ಬಂಟ್ವಾಳ | ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ವಿದ್ಯಾರ್ಥಿನಿಯರಿಗಾಗಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದ ಕುಮಾರಿ ಫಾತಿಮತ್ ಅಝ್ಮಿಯ ತಮ್ಮ ಭಾಷಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಇತಿಹಾಸದ ಬಗ್ಗೆ ಹೇಳುತ್ತ, “ಕನ್ನಡ ನಾಡು ನುಡಿಗಳನ್ನು ಬೆಳೆಸಿ ಉಳಿಸುವುದು ವಿದ್ಯಾರ್ಥಿನಿಯರಾದ ನಮ್ಮೆಲ್ಲರ ಕರ್ತವ್ಯ” ಎಂದು ಹೇಳಿದರು.

ಬಳಿಕ ವೇದಿಕೆಗೆ ಬಂದ, ದ್ವಿತೀಯ ಬಿಎ ವಿಭಾಗದ ಫಾತಿಮತ್ ಶಮಿಯಾ ಅವರು ತಮ್ಮ ಭಾಷಣದಲ್ಲಿ
ಕರ್ನಾಟಕದ ವೈಶಿಷ್ಟ್ಯದ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕರ್ನಾಟಕ ರಾಜ್ಯೋತ್ಸವ 1 1

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ, ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ ಡಿಯವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕರ್ನಾಟಕ ರಾಜ್ಯ ರಚನೆಯ ಕುರಿತು ಮಾಹಿತಿ ನೀಡುತ್ತ, “ನಮ್ಮ ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಇದೆ. ಅದರಿಂದಲೇ, ನಮ್ಮ ದೇಶವು ಧರ್ಮ, ಜಾತಿ, ಮತಗಳ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡಿಲ್ಲ, ಬದಲಾಗಿ ಭಾಷೆಗಳ ಆಧಾರದ ಮೇಲೆ ವಿವಿಧ ಪ್ರಾಂತ್ಯಗಳನ್ನಾಗಿ ಬೇರ್ಪಡಿಸಲಾಗಿದೆ. ಹಾಗೆಯೇ ನಾವೆಲ್ಲರೂ ನಮ್ಮ ನೆಲದ ಮೇಲಿನ ಅಭಿಮಾನವನ್ನು ಬೆಳೆಸಿಕೊಂಡು ಇಲ್ಲಿನ ಕನ್ನಡವನ್ನು ಉಳಿಸಬೇಕು ಹಾಗೂ ಬೆಳೆಸಬೇಕು. ಅಲ್ಲದೆ ಅದರೊಂದಿಗೆ ʼನಾವು ಭಾರತೀಯರುʼ ಎಂಬ ಏಕತೆಯನ್ನು ಕಾಪಾಡಿಕೊಂಡು ಐಕ್ಯತೆಯಿಂದ ಬದುಕಬೇಕು” ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಕರ್ನಾಟಕ ರಾಜ್ಯೋತ್ಸವ 2 1

ಈ ಕಾರ್ಯಕ್ರಮದ ಅಂಗವಾಗಿ ದ್ವಿತೀಯ ಬಿ ಎ ವಿದ್ಯಾರ್ಥಿನಿಯರು ನಾಡಗೀತೆಯನ್ನು ಹಾಡುವ ಮೂಲಕ ರಂಜಿಸಿದರು. ವೇದಿಕೆಯಲ್ಲಿ ಅನುಗ್ರಹ ಸಲಹಾ ಸಮಿತಿಯ ಕಾರ್ಯದರ್ಶಿ ತಾರಾಕ್ಷಿ, ಪದವಿ ಪೂರ್ವ ವಿಭಾಗದ ಸಂಯೋಜಕಿ ಮಮಿತಾ ಎಸ್ ರೈ, ಪದವಿ ವಿಭಾಗದ ಸಂಯೋಜಕಿ ಆಬಿದ ಬಿ, ಸಲಹಾ ಸಮಿತಿ ಸದಸ್ಯೆ ಸಲೀಮಾ, ನವ್ಯ ಇದ್ದರು.

ಈ ಸುದ್ದಿ ಓದಿದ್ದೀರಾ? ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಮರುದಿನವೇ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನ

ದ್ವಿತೀಯ ವರ್ಷದ ಬಿಕಾಂ ವಿಭಾಗದ ಕುಮಾರಿ ಆಯಿಷತ್ತುಲ್ ಸೆಮೀನಾ ಆರಂಭದಲ್ಲಿ ಕಿರಾಅತ್ ಪಠಿಸಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದ ತೃತೀಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ಕುಮಾರಿ ಖತೀಜತುಲ್ ಅನಿಷ ಆರಂಭದಲ್ಲಿ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...