ಉಡುಪಿ | ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ : ಕರವೇ ಪ್ರತಿಭಟನೆ

Date:

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆಯನ್ನು ವಿರೋಧಿಸಿ ಮತ್ತು ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ, ರಾಜಭಾಷಾ ಸಮಿತಿಯು ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತ ಬಂದಿದೆ. ದೇಶದಲ್ಲಿ ಈಗ ಇರುವುದು ಪ್ರಜಾಪ್ರಭುತ್ವ, ಜನರ ಆಳ್ವಿಕೆಯ ಕಾಲದಲ್ಲಿ ನಾವು ಇದ್ದೇವೆ. ರಾಜಪ್ರಭುತ್ವ ಹೋಗಿ ಎಷ್ಟೋ ದಶಕಗಳಾಗಿವೆ. ರಾಜರೇ ಇಲ್ಲದ ಕಾಲದಲ್ಲಿ ರಾಜಭಾಷೆ ಇರಲು ಹೇಗೆ ಸಾಧ್ಯ? ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ರಾಜಭಾಷೆ ಎಂಬುದೇ ಪ್ರಜಾಪ್ರಭುತ್ವ ವಿರೋಧಿ ಎಂದು ಆರೋಪಿಸಿದರು.

ಒಕ್ಕೂಟ ಸರಕಾರ ರಾಜಭಾಷಾ ಸಮಿತಿ/ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿ ಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ ಎಂದು ಅವರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಇರುವ ಎಲ್ಲ ಭಾಷೆಗಳನ್ನು ಒಕ್ಕೂಟ ಸರಕಾರದ ಅಧಿಕೃತ ಆಡಳಿತ/ಸಂವಹನ ಭಾಷೆಗಳನ್ನಾಗಿ ಮಾಡಬೇಕು. ದೇಶದ ಎಲ್ಲ ನುಡಿಗಳೂ ಸಮಾನ ಎಂದು ಘೋಷಿಸಬೇಕೆಂದು ಅವರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರವೇ ಉಪಾಧ್ಯಕ್ಷರಾದ ಅನಿಲ್ ಪೂಜಾರಿ, ಸಾಬುದ್ದೀನ್, ನಗರ ಅಧ್ಯಕ್ಷ ಅಜರುದ್ದಿನ್, ಜಿಲ್ಲಾ ಸಂಚಾಲಕರಾದ ಕೃಷ್ಣ ಪಂಗಾಳ, ಸುಧಾಕರ್ ಕಲ್ಮಾಡಿ, ಕಾಪು ತಾಲೂಕು ಅಧ್ಯಕ್ಷ ವೀರೇಶ್ , ಕಾರ್ಕಳ ತಾಲೂಕು ಅಧ್ಯಕ್ಷ ಇಮ್ರಾನ್ ಶೇಕ್, ಕುಂದಾಪುರ ತಾಲೂಕು ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮಹಿಳಾ ಉಪಾಧ್ಯಕ್ಷ ಅಶ್ವಿನಿ ನಾಯಕ್, ಅನಿತಾ ಪೂರ್ಣಿಮಾ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...