ದರು. ಕಾಳಿಕಾಂಬ ಸೇವಾ ಸಮಿತಿಯು ಈ ಅಧಿಸೂಚನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ‘ಸದರಿ ಜಮೀನಿನಲ್ಲಿ ಕೊಳೆಗೇರಿ ನಿವಾಸಿಗಳಿಗೆ ಮನೆಗಳನ್ನು ಕಟ್ಟಿಸಿದರೆ ದೇವಸ್ಥಾನದ ಪಾವಿತ್ರ್ಯ ಮತ್ತು ಪ್ರಶಾಂತತೆ ಹಾಳಾಗುತ್ತದೆ ಎಂದಿತ್ತು. ಕಾಳಿಕಾಂಬ ದೇವಾಲಯದ ಬಹುಸಂಖ್ಯೆಯ ಭಕ್ತಾದಿಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುತ್ತದೆ. ಸಂವಿಧಾನದ 29ನೆಯ ಕಲಮಿನ ಉಲ್ಲಂಘನೆಯಿದು’ ಎಂದು ಆಕ್ಷೇಪ ಎತ್ತಿತ್ತು.

‘ಸಮಿತಿ ಎತ್ತಿರುವ ತಕರಾರುಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಆಳವಾಗಿ ಘಾಸಿಗೊಳಿಸಿವೆ. ಕೊಳೆಗೇರಿ ನಿವಾಸಿಗಳು ಕೀಳು ಜನ ಎಂಬ ಭಾವನೆಯನ್ನು ಸಮಿತಿ ಮುಂದೆ ಮಾಡಿದೆ. ಪೂಜಾಸ್ಥಳದ ನೆರೆಹೊರೆಯಲ್ಲಿ ಮನೆ ಕಟ್ಟಿಕೊಂಡು ವಾಸಿಸುವ ಬಡಜನರ ಹಕ್ಕುಗಳನ್ನು ಬೀಳುಗಳೆದಿದೆ. ಸಮಾಜ ಪ್ರಗತಿ ಸಾಧಿಸಿರುವ ಈ ದಿನಗಳಲ್ಲಿ ಇಂತಹ ಭಾವನೆ ಆಘಾತಕಾರಿ. ಕೊಳೆಗೇರಿ ನಿವಾಸಿಗಳು ಪ್ರವೇಶದಿಂದಾಗಿ ದೇವಾಲಯದ ದಿವ್ಯ ಪ್ರಭಾವಳಿಯು ಮಲಿನಗೊಳ್ಳುತ್ತದೆ ಎಂಬ ತಿಳಿವಳಿಕೆಯು ಪೂರ್ವಗ್ರಹಪೀಡಿತವೂ ಮತ್ತು ಒಂದು ವರ್ಗದ ಜನರನ್ನು ಸಮಾಜದಿಂದ ಹೊರಗಿಡುವ ಮನೋಭಾವದಿಂದ ಕೂಡಿದ್ದೂ ಆಗಿದೆ. ಇಂತಹ ನಿಲುವು ಸಮಾಜವನ್ನು ಜಾತಿ, ವರ್ಗಗಳ ಆಧಾರದ ಮೇಲೆ ಒಡೆಯುವುದೇ ಆಗಿದೆ’ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಟೀಕೆ-ಟಿಪ್ಪಣಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...