ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

Date:

ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

“ಮಂಡ್ಯ ವಿಶ್ವವಿದ್ಯಾಲಯವು ಸರ್ವ ಸಾಮಾನ್ಯ ಸೌಲಭ್ಯ ಹೊಂದಿದ್ದು, ಹಲವಾರು ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಪ್ರಸ್ತುತ ಪ್ರಪಂಚಕ್ಕೆ ಕೌಶಲ್ಯಾಧಾರಿತ ಪದವೀಧರರನ್ನು ನೀಡುತ್ತ ಬರುತ್ತಿರುವುದು ಶ್ಲಾಘನೀಯ” ಎಂದರು.

“ವಿಶ್ವವಿದ್ಯಾಲಯದಲ್ಲಿ ನಮ್ಮ ಸ್ಥಳೀಯ ರೈತರು, ಕಾರ್ಮಿಕರು, ಬಡವರು, ಕಟ್ಟಡ ಕಾರ್ಮಿಕರ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತಯ್ತಿರುವುದರಿಂದ ಅವರು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳಿಗೆ ಬೆಂಗಳೂರು, ಮೈಸೂರು ಭಾಗದ ಖಾಸಗಿ ವಿವಿಗಳಿಗೆ ತೆರಳಬೇಕಿದೆ. ಅದಲ್ಲದೆ ಅಲ್ಲಿಗೆ ಭರಿಸುವ ಪದವಿ ಶುಲ್ಕ ಲಕ್ಷಾಂತರ ರೂಪಾಯಿಗಳಾಗಿರುತ್ತದೆ. ಆದಕಾರಣ ತರಗತಿಗಳನ್ನು 2024-25ನೇ ಸಾಲಿಗೆ ಪ್ರಾರಂಭವಾಗುವಂತೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಆರಂಭಿಸಬೇಕು” ಎಂದು ಸರ್ಕಾರ ಮತ್ತು ವಿಶ್ವವಿದ್ಯಾಲಯಕ್ಕೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಕೆಂಪನಂಜಮ್ಮಣಿಯವವರ ಹೆಸರಿನಲ್ಲಿ ಕ್ಷೇಮಾಭಿವೃದ್ಧಿ ಮತ್ತು ಸಮಸ್ತ ಮೈಸೂರು ಸಂಸ್ಥಾನದ ಅಭಿವೃದ್ಧಿಗೂ ಹಿನ್ನೆಲೆಯಾಗಿ ನಿಂತು ಕಾರಣರಾಗಿರುವುದರಿಂದ ಅಲ್ಲದೆ ಮಹಿಳಾ ಸಮಾನತೆಗಾಗಿ ಮತ್ತು ಸಾಧಕಿಯಾಗಿರುವುದರಿಂದ ಮಂಡ್ಯ ವಿಶ್ವವಿದ್ಯಾಲಯಕ್ಕೆ ಮಾತೆ ಕೆಂಪನಂಜಮ್ಮಣ್ಣಿ ಅವರ ಹೆಸರನ್ನು ನಾಮಕರಣ ಮಾಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

“ಕುಲಪತಿಗಳು, ಕುಲಸಚಿವರು, ಉನ್ನತ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಇದರ ಬಗ್ಗೆ ಸೂಕ್ತ ಕ್ರಮ ವಹಿಸಬೇಕು” ಎಂದು ಕೋರಿದರು.

ಮಂಡ್ಯ ಜಿಲ್ಲಾಧ್ಯಕ್ಷ ಎಚ್ ಡಿ ಜಯರಾಂ, ಶಿವರಾಮೆಗೌಡ, ಮಂಚಶೆಟ್ಟಿ, ಪಲ್ಲವಿ, ಮನು ಸೇರಿದಂತೆ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...