ಕರ್ನಾಟಕ ಪಶು ವಿಶ್ವವಿದ್ಯಾಲಯ 14ನೇ ಘಟಿಕೋತ್ಸವ : ಆದಿತ್ಯಗೆ 9, ದಕ್ಷೀತ್‌ಗೆ 6, ಎಲೆಕ್ಟ್ರಿಕಲ್ ವ್ಯಾಪಾರಿ ಮಗಳಿಗೆ 4 ಚಿನ್ನದ ಪದಕ

Date:

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಬೀದರ್ ಹೊರವಲಯದ ಕಮಠಾಣ ರಸ್ತೆಯ ನಂದಿನಗರದ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಜರುಗಿತು.

2022-23ನೇ ಸಾಲಿನ ʼಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿʼ ಸ್ನಾತಕ ಪದವಿಯಲ್ಲಿ ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಆದಿತ್ಯ ಚಿದಾನಂದ ಅವರು 9 ಚಿನ್ನದ ಪದಕಗಳಿಗೆ ಭಾಜನರಾದರು.

ಚಿತ್ರದುರ್ಗದ ರವೀನಾ ಅವರು 15 ಚಿನ್ನದ ಪದಕಗಳ ಸಾಧನೆ ಮಾಡಿದರು. ಆದರೆ ಕೆಪಿಎಸ್ಸಿ ಪರೀಕ್ಷೆ ಸಿದ್ಧತೆಯಲ್ಲಿರುವ ಕಾರಣ ಅವರು ಗೈರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003279493
ಬೆಂಗಳೂರಿನ ಆದಿತ್ಯ ಅವರಿಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು 9 ಚಿನ್ನದ ಪದಕ , ಪದವಿ ಪ್ರದಾನ ಮಾಡಿದರು.

ಚಿತ್ರದುರ್ಗದ ಚಳ್ಳಕೆರೆಯ ಚಿಕ್ಕೇನಹಳ್ಳಿ ಗ್ರಾಮದವರಾದ ದಕ್ಷೀತ್‌ ಪಿ.ಎಲ್‌. ಅವರು ಎಂವಿಎಸ್‌ಸಿ ಸ್ನಾತಕೋತ್ತರ ಪದವಿಯಲ್ಲಿ 6 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡರು. ದಕ್ಷೀತ್ ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 2022–23ನೇ ಸಾಲಿನಲ್ಲಿ ಈ ಸಾಧನೆಗೈದಿದ್ದಾರೆ.

ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಎಲೆಕ್ಟ್ರಿಕಲ್ ವ್ಯಾಪಾರಿ ಹನುಮಂತಪ್ಪ ಅವರ ಮಗಳಾದ ಭಾಗ್ಯಶ್ರೀ ಅವರು ‘ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಅಂಡ್‌ ಅನಿಮಲ್‌ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್‌ ಎಎಚ್‌) ಸ್ನಾತಕ ಪದವಿಯಲ್ಲಿ 4 ಚಿನ್ನದ ಪದಕಗಳ ಸಾಧನೆ ಮಾಡಿದ್ದಾರೆ.

ಭಾಗ್ಯಶ್ರೀ ಅವರು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಧ್ಯಾರ್ಥಿನಿಯಾಗಿದ್ದಾರೆ.

1003279494
ಚಿತ್ರದುರ್ಗದ ದಕ್ಷೀತ್ ಅವರಿಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು 4 ಚಿನ್ನದ ಪದಕ , ಪದವಿ ಪ್ರದಾನ ಮಾಡಿದರು.

ಹನುಮಂತಪ್ಪ ಅವರು ಎಲೆಕ್ಟ್ರಿಕಲ್ ಅಂಗಡಿ ಇಟ್ಟುಕೊಂಡು ಅದರ ಆದಾಯದಿಂದ ಮಗಳಿಗೆ ಓದಿಸಿದ್ದಾರೆ. ಪೋಷಕರ ನಿರೀಕ್ಷೆಯಂತೆ ಉತ್ತಮ ರೀತಿಯಲ್ಲಿ ಓದುವುದರ ಮೂಲಕ ಮಗಳು 2022-23ನೇ ಸಾಲಿನಲ್ಲಿ ಈ ಸಾಧನೆ ಮಾಡಿದ್ದಾರೆ.

ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ಅವರು ಸ್ನಾತಕ ಪದವಿಯಲ್ಲಿ 16 ವಿದ್ಯಾರ್ಥಿಗಳಿಗೆ 53 ಚಿನ್ನದ ಪದಕಗಳು, ಸ್ನಾತಕೋತ್ತರ ಪದವಿಯಲ್ಲಿ 21 ವಿದ್ಯಾರ್ಥಿಗಳಿಗೆ 34 ಚಿನ್ನದ ಪದಕಗಳು, ಡಾಕ್ಟರೇಟ್‌ ಪದವಿ ಪೂರೈಸಿದ ಏಳು ವಿದ್ಯಾರ್ಥಿಗಳಿಗೆ ತಲಾ ಒಂದು ಚಿನ್ನದ ಪದಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿಎರಡು ಚಿನ್ನದ ಪದಕ ಸೇರಿದಂತೆ ಒಟ್ಟು 96 ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.

WhatsApp Image 2025 03 25 at 7.54.16 PM
ಚಿನ್ನದ ಪದಕಗಳೊಂದಿಗೆ ಸಂಭ್ರಮಿಸಿದ ವಿದ್ಯಾರ್ಥಿಗಳು

ಒಟ್ಟು 634 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 419 ಸ್ನಾತಕ ಪದವೀಧರರು, 187 ಸ್ನಾತಕೋತ್ತರ ಹಾಗೂ 28 ಡಾಕ್ಟರೇಟ್ ಪದವೀಧರರು ಸೇರಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮನ್ನ ಹಿಂಗ್ಯಾಕ ನೋಡತಾರಪ ಬೆಂಗ್ಳೂರ್ ಮಂದಿ? (ಭಾಗ-1)

ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಯ ನಿರ್ದೇಶಕ ಡಾ. ನವೀನಕುಮಾರ ಘಟಿಕೋತ್ಸವ ಭಾಷಣ ಮಾಡಿದರು. ಕುಲಪತಿ ಪ್ರೊ. ಕೆ.ಸಿ. ವೀರಣ್ಣ, ಕುಲಸಚಿವ ಪಿ.ಟಿ. ರಮೇಶ, ಆಡಳಿತ ಮಂಡಳಿ ಸದಸ್ಯರು, ಬೋಧಕ ಸಿಬ್ಬಂದಿ ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...