ಸಾಲ ಪಾವತಿಸಿದರೂ ಆಸ್ತಿ ಪತ್ರ ನೀಡದ ಕೆನರಾ ಬ್ಯಾಂಕ್; ₹2 ಲಕ್ಷದೊಂದಿಗೆ ದಾಖಲೆ ವಾಪಸ್‌ ಕೊಡಲು ಹೈಕೋರ್ಟ್‌ ಸೂಚನೆ

Date:

ಸಾಲಬಾಧೆಯಿಂದ ಮೃತಪಟ್ಟಿದ್ದ ವ್ಯಕ್ತಿ ಅಡಮಾನವಿಟ್ಟಿದ್ದ ಜಮೀನು ಮತ್ತು ಮನೆ ಆಸ್ತಿಗಳ ಮೂಲ ದಾಖಲೆಗಳನ್ನು ಆತನ ತಂದೆಗೆ ಹಿಂದಿರುಗಿಸದ ಕೆನರಾ ಬ್ಯಾಂಕ್‌ಗೆ ಹೈಕೋರ್ಟ್‌ ದಂಡ ವಿಧಿಸಿದೆ. ಆ 2 ಲಕ್ಷ ರೂ. ದಂಡದ ಹಣವನ್ನುವೃದ್ಧ ತಂದೆಗೆ ನೀಡುವಂತೆ ನಿರ್ದೇಶಿಸಿದೆ.

ದಾವಣಗೆರೆಯ ಎಂಬಿ ಆಗ್ರೋ ಫುಡ್‌ ಇಂಡಸ್ಟ್ರೀಸ್‌ ಉದ್ದಿಮೆ ವ್ಯವಸ್ಥಾಪಕ ನಿರ್ದೇಶಕ ಅನಿಮೇಶ್ ಗೌಡ ಎಂಬವರು ಆಸ್ತಿ ಪತ್ರಗಳನ್ನು ಕೆನರಾ ಬ್ಯಾಂಕ್‌ನಲ್ಲಿ ಒತ್ತೆಯಿಟ್ಟು, ಸಾಲ ಪಡೆದುಕೊಂಡಿದ್ದರು. ಬಳಿಕ, ಅವರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡರು. ಅತನ ಸಾವಿನ ಬಳಿಕ, ಆತನ ತಂದೆ ಎಂ.ಬಿ ಶೇಖರಗೌಡ ಅವರೇ ಸಂಪೂರ್ಣ ಸಾಲದ ಮೊತ್ತ 20 ಕೋಟಿ ರೂ.ಗಳನ್ನು ‘ಒನ್‌ ಟೈಮ್ ಸೆಟಲ್‌ಮೆಂಟ್‌’ ಮೂಲಕ ಪಾವತಿಸಿದ್ದರು. ಆದರೂ, ಅವರಿಗೆ ಬ್ಯಾಂಕ್‌ ಆಸ್ತಿ ಪತ್ರಗಳನ್ನು ಹಿಂದಿರುಗಿಸಿರಲಿಲ್ಲ. ಸಾಲ ಪಡೆದಿದ್ದ ಮಗನಿಗೇ ದಾಖಲೆಗಳನ್ನು ಕೊಡುತ್ತೇವೆ. ತಂದೆಗಲ್ಲ ಎಂಬ ವಿಚಿತ್ರ ನಿಲುವನ್ನು ಬ್ಯಾಂಕ್‌ ತೆಗೆದುಕೊಂಡಿತ್ತು.

ಬ್ಯಾಂಕ್‌ ವಿರುದ್ಧ ಎಂ.ಬಿ.ಶೇಖರಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಪೀಠ, ವೃದ್ಧನಿಗೆ 2 ಲಕ್ಷ ರೂ. ಹಣದ ಜೊತೆಗೆ, ದಾಖಲೆಗಳನ್ನು ಹಿಂದಿರುಗಿಸವಂತೆ ಮೂಲ ದಾಖಲೆಗಳನ್ನು ಹಿಂದಿರುಗಿಸುವಂತೆ ಕೆನರಾ ಬ್ಯಾಂಕ್‌ಗೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆಯ ಸಮಯದಲ್ಲಿ ಕೆನರಾ ಬ್ಯಾಂಕ್‌ನ ವಕೀಲರು, “ತಂದೆ ಮೂಲ ಸಾಲಗಾರರಲ್ಲ, ಆದ್ದರಿಂದ ದಾಖಲೆಗಳನ್ನು ಅವರಿಗೆ ಹಿಂತಿರುಗಿಸಲಾಗುವುದಿಲ್ಲ. ಆದರೆ ನ್ಯಾಯಾಲಯವು ನಿರ್ದೇಶನ ನೀಡಿದರೆ ಹಿಂತಿರುಗಿಸಲಾಗುವುದು” ಎಂದು ಹೊಸ ವಾದವನ್ನು ಮುಂದಿಟ್ಟಿದ್ದರು.

ಆದರೆ, ಕೇವಲ ನಿರ್ದೇಶನವನ್ನು ನೀಡಲು ಸಾಧ್ಯವಿಲ್ಲ ಎಂದಿರುವ ನ್ಯಾಯಾಲಯ, “ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದಿದೆ. ಮಗನ ಸಾವಿನ ಹಿನ್ನೆಲೆಯಲ್ಲಿ ತಂದೆಗೆ ಒಟಿಎಸ್ ನೀಡಿದ ಬ್ಯಾಂಕ್, ದಾಖಲೆಗಳನ್ನು ಮಾತ್ರ ಮೂಲ ಸಾಲಗಾರನಿಗೆ ಹಿಂದಿರುಗಿಸಲು ಬಯಸಿದೆ. ಬ್ಯಾಂಕ್‌ನ ಈ ಕ್ರಮ ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತಂದಿದೆ” ಎಂದು ಹೇಳಿದೆ.

ಬ್ಯಾಂಕ್‌ನ ವರ್ತನೆಯು ಖಾಸಗಿ ಲೇವಾದೇವಿದಾರನ ವರ್ತನೆಯಂತೆಯೇ ಇದೆ. ಅದೂ ಸಹ, ಸಂಪೂರ್ಣ ಮೊತ್ತವನ್ನು ಸ್ವೀಕರಿಸಿದ ನಂತರವೂ, ಮೂಲ ಸಾಲಗಾರ ಇಲ್ಲವೆಂಬುದು ಗೊತ್ತಿದ್ದರೂ ದಾಖಲೆಗಳನ್ನು ಮೂಲ ಸಾಲಗಾರನಿಗೇ ಹಿಂದಿರುಗಿಸುತ್ತೇವೆ ಎಂಬುದು ಗ್ರಹಿಕೆಗೆ ಮೀರಿದ್ದಾಗಿದೆ ಮತ್ತು ವಿಚಿತ್ರವಾಗಿದೆ” ಎಂದು ನ್ಯಾಯಾಲಯ ಅಸಮಧಾನ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...