ಉಡುಪಿ | ಅಹಮದಾಬಾದ್ ವಿಮಾನ ದುರಂತ, ಕರ್ನಾಟಕ ಮುಸ್ಲಿಂ ಜಮಾಅತ್, ಜಿಲ್ಲಾ ಸಮಿತಿ ವಿಷಾದ

Date:

ದುರಂತಗಳು ಸೃಷ್ಟಿಕರ್ತನ ವಿಧಿಯಾಗಿದೆ ಸ್ವೀಕರಿಸಲು ಕಷ್ಟವಾದರೂ ಸ್ವೀಕರಿಸುವುದು ಅನಿವಾರ್ಯವಾಗಿದೆ ಯಾವುದೇ ರೀತಿಯ ಪರಿಹಾರ ಅಥವಾ ಸಂತಾಪ ಮರಣ ಹೊಂದಿದವರನ್ನು ಬದುಕಿಸಲು ಸಾಧ್ಯವಿಲ್ಲ ಆದರೆ ಮಾನವ ಸಮಾಜದಲ್ಲಿ ಹುಟ್ಟಿದಂತಹ ನಾವು ಯಾರೇ ದುರಂತದಲ್ಲಿ ಮರಣ ಪಟ್ಟರೆ ಅದಕ್ಕಾಗಿ ವಿಷಾದಿಸುವುದು ಹಾಗೂ ಮೃತಪಟ್ಟವರಿಗೆ ಸಂತಾಪ ಸೂಚಿಸುವುದು ಹಾಗೂ ಮೃತಪಟ್ಟ ಕುಟುಂಬಗಳಿಗೆ ಸಾಂತ್ವಾನ ಹೇಳುವುದು ಮನುಷ್ಯ ಧರ್ಮವಾಗಿದೆ. ವಿಧಿಯ ಆಟಕ್ಕೆ ಬಲಿಯಾಗಿ ನಿನ್ನೆ ದಿನ ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಎಲ್ಲರ ಬಗ್ಗೆ ಕನಿಕರವಿದ್ದು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ವಿಷಾದ ವ್ಯಕ್ತಪಡಿಸಿದೆ.

ಸರಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಇಂತಹ ದುರಂತಗಳು ಸಂಭವಿಸುವುದಕ್ಕಿಂತ ಮುಂಚೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ದುರಂತಗಳು ಸಂಭವಿಸದಂತೆ ನೋಡಿಕೊಳ್ಳಬೇಕಾಗಿರುವುದು ಸಂಬಂಧಪಟ್ಟವರ ಆದ್ಯ ಕರ್ತವ್ಯವಾಗಿದೆ ಹಾಗೂ ಮೃತರಾದ ಕುಟುಂಬಗಳಿಗೆ ಈ ಸಂಕಷ್ಟದ ಸಮಯದಲ್ಲಿ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಸಿಗಲಿ ಎಂದು ಆಶಿಸುತ್ತಾ ಇಡೀ ದೇಶ ಮೃತಪಟ್ಟವರ ಕುಟುಂಬದೊಂದಿಗೆ ನಿಲ್ಲಬೇಕೆಂದು ಕರ್ನಾಟಕ ಮುಸ್ಲಿಂ ಜಮಾತ್ ಉಡುಪಿ ಜಿಲ್ಲಾ ಸಮಿತಿ ದೇಶದ ಜನರಲ್ಲಿ ಕೇಳಿಕೊಳ್ಳುತ್ತಾ ಇದೆ ಹಾಗೂ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪರಿಹಾರ ಹಾಗೂ ಸರಕಾರದಿಂದ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡಬೇಕು ಎಂದು ಸರಕಾರಕ್ಕೆ ಆಗ್ರಹಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...