ಗುಬ್ಬಿ ತಹಶೀಲ್ದಾರ್ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

Date:

ಭೂಮಿಗಾಗಿ ರೈತರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ಪ್ರಾಂತ ರೈತ ಸಂಘದ ಸದಸ್ಯರನ್ನು ನಿಂದಿಸಿ ಆರೋಪ ಮಾಡಿದ ತಹಶೀಲ್ದಾರ್ ಕ್ಷಮೆ ಕೇಳಬೇಕು. ಭೂಮಿಗೆ ಸಲ್ಲಿಸುವ ಅರ್ಜಿ ಸ್ವೀಕರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಬಸ್ ನಿಲ್ದಾಣದಿನದ ಸರ್ಕಲ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ನೂರಾರು ಮಂದಿ ರೈತರು ಹಾಗೂ ಪ್ರಾಂತ ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್ ವಿರುದ್ಧ ಘೋಷಣೆ ಕೂಗಿದರು.

1001215560 1

ಪ್ರಾಂತ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ ಬಗರ್ ಹುಕುಂ ಸಮಿತಿ ಮೂಲಕ ಅರ್ಜಿ ಸಲ್ಲಿಸಿ ಭೂಮಿ ಮಂಜೂರು ಆಗದ ಹಿನ್ನಲೆ ಈ ಹಿಂದೆ ಪ್ರಾಂತ ರೈತ ಸಂಘ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸುವ ಚಳವಳಿ ಮಾಡಿದ್ದೇವೆ. ಸುಮಾರು ನಾಲ್ಕು ಸಾವಿರ ಅರ್ಜಿ ನಂತರ ಬಾಕಿ ಇದ್ದ ಅರ್ಜಿಗಳ ಸಲ್ಲಿಕೆಗೆ ತಹಶೀಲ್ದಾರ್ ಅವರೇ ಖುದ್ದು ಎಲ್ಲರೂ ಬರುವ ಬದಲು ಒಬ್ಬರು ಎಲ್ಲರ ಅರ್ಜಿ ತಂದು ಸಲ್ಲಿಸಲು ಸೂಚಿಸಿದ್ದರು. ಅವರ ಮಾತಿನಂತೆ ನಮ್ಮ ಸಂಘದ ಸದಸ್ಯ ಅರ್ಜಿಗಳನ್ನು ಸಲ್ಲಿಸಲು ಹೋದಾಗ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಪೊಲೀಸ್ ಕೇಸ್ ಮಾಡುವುದಾಗಿ ಬೆದರಿಸಿ ಅರ್ಜಿಗೆ ಸಾವಿರ ರೂ ಪಡೆಯುತ್ತೀರಿ ಎಂದು ಆರೋಪ ಮಾಡಿದ್ದಾರೆ. ಸಂಘ ರೈತರ ಪರ ನಿಂತು ಕೆಲಸ ಮಾಡುತ್ತದೆ. ಮಾತಿಗೆ ತಪ್ಪಿದ ತಹಶೀಲ್ದಾರ್ ಅವರು ಕ್ಷಮೆ ಕೇಳಬೇಕು. ರೈತರಿಗೆ ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

1001215410

ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಸುಬ್ರಹ್ಮಣ್ಯ ಮಾತನಾಡಿ ಜಮೀನು ಇಲ್ಲದ ರೈತರು ಭೂಮಿ ಕೇಳುವುದು ನಮ್ಮ ಹಕ್ಕು ಆಗಿದೆ. ಬಹಳ ವರ್ಷಗಳಿಂದ ಕೃಷಿ ನಡೆಸಿ ದಾಖಲೆ ಸಿಗದ ಹಿನ್ನಲೆ ರೈತರು ಕಂಗಾಲಾಗಿದ್ದಾರೆ. ಸಮಿತಿಯಲ್ಲಿ ಮಂಜೂರು ಆಗಿಲ್ಲ. ಅಕ್ರಮ ಸಕ್ರಮ ಯೋಜನೆಯಡಿಯಲ್ಲಿ ಸಹ ಭೂಮಿ ದಕ್ಕಿಲ್ಲ. ಗಂಗಯ್ಯನಪಾಳ್ಯ ಗೋಮಾಳ ಸರ್ವೇ ನಂಬರ್ ನೂರಾರು ವರ್ಷದಿಂದ ರೈತರಿದ್ದಾರೆ. ಈಗ ಅರಣ್ಯ ಭೂಮಿ ಎಂದು ಒಕ್ಕಲೆಬ್ಬಿಸಿ ರೈತರನ್ನು ಬೀದಿಗೆ ತಂದಿದ್ದಾರೆ. ಈ ಜೊತೆಗೆ ಮಂಜೂರಾದ ಜಮೀನು ದುರಸ್ತು ಮಾಡಿ ದಾಖಲೆ ಮಾಡಿಕೊಡುತ್ತಿಲ್ಲ. ಈ ವಿಚಾರವಾಗಿ ಹೋರಾಟ ನಿರಂತರ ನಡೆದಿದೆ. ಈ ಸಮಯ ತಹಶೀಲ್ದಾರ್ ಅವರ ನಡೆ ಬೇಸರ ತಂದಿದೆ. ರೈತರಿಗೆ ಭೂಮಿ ನೀಡಲು ಮುಖ್ಯಮಂತ್ರಿಗಳಿಗೆ ಅರ್ಜಿ ಸಲ್ಲಿಸಿರುವುದು. ಸರ್ಕಾರ ಭಾಗವಾಗಿ ಅರ್ಜಿ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜ್ಜಪ್ಪ ಮಾತನಾಡಿ ನೂರಾರು ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಿಲ್ಲ. ಬಗರ್ ಹುಕುಂ ಸಮಿತಿಯಲ್ಲಿ ದಕ್ಕದ ಹಿನ್ನಲೆ ಸರ್ಕಾರಕ್ಕೆ ಒತ್ತಾಯ ತರಲು ಹೋರಾಟ ಮಾಡಲಾಗಿತ್ತು. ಸರ್ಕಾರ ಭೂಮಿ ನೀಡುವ ಭರವಸೆ ನೀಡಿತ್ತು. ಈ ಹಿನ್ನಲೆ ಭೂ ರಹಿತರು ಅರ್ಜಿ ಸಲ್ಲಿಸಿದ್ದಾರೆ. ಆದರೆ ತಹಶೀಲ್ದಾರ್ ಆರತಿ ಅವರು ಅರ್ಜಿ ಸಲ್ಲಿಸುವ ರೈತರ ಪ್ರತಿನಿಧಿಗೆ ನಿಂದಿಸಿ ಸಾವಿರ ರೂ ಪಡೆಯುವ ಆರೋಪ ಮಾಡಿರುವುದು ಖಂಡನೀಯ. ಈ ನಡೆ ಖಂಡಿಸಿ ಉಳಿದ ಅರ್ಜಿ ಸ್ವೀಕರಿಸಿ ಸರ್ಕಾರಕ್ಕೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದ ಪ್ರಾಂತ ರೈತ ಸಂಘದ ಸದಸ್ಯರು ಹಾಗೂ ರೈತರ ಬಳಿಗೆ ದಿಢೀರ್ ಆಗಮಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಪ್ರಾಂತ ರೈತ ಸಂಘದ ಸದಸ್ಯರೊಂದಿಗೆ ಮಾತಿನ ಚಕಮಕಿ ನಡೆಸಿದರು.

1001215562

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...