ಮತ್ತೆ ಘರ್ಜಿಸಲಿದೆ ಕರ್ನಾಟಕ | ಹೊಸ ಕ್ಯಾಂಪೇನ್ ಲೋಗೋ ಬಿಡುಗಡೆ ಮಾಡಿದ ಕಾಂಗ್ರೆಸ್

Date:

  • “ಮತ್ತೆ ಘರ್ಜಿಸಲಿದೆ ಕರ್ನಾಟಕ” ಲೋಗೋ ಹಂಚಿಕೊಂಡ ಎಂ ಬಿ ಪಾಟೀಲ್
  • ರಾಜ್ಯದ ಘನತೆಯನ್ನು ಈ ಅಭಿಯಾನ ಮತ್ತೆ ಮುನ್ನೆಲೆಗೆ ತರಲಿದೆ ಎಂದ ಕಾಂಗ್ರೆಸ್

ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ, “ಮತ್ತೆ ಘರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಕ್ಯಾಂಪೇನ್ ಆರಂಭಿಸಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಸೇರಿದಂತೆ ಇಂಡಿಯನ್ ಯೂಥ್ ಕಾಂಗ್ರೆಸ್ ಕರ್ನಾಟಕ ಟ್ವೀಟರ್‌ನಲ್ಲಿ ಈ ಅಭಿಯಾನದ ಲೋಗೋ ಹಂಚಿಕೊಂಡಿದ್ದಾರೆ.

ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿ ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಬ್ಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದ ಜನರು ನಿರಾಸೆಗೊಂಡಿದ್ದಾರೆ. ಅವರು ಕೋವಿಡ್-19, ಆರ್ಥಿಕ ಕುಸಿತ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಸೇರಿದಂತೆ ಅನೇಕ ಕಠಿಣ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯಿಂದ ಕರ್ನಾಟಕಕ್ಕಾದ ಅನ್ಯಾಯವನ್ನು ಕನ್ನಡಿಗರು ಇನ್ನೂ ಮರೆತಿಲ್ಲ. ಹೀಗಾಗಿ ಕನ್ನಡಿಗರ ಈ ಸವಾಲುಗಳನ್ನು ಎದುರಿಸಲು ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ನಾವು ಬದ್ಧರಾಗಿದ್ದೇವೆ” ಎಂದು ಕಾಂಗ್ರೆಸ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಈ ಹೊಸ ಅಭಿಯಾನವು ಕರ್ನಾಟಕದ ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ರಾಜ್ಯದ ಭವಿಷ್ಯಕ್ಕಾಗಿ ಪಕ್ಷದ ದೃಷ್ಟಿಕೋನವನ್ನು ಹಂಚಿಕೊಳ್ಳಲು ಗಮನ ನೀಡುತ್ತದೆ. ಈ ಅಭಿಯಾನವು ರ್ಯಾಲಿಗಳು, ಮನೆ-ಮನೆ ಪ್ರಚಾರ, ಸಾಮಾಜಿಕ ಮಾಧ್ಯಮಗಳ ಪ್ರಚಾರ ಮತ್ತು ಕನ್ನಡಿಗರ ನಾಡಿ ಮಿಡಿತ ಹಾಗೂ ಅವರಿಗಾದ ಅನ್ಯಾಯವನ್ನು ಸರಿಪಡಿಸುವ ಮೂಲಕ ಕರ್ನಾಟಕವು ಮತ್ತೆ ಘರ್ಜಿಸುವಂತೆ ಮಾಡುವ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಇದು ಒಳಗೊಂಡಿರುತ್ತದೆ” ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ.

“ಕರ್ನಾಟಕದ ಜನರು ಉತ್ತಮ ಭವಿಷ್ಯಕ್ಕಾಗಿ ನಮ್ಮ ದೃಷ್ಟಿಕೋನವನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಸಮೃದ್ಧ, ಎಲ್ಲರನ್ನೂ ಒಳಗೊಳ್ಳುವ ಮತ್ತು ಎಲ್ಲರಿಗೂ ಅವಕಾಶಗಳನ್ನು ಒದಗಿಸುವ ರಾಜ್ಯವನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಕಾಂಗ್ರೆಸ್ ನಾಯಕತ್ವದಲ್ಲಿ ಕರ್ನಾಟಕ ಮತ್ತೆ ಘರ್ಜಿಸಲಿದೆ ಎಂದು ನಾವು ನಂಬುತ್ತೇವೆ” ಎಂದು ಕಾಂಗ್ರೆಸ್ ತಿಳಿಸಿದೆ.

“ಕರ್ನಾಟಕ ಮತ್ತೊಮ್ಮೆ ಘರ್ಜಿಸಲಿದೆ” ಅಭಿಯಾನವು ಕನ್ನಡದ ಹೆಮ್ಮೆ ಹಾಗೂ ಕರ್ನಾಟಕದ ಘನತೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತರಲಿದೆ. ಈ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...