ಮಂಡ್ಯ | ದಲಿತರ ಬಗ್ಗೆ ಅವಹೇಳನಕಾರಿ ಮಾತು: ಶಾಸಕ ಮುನಿರತ್ನ ವಿರುದ್ಧ ಕರ್ನಾಟಕ ಜನಶಕ್ತಿ ಆಕ್ರೋಶ

Date:

ದಲಿತರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕರ್ನಾಟಕ ಜನಶಕ್ತಿಯ ಸಿದ್ದರಾಜು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರ ಸಮುದಾಯ ವಿರೋಧಿ, ದಲಿತ ವಿರೋಧಿ ಮಾತುಗಳಿಗೆ ರಾಜ್ಯ ಮತ್ತು ಒಕ್ಕೂಟದ ಬಿಜೆಪಿ ಪಕ್ಷದ ವರಿಷ್ಠರು ಕಠಿಣ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇತ್ತಿಚಿನ ದಿನಗಳಲ್ಲಿ, ಹಲವಾರು ಬಿಜೆಪಿ ನಾಯಕರಿಂದ ಕೋಮು ಭಾವನೆಗಳನ್ನು ಕೆರಳಿಸುವ ಪ್ರಚೋದನಕಾರಿ ಹೇಳಿಕೆಗಳು ಹೆಚ್ಚಾಗಿದ್ದು, ಇವು ಸಮಾಜಕ್ಕೆ ಕೆಟ್ಟ ಸಂದೇಶವನ್ನು ನೀಡುತ್ತಿವೆ. ಶಾಸಕ ಮುನಿರತ್ನ ಕೂಡಾ ಬೆಂಕಿ ಹಚ್ಚುವವರ ಸಾಲಿನಲ್ಲಿ ಸೇರ್ಪಡೆಗೊಂಡಿದ್ದಾರೆ” ಎಂದು ಸಿದ್ದರಾಜು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನಿರತ್ನ, ಬಿಬಿಎಂಪಿ ಗುತ್ತಿಗೆದಾರನಿಗೆ ಹಣ ತಂದುಕೊಡಲು ಒತ್ತಾಯಿಸುವುದರ ಜೊತೆಗೆ, ಜಾತಿ ಭೇದ ಹುಟ್ಟಿಸುವ ರೀತಿಯ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ದಲಿತ, ಒಕ್ಕಲಿಗ ಎಂಬ ಪದಗಳನ್ನು ಬಳಸುವ ಮೂಲಕ ಜಾತಿಯ ನಡುವಿನ ಸಾಮರಸ್ಯ ಹಾಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅಲ್ಲದೆ, ಗುತ್ತಿಗೆದಾರನ ಮನೆಯ ಹೆಣ್ಣು ಮಕ್ಕಳ ಬಗ್ಗೆ ತೀವ್ರ ಅವಹೇಳನಕಾರಿ, ಅಸಭ್ಯ ಮಾತುಗಳನ್ನು ಆಡಿದ್ದಾರೆ ಎಂದು ಕಿಡಿಕಾರಿದರು.

ಇದನ್ನು ಓದಿದ್ದೀರಾ? ಧಾರವಾಡ | ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು: ಡಾ. ಕೆ ಆರ್ ದುರ್ಗಾದಾಸ್

“ಇಂತಹ ಸಂಸ್ಕೃತಿ ಹೀನ ವ್ಯಕ್ತಿಯನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. 10 ವರ್ಷಗಳ ಕಾಲ ರಾಜಕೀಯ ನಿರ್ಬಂಧ ವಿಧಿಸಿ, ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಮುನಿರತ್ನನಂತಹ ವ್ಯಕ್ತಿಗೆ ತಕ್ಕ ಶಿಸ್ತು ಮತ್ತು ದಂಡನೆಯ ಅಗತ್ಯವಿದೆ. ಇಂತಹ ಅಸಭ್ಯ ಕೃತ್ಯಗಳು ಪುನಃ ನಡೆದರೆ, ಸಮಾಜವು ಸಂಕಷ್ಟಕ್ಕೆ ಒಳಗಾಗಲಿದೆ. ಕರ್ನಾಟಕ ಜನಶಕ್ತಿ ಮುನಿರತ್ನನ ಕೃತ್ಯವನ್ನು ಖಂಡಿಸುತ್ತದೆ. ಇಂತಹವರನ್ನು ಸಮಾಜ ತಿರಸ್ಕರಿಸಬೇಕು ಎಂದು ಸಿದ್ದರಾಜು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...