ರಾಯಚೂರು | ಬಾಲಕಿಯರ ವಸತಿ ನಿಲಯದಲ್ಲಿ ಮೊಬೈಲ್ ಇಟ್ಟ ಆರೋಪಿಯನ್ನು ಕೂಡಲೇ ಬಂಧಿಸಿ: ಕರವೇ ಆಗ್ರಹ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಿಷಪೂರಿತ ಆಹಾರ ಸೇವನೆ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥವಾಗಿದ್ದ ಘಟನೆ ನಡೆದಿತ್ತು. ಈಗ ಬಾಲಕಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಘಟನೆ ನಡೆದಿದೆ. ಶಾಲೆ ಮೇಲುಸ್ತುವಾರಿ ವೈಫಲ್ಯದಿಂದ ಮೇಲಿಂದ ಮೇಲೆ ಘಟನೆ ನಡೆಯುತ್ತಿವೆ ಎಂದು ದೂರಿದರು.

ಘಟನೆ ನಡೆದರೂ ಶಾಲೆ ಪ್ರಿನ್ಸಿಪಾಲ್‌, ಮೇಲ್ವಿಚಾರಕರು ದೂರು ನೀಡದೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಸಂಘಟನೆ ನಡೆಸಿದ ನಂತರ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಯಾರೆಂಬುದು ಶಾಲೆಯ ಮುಖ್ಯಸ್ಥರಿಗೆ ಗೊತ್ತಿದೆ. ಈ ಹಿಂದೆಯೂ ಇದೇ ರೀತಿ ಪ್ರಕರಣ ನಡೆದಿತ್ತು. ಆದರೂ ಕ್ರಮಕ್ಕೆ ಮುಂದಾಗದೇ ಇರುವುದರಿಂದ ಮತ್ತೊಂದು ಘಟನೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕರ್ತವ್ಯ ಲೋಪ ಎಸಗಿ ಅಧಿಕಾರಿಗಳನ್ನು ಅಮಾನತುಗೊಳಿಸಿ ವಸತಿ ನಿಲಯದಲ್ಲಿ ಸುರಕ್ಷತೆ, ಸೌಲಭ್ಯ ಒದಗಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕು ಅಧ್ಯಕ್ಷ ಆನಂದ ಸ್ವಾಮಿ ಮಾತನಾಡಿ, 6 ರಿಂದ 10ನೇ ತರಗತಿ ಮಕ್ಕಳು ಅಭ್ಯಾಸ ಮಾಡುತ್ತಿರುವ ಮೊರಾರ್ಜಿ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಪಟ್ಟಣಕ್ಕೆ ಹೊಂದಿಕೊಂಡಿರುವ ವಸತಿ ಶಾಲೆಯಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಘಟನೆಯಿಂದ ಪಾಲಕರು ಆತಂಕ ಪಡುವಂತಾಗಿದೆ. ಅಪರಿಚಿತ ವ್ಯಕ್ತಿ ಯಾರೆಂಬುದು ಶಾಲೆ ಮುಖ್ಯಸ್ಥರಿಗೆ ತಿಳಿದಿದೆ. ಈ ಹಿಂದೆ ಘಟನೆ ನಡೆದಾಗ ತಿಳುವಳಿಕೆ ನೀಡಿ ಕಳುಹಿಸಲಾಗಿತ್ತು. ಈಗ ಅದೇ ರೀತಿ ಘಟನೆ ಮರುಕಳಿಸಿದೆ. ಕೂಡಲೇ ಬೇಜವಾಬ್ದಾರಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ವಸತಿ ಶಾಲೆ ಕಾಂಪೌಂಡ್ ಎತ್ತರವಾಗಿ ನಿರ್ಮಿಸಬೇಕು. ಅಗತ್ಯ ಅಡುಗೆ ಸಿಬ್ಬಂದಿ, ಭದ್ರತೆ ಒದಗಿಸಬೇಕು ಹಾಗೂ ವಸತಿ ನಿಲಯವನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದರು.

ಇದನ್ನು ಓದಿದ್ದೀರಾ? ಮಂಗಳೂರು | ಎನ್‌ಐಟಿಕೆಯಲ್ಲಿ 1999 ಬ್ಯಾಚ್ ಹಳೆಯ ವಿದ್ಯಾರ್ಥಿಗಳ ಪುನರ್‌ ಮಿಲನ

ಸಂಗಮೇಶ ಮಂಗಾನವರ ಮಾತನಾಡಿ, ಮೊರಾರ್ಜಿ ವಸತಿ ಶಾಲೆ ಖಾಯಂ ಪ್ರಿನ್ಸಿಪಾಲ ರಜೆಯ ಮೇಲೆ ತೆರಳಿದ್ದಾರೆ. ದೈಹಿಕ ಶಿಕ್ಷಕರಿಗೆ ಪ್ರಭಾರ ಹುದ್ದೆ ನೀಡಿ ವಸತಿ ನಿಲಯ ನಿರ್ವಹಿಸಲಾಗುತ್ತಿದೆ. ಆಡಳಿತ ವ್ಯವಸ್ಥೆ ವೈಫಲ್ಯದಿಂದ ಬಾಲಕಿಯರು ಆತಂಕದಲ್ಲಿ ಅಭ್ಯಾಸ ಮಾಡುವಂತಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡದ ಇಲಾಖೆ ಅಧಿಕಾರಿಗಳ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಭೀಮಣ್ಣ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...