ಕಾರವಾರ | ಕಾಳಿ ನದಿಗೆ ಬಿದ್ದಿರುವ ಲಾರಿ ಎತ್ತಲು ನಿರ್ಲಕ್ಷ್ಯ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಮಾಲೀಕ

Date:

ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಆ. 6ರ ಮಧ್ಯರಾತ್ರಿಯ ವೇಳೆ ಮುರಿದು, ಆ ಸಂದರ್ಭದಲ್ಲಿ ಅದರ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿತ್ತು. ನದಿಗೆ ಬಿದ್ದಿರುವ ಲಾರಿ ಎತ್ತಲು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ, ಮಾಲೀಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಲಾರಿಯ ಮಾಲೀಕ ಸೆಂಥಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದವರು. ಪೊಲೀಸರು ಹಾಗೂ ಪತ್ರಕರ್ತರ ಸಮಯಪ್ರಜ್ಞೆ ಮೆರೆದಿದ್ದರಿಂದ, ಆತ ನದಿಗೆ ಹಾರುವ ಮೊದಲೇ ರಕ್ಷಿಸಿದ್ದಾರೆ.

ಕಾರವಾರದ ಕಾಳಿ ಸೇತುವೆ ಮುರಿದು ಬಿದ್ದು ಸೇತುವೆ ಮೇಲೆ ಹುಬ್ಬಳ್ಳಿಗೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿ ಬಿದ್ದಿತ್ತು. ಮಾಹಿತಿ ತಿಳಿದ ಕೂಡಲೇ ಚಾಲಕನನ್ನು ರಕ್ಷಣೆ ಮಾಡಲಾಗಿತ್ತು. ಬಳಿಕ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಲಾರಿಯನ್ನು ಇನ್ನೂ ಕೂಡ ನದಿಯಿಂದ ಮೇಲೆತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಾರವಾರ

ಈ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಲಾರಿಯ ಮಾಲೀಕ ಸೆಂಥಿಲ್ ಕುಮಾರ್ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಮುರಿದು ಬಿದ್ದಿರುವ ಕಾಳಿ ನದಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನ ನಡೆಸಿದ್ದಾನೆ.

ಲಾರಿ ಮಾಲೀಕ ತನ್ನ ಸಹಚರನೋರ್ವರೊಂದಿಗೆ ಮುರಿದುಬಿದ್ದ ಹಳೆ ಸೇತುವೆ ಕಡೆ ಓಡಿದ್ದಾನೆ. ಬೀಳುವ ಹಂತದಲ್ಲಿದ್ದ ಸೇತುವೆ ಮೇಲೆ ನಿಂತು ಪೊಲೀಸರೊಂದಿಗೆ ವಾಗ್ವಾದ ಕೂಡ ನಡೆಸಿದ್ದಾನೆ. ಬಳಿಕ ಘಟನಾ ಸ್ಥಳದಲ್ಲಿದ್ದ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾಗರೂಕತೆ ವಹಿಸಿ ಮುರಿದ ಸೇತುವೆ ಮೇಲೆ ಕುಳಿತಿದ್ದ ಇಬ್ಬರನ್ನೂ ಕರೆ ತಂದಿದ್ದಾರೆ.

ಐ.ಆರ್.ಬಿ ಕಂಪನಿ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತದ ವಿರುದ್ಧ ಮುರಿದ ಸೇತುವೆ ಮೇಲೆಯೇ ಕುಳಿತು ಪ್ರತಿಭಟನೆ ಕೂಡ ಮಾಡಿದ್ದಾರೆ. ನಂತರ ಆತನನ್ನು ಪೊಲೀಸ್ ಸಿಬ್ಬಂದಿಗಳು ಮನವೊಲಿಸಿ ಸೇತುವೆ ಭಾಗದಿಂದ ಹೊರತಂದು ತಿಳಿ ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಲಾರಿಯ ಮಾಲೀಕ ಸೆಂಥಿಲ್ ಕುಮಾರ್, “ಲಾರಿ ಬಿದ್ದು, ಏಳು ದಿನ ಕಳೆದಿದೆ. ಆದರೆ ಯಾರೂ ಕೂಡ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ. ವಾಹನವನ್ನು ಮೇಲೆತ್ತಲು ಇಲ್ಲಿನ ಅಧಿಕಾರಿಗಳು ಏನೂ ಕ್ರಮ ಕೈಗೊಂಡಿಲ್ಲ. ಒಂದು ಶಾಲಾ ವಾಹನವೋ ಅಥವಾ 50-60 ಜನರು ಪ್ರಯಾಣಿಸುತ್ತಿದ್ದ ವಾಹನ ಬಿದ್ದಿದ್ದರೆ ಇಷ್ಟೊತ್ತಿಗೆ ಏನಾಗುತ್ತಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಾಲಕ

“ನನ್ನ ಲಾರಿ ಅವಘಾತ ಸಂಭವಿಸಿ ಈ ಸೇತುವೆ ಬಿದ್ದಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ ಸೇತುವೆ ಬಿದ್ದಿದೆ. ನನ್ನ ಪತ್ನಿಯ ತಾಳಿ ಅಡವಿಟ್ಟು ಈ ವಾಹನವನ್ನು ಖರೀದಿಸಿದ್ದೆ. ಜೀವನೋಪಾಯಕ್ಕಿದ್ದ ವಾಹನ ಸೇತುವೆ ಕುಸಿದು ಬಿದ್ದಿದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಸರ್ಕಾರಿ ಅಧಿಕಾರಿಗಳು ಏನೂ ಕ್ರಮ ತೆಗೆದುಕೊಂಡಿಲ್ಲ. ನನಗೆ ಪರಿಹಾರ ಬೇಕಿದೆ. ನನಗೆ ಆತ್ಮಹತ್ಯೆ ಮಾಡಿಕೊಳ್ಳದೆ ಬೇರೆ ದಾರಿ ಇಲ್ಲ” ಎಂದು ಲಾರಿಯ ಮಾಲೀಕ ಸೆಂಥಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...