ವರದಿ-ಹೋರಾಟಕ್ಕೂ ಬಗ್ಗದ ಅಧಿಕಾರಿಗಳು; 6.90 ಕೋಟಿ ರೂ. ಅನುದಾನದ ಖರ್ಚಿಗೆ ಕುತಂತ್ರ!

Date:

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ದಿನಪತ್ರಿಕೆ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಸಂಸ್ಥೆಗೆ ಸರ್ಕಾರದಿಂದ ಬಂದಿರುವ 6.90 ಕೋಟಿ ರೂ.ಗಳ ಬಗ್ಗೆಯೂ ಸುದ್ದಿಗಳು ಹೆಚ್ಚು ಗಮನ ಸೆಳೆಯುತ್ತಿವೆ. ಈ ಅನುದಾನದ ಚರ್ಚೆಗೆ ಕಾರಣ ಸಂಸ್ಥೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಎಂಬ ಆರೋಪಗಳಿವೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯದಲ್ಲಿರುವ 50ಕ್ಕೂ ಹೆಚ್ಚು ಆದಿವಾಸಿ, ಬುಡಕಟ್ಟು ಸಮುದಾಯಗಳಿಗೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ಪರಿಶಿಷ್ಟ ಸರ್ಕಾರದ ಯೋಜನೆ/ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಲು ಮುಂದಾಗಿದೆ. ಅದಕ್ಕಾಗಿ, ಕಾರ್ಯಾಗಾರ, ಉದ್ಯೋಗ ಖಾತ್ರಿ ಶಿಕ್ಷಣದ ಮಹತ್ವ ಕುರಿತು ಕಾರ್ಯಗಾರ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅರಣ್ಯ ಹಕ್ಕು ಕಾಯ್ದೆಯನ್ನು ಪರಿಣಾಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಬುಡಕಟ್ಟು ಸಮುದಾಯದ ಜನಪ್ರತಿನಿಧಿಗಳಿಗೆ ಹಾಗೂ ಅರಣ್ಯ, ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ತರಬೇತಿ ನೀಡಲು, ಕೇಂದ್ರ ಸರ್ಕಾರದ ಪೋಷನ್ ಮಾಹೆ ಅಭಿಯಾನ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳನ್ನು ಪಡೆದುಕೊಳ್ಳುವ ಕುರಿತು ಶಿಬಿರಗಳನ್ನು ನಡೆಸಲು ಸಂಸ್ಥೆಗೆ 2021-22ನೇ ಸಾಲಿನಲ್ಲಿ 6.90 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಈ ಹಣವನ್ನು ಹಾಲಿ ನಿರ್ದೇಶಕರುಗಳು KMCAಗೆ ಕೊಟ್ಟು ವೆಚ್ಚ ಮಾಡಲು ಮುಂದಾಗಿದ್ದರು. ಆಗ ರಾಜ್ಯದ್ಯಂತ ಎಲ್ಲ ಆದಿವಾಸಿಗಳು ವಿರೋಧಿಸಿ, ಪ್ರತಿಭಟನೆ ನಡೆಸಿದ್ದರಿಂದ ಅವರ ಉದ್ದೇಶ ಈಡೇರಲಿಲ್ಲ. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಕೂಡ 6.90 ಕೋಟಿ ಅನುದಾನದ ಬಗ್ಗೆ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಸಭೆ ಕರೆದು ಅವರ ಅಗತ್ಯತೆಗಳಿಗೆ ಅನುಗುಣವಾಗಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಸಂಸ್ಥೆಯಿಂದಲೇ ಕಾರ್ಯಕ್ರಮಗಳನ್ನು ರೂಪಿಸಬೇಕು. ಆ ಹಣವನ್ನು ಖರ್ಚು ಮಾಡುವಂತೆ ಸೂಚನೆಯನ್ನು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಯಾವ ಆದೇಶಕ್ಕೂ ಕಿವಿಕೊಡದ ಅಧಿಕಾರಿಗಳು, ಈ ಸಂಬಂಧ ಯಾವುದೇ ಸಭೆ ಕರೆಯದೆ ತಮ್ಮ ವಿವೇಚನೆಗೆ ತಕ್ಕಂತೆ ಹಾಗೂ ತಮಗೆ ಬೇಕಾದಂತೆ ಕ್ರಿಯಾಯೋಜನೆ ರೂಪಿಸಿ, ಹಣ ಬಳಕೆಯ ರಸೀದಿಗಳನ್ನು ಸಿದ್ದಪಡಿಸಿಕೊಂಡು 6.90 ಕೋಟಿ ಅನುದಾನವನ್ನು ಖರ್ಚು ಮಾಡುವ ಮೂಲಕ ಆದಿವಾಸಿ ಮತ್ತು ಬುಡಕಟ್ಟುಗಳಿಗೆ ಅಗತ್ಯವಿಲ್ಲದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಹೊರಟಿದ್ದಾರೆ. ಇದು ನಿಜಕ್ಕೂ ವಿಷಾಧನೀಯ ಸಂಗತಿ.

WhatsApp Image 2024 10 09 at 3.08.32 PM

ಈ ಸಂಸ್ಥೆಯ ಅಧಿಕಾರಿಗಳಿಗೆ ಆದಿವಾಸಿ ಬುಡಕಟ್ಟು ಸಮುದಾಯಗಳ ಶ್ರೇಯೋಭಿವೃದ್ಧಿ ಬೇಕಾಗಿಲ್ಲ. ಜೊತೆಗೆ ಈ ಜನರು ಇಂದಿಗೂ ಕಾಡುಮೇಡುಗಳಲ್ಲಿ ಶಿಕ್ಷಣವಿಲ್ಲದೆ ಬದುಕುತ್ತಿದ್ದಾರೆ. ಇವರಿಗೆ ಸಂಘಟನೆಗಳಿಲ್ಲದೆ ಅಸಂಗಡಿತರಾಗಿ ರಾಜಕೀಯ ಜ್ಞಾನಗಳಿಲ್ಲದೆ ಇರುವುದು ಅಧಿಕಾರಿಗಳಿಗೆ ವರವಾಗಿ ಪರಿಣಮಿಸಿದೆ.

ಆದ್ದರಿಂದ, ಸರ್ಕಾರವು ಮೂಲ ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿಗದಿ ಮಾಡಿರುವ 6.90 ಕೋಟಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಸ್ಪಷ್ಟ ನಿರ್ದೇಶನ ನೀಡಬೇಕಾಗಿದೆ. ಈ ಸಂಬಂಧ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಮುಖಂಡರಗಳ ಸಭೆ ಕರೆದು ಅವರ ಶ್ರೇಯೋಭಿವೃದ್ಧಿಗೆ ಅಗತ್ಯವಾದ ಕ್ರಿಯಾಯೋಜನೆಗಳನ್ನು ಸಿದ್ದಪಡಿಸಬೇಕಿದೆ. ಆ ಮೂಲಕವೇ ಅನುದಾನದ ಸದ್ಬಳಕೆ ಮಾಡಬೇಕಾಗಿದೆ. ಇಲ್ಲವಾದರೆ, ಕೇವಲ ಅನುದಾನ ಮಾತ್ರ ಬಳಕೆಯಾಗುತ್ತದೆ. ಆದರೆ, ಅದು ಯಾರಿಗೆ, ಯಾವ ಉದ್ದೇಶಕ್ಕೆ ಬಳಕೆಯಾಗಬೇಕೋ ಆ ಉದ್ದೇಶ ಈಡೇರುವುದಿಲ್ಲ.

ಸಂಸ್ಥೆಯ ಹಾಲಿ ನಿರ್ದೇಶಕರು ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಲಭ್ಯವಿಲ್ಲ. ಅವರಿಗೆ ಕರೆ ಮಾಡಿದರೂ ಫೋನ್ ಸ್ವೀಕರಿಸುವುದಿಲ್ಲ. ಹಾಗಾಗಿ, ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಮೈಸೂರಿನಲ್ಲಿ ಲಭ್ಯವಿರುವ ಯಾವುದಾದರೂ ಅಧಿಕಾರಿಗಳಿಗೆ ಸಂಸ್ಥೆಯ ನಿರ್ದೇಶಕ ಸ್ಥಾನ ನೀಡಬೇಕು. ಇಲ್ಲವಾದರೆ, ಕೂಡಲೇ ಸಂಸ್ಥೆಗೆ ಒಬ್ಬ ಕಾಯಂ ನಿರ್ದೇಶಕರನ್ನು ನೇಮಕ ಮಾಡಬೇಕು. ಜೊತೆಗೆ, ನವಡಿಜಿಟಲ್ ಯುಗದ ಅರಿವೇ ಇಲ್ಲದೆ ಕಾಡಿನಲ್ಲಿ ಬದುಕುತ್ತಿರುವ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರಲು ಮಂಜೂರಾಗಿರುವ 6.90 ಕೋಟಿ ಹಣವನ್ನು ನೈಜ ಫಲಾನುಭವಿಗಳ ಶ್ರೇಯೋಭಿವೃದ್ಧಿಗೆ ಬಳಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...