ಮಂಡ್ಯ | ನೈಸ್ ಕಂಪನಿ ಹಗರಣಗಳಿಗೆ ಡಿಕೆಶಿ ಬೆಂಬಲ: ಪ್ರಾಂತ ರೈತ ಸಂಘದಿಂದ ತೀವ್ರ ಖಂಡನೆ

Date:

ಬೆಂಗಳೂರು-ಮೈಸೂರು ಆರು ಪಥಗಳ ಹೆದ್ದಾರಿ ನಿರ್ಮಾಣದ ನಂತರ ಬಿಎಂಐಸಿ ಯೋಜನೆ ಅನಾವಶ್ಯಕವಾಗಿದ್ದು, ಭೂ ಸ್ವಾಧೀನದ ಪ್ರಕ್ರಿಯೆ ರೈತರಿಗೆ ಅನ್ಯಾಯಕರವಾಗಿದೆ. ನೈಸ್ ಕಂಪನಿಯ ಹಗರಣ ಹಾಗೂ ದೌರ್ಜನ್ಯಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಎಲ್. ಭರತ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು 30 ವರ್ಷಗಳ ಹಿಂದೆ ಕೆಐಎಡಿಬಿ ಮೂಲಕ ರೈತರ ಭೂಮಿ ಸ್ವಾಧೀನ ಮಾಡಿಕೊಂಡು ನೈಸ್ ಕಂಪನಿಗೆ ಹಸ್ತಾಂತರಿಸಿದೆ. ಈ ಯೋಜನೆ ಕಾರ್ಯಗತವಾಗದೇ ಇದ್ದರೂ, ನೈಸ್ ಕಂಪನಿ ಹೆಚ್ಚುವರಿ ಭೂಮಿಯನ್ನು ದಬ್ಬಾಳಿಕೆ ಮೂಲಕ ಕಬಳಿಸಿ, ಅದನ್ನು ರಿಯಲ್ ಎಸ್ಟೇಟ್ ವ್ಯಾಪಾರಕ್ಕೆ ಬಳಸುತ್ತಿದೆ. ಇದರಿಂದ ಭೂಮಿಯನ್ನು ಕಳೆದುಕೊಂಡ ರೈತರು ಕೋರ್ಟ್, ಕಚೇರಿಗಳಿಗೆ ಅಲೆದು ಹಣ ಹಾಗೂ ಸಮಯ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸುಪ್ರೀಂ ಕೋರ್ಟ್ ತೀರ್ಪುಗಳು ಹಾಗೂ ಸದನ ಸಮಿತಿಯ ಶಿಫಾರಸ್ಸುಗಳನ್ನೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ನೈಸ್ ಕಂಪನಿಯ ಪರವಾಗಿ ಡಿ.ಕೆ. ಶಿವಕುಮಾರ್ ವಕಾಲತ್ತು ವಹಿಸುವುದು ಬೇಜವಾಬ್ದಾರಿ ಕ್ರಮವಾಗಿದೆ ಹಾಗೂ ಇದು ರೈತ ವಿರೋಧಿ ನಡೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ರೈತ ಸಮುದಾಯದ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಶಾಸಕರಾದ ಟಿ.ಬಿ. ಜಯಚಂದ್ರ ಅಧ್ಯಕ್ಷತೆಯ ಅಧೀನ ಸಮಿತಿಯ ಶಿಫಾರಸ್ಸುಗಳ ಅನುಸರಣೆಯ ಮೂಲಕ ಬಿಎಂಐಸಿ ಯೋಜನೆ ರದ್ದುಪಡಿಸಬೇಕು ಎಂದು ರೈತ ಸಂಘ ಆಗ್ರಹಿಸಿದೆ. ಅದಲ್ಲದೆ, 13237 ಎಕರೆ ಭೂಮಿ ಬೇಕಾದರೂ, ನೈಸ್ 23846 ಹೆಚ್ಚುವರಿ ಎಕರೆಗಳನ್ನು ಸ್ವಾಧೀನ ಪಡಿಸಿಕೊಂಡಿರುವುದು ಅನ್ಯಾಯ. ಹೆಚ್ಚುವರಿ ಭೂಮಿಯನ್ನು ನೈಸ್ ಕಂಪನಿಯಿಂದ ಹಿಂದಿರಗಿಸಬೇಕು ಎಂದು ರೈತರು ಆಗ್ರಹಿಸಿದರು.

ಇನ್ನು, ಬೆಂಗಳೂರಿನಿಂದ ಮೈಸೂರಿಗೆ ಆರು ಸಾಲಿನ ರಸ್ತೆ ನಿರ್ಮಾಣದಿಂದಾಗಿ ಸಾವಿರಾರು ವ್ಯಾಪಾರಸ್ಥರು ಉದ್ಯೋಗ ಕಳೆದುಕೊಂಡಿದ್ದಾರೆ. ರೈತರ ಅತೀವ ಸಂಕಷ್ಟವನ್ನು ತಂದೊಡ್ಡಿದೆ. ಈ ಪರಿಸ್ಥಿತಿಯಲ್ಲೂ ನೈಸ್ ಯೋಜನೆಯತ್ತ ಗಮನ ಹರಿಸುವುದು ಯಾರ ಉದ್ಧಾರಕ್ಕಾಗಿ ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಗುಬ್ಬಿಯ ಹಂದಿಜೋಗಿ ಸಮುದಾಯದ ವಸತಿ ಪ್ರದೇಶಕ್ಕೆ ಭೇಟಿ

ಒಕ್ಕೂಟ ಸರ್ಕಾರವು ತಮಿಳುನಾಡು, ಕೇರಳಕ್ಕೆ ಸಂಪರ್ಕ ಕಲ್ಪಿಸಲು ಇಂಟರ್ಸಿಟಿ ರೈಲು ಯೋಜನೆಗಳ ತ್ವರಿತ ಜಾರಿಗೆ ಆದ್ಯತೆ ನೀಡಬೇಕು. ಚಾಮರಾಜನಗರ, ಕನಕಪುರ ಹಾಗೂ ಮದ್ದೂರು, ಕೆಸ್ತೂರ್, ಕುಣಿಗಲ್, ತುಮಕೂರು ಮಾರ್ಗ ಸೇರಿದಂತೆ, ಬೇರೆ ರೈಲು ಯೋಜನೆಗಳನ್ನು ವೇಗವಾಗಿ ಅನುಷ್ಠಾನಗೊಳಿಸಬೇಕು. ಈ ರೈಲು ಮಾರ್ಗ ಯೋಜನೆಗಳಿಂದ ಬೆಂಗಳೂರಿಗೆ ವಾಹನಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಎನ್ ಲಿಂಗರಾಜಮೂರ್ತಿ, ಉಪಾಧ್ಯಕ್ಷರಾದ ಮರಿಲಿಂಗೇಗೌಡ , ಚಿಕ್ಕಸ್ವಾಮಿ, ಹಿಪ್ಜುಲ್ಲಾ, ಎ.ಎಲ್ ಶಿವಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...