ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

Date:

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ‘ಕದಂಬ’ ನೌಕಾನೆಲೆಯು ಮತ್ತೊಂದು ಸುವರ್ಣ ಅಧ್ಯಾಯಕ್ಕೆ ಸಾಕ್ಷಿಯಾಗಿದೆ. ದೇಶದ ರಕ್ಷಣಾ ವಲಯದಲ್ಲಿ ‘ಆತ್ಮನಿರ್ಭರತೆ’ಯನ್ನು ಸಾರುವ ನಿಟ್ಟಿನಲ್ಲಿ, ಕಲ್ವರಿ ದರ್ಜೆಯ ಜಲಾಂತರ್ಗಾಮಿಗಳ (Submarines) ನಿರ್ವಹಣೆ ಮತ್ತು ದುರಸ್ತಿಗಾಗಿ ವಿಶೇಷ ಘಟಕವನ್ನು ಇಲ್ಲಿ ಆರಂಭಿಸಲಾಗಿದೆ.

ಇಲ್ಲಿಯವರೆಗೆ ಕಲ್ವರಿ ದರ್ಜೆಯ ಜಲಾಂತರ್ಗಾಮಿಗಳ ಅತ್ಯಾಧುನಿಕ ‘ನ್ಯೂಮ್ಯಾಟಿಕ್’ ಬಿಡಿಭಾಗಗಳ ಪರೀಕ್ಷೆ ಹಾಗೂ ದುರಸ್ತಿಗಾಗಿ ಭಾರತವು ಫ್ರಾನ್ಸ್ ದೇಶವನ್ನು ಅವಲಂಬಿಸಬೇಕಾಗಿತ್ತು. ಇದರಿಂದಾಗಿ ಸಮಯದ ವ್ಯಯದ ಜೊತೆಗೆ ಭಾರಿ ಪ್ರಮಾಣದ ಸಾಗಣೆ ವೆಚ್ಚವೂ ತಗುಲುತ್ತಿತ್ತು.

ಇದೀಗ ಕಾರವಾರದ ತಾಂತ್ರಿಕ ವರ್ಕ್‌ಶಾಪ್‌ನಲ್ಲಿ ವೈಸ್ ಅಡ್ಮಿರಲ್ ಬಿ. ಶಿವಕುಮಾರ್ ಅವರು ‘ನ್ಯೂಮ್ಯಾಟಿಕ್ ರ್ಯಾಮ್ ಟೆಸ್ಟ್ ಫೆಸಿಲಿಟಿ’ಯನ್ನು ಉದ್ಘಾಟಿಸುವುದರೊಂದಿಗೆ, ಈ ಎಲ್ಲಾ ಸವಾಲುಗಳಿಗೆ ಪರಿಹಾರ ಸಿಕ್ಕಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ತಾಂತ್ರಿಕ ಸೌಲಭ್ಯವನ್ನು ಹೊಂದಿರುವ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳ ಪಟ್ಟಿಗೆ ಈಗ ಭಾರತವೂ ಸೇರ್ಪಡೆಯಾಗಿದೆ. ಫ್ರಾನ್ಸ್ ಮತ್ತು ಬ್ರೆಜಿಲ್ ನಂತರ ಈ ಸುಧಾರಿತ ನಿರ್ವಹಣಾ ವ್ಯವಸ್ಥೆಯನ್ನು (MRO) ಹೊಂದಿರುವ ಜಗತ್ತಿನ ಮೂರನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.

ಈ ಸುದ್ದಿ ಓದಿದ್ದೀರಾ ? ಶಿರಸಿ | ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ಜೀವ ಉಳಿಸಿದ ಪಯಾಜ್ (ಪಯ್ಯು) ಚೌಟಿ

ಈ ಕೇಂದ್ರವನ್ನು ‘ನೇವಲ್ ಗ್ರೂಪ್ ಇಂಡಿಯಾ’ ಮತ್ತು ಸ್ವದೇಶಿ ಸಂಸ್ಥೆಯಾದ ‘ಎಸ್‌ಇಸಿ ಇಂಡಸ್ಟ್ರೀಸ್’ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ.

ಏನಿದು ಕಲ್ವರಿ ಸಬ್‌ಮೆರಿನ್: ಫ್ರಾನ್ಸ್‌ನ ತಂತ್ರಜ್ಞಾನದ ನೆರವಿನೊಂದಿಗೆ ಮುಂಬೈನ ಮಜಗಾಂವ್ ಡಾಕ್‌ನಲ್ಲಿ ಇವುಗಳನ್ನು ನಿರ್ಮಿಸಲಾಗಿದೆ. ಶತ್ರುಗಳ ಕಣ್ಣಿಗೆ ಮಣ್ಣೆರಚಿ ಸಮುದ್ರದಾಳದಲ್ಲಿ ಅತ್ಯಂತ ಸದ್ದಿಲ್ಲದೆ ಚಲಿಸುವ ಸಾಮರ್ಥ್ಯ ಇವುಗಳಿಗಿದೆ.

ಇವು ಪ್ರಬಲ ಕ್ಷಿಪಣಿಗಳು ಮತ್ತು ಟಾರ್ಪಿಡೋಗಳನ್ನು ಹೊತ್ತೊಯ್ಯುವ ಶಕ್ತಿ ಹೊಂದಿವೆ. ಪ್ರಸ್ತುತ ಭಾರತೀಯ ನೌಕಾಪಡೆಯಲ್ಲಿ ಇಂತಹ 6 ಜಲಾಂತರ್ಗಾಮಿಗಳು ಕಾರ್ಯನಿರ್ವಹಿಸುತ್ತಿವೆ.

ಕಾರವಾರದ ಸೀಬರ್ಡ್ ನೌಕಾನೆಲೆಯ ಎರಡನೇ ಹಂತದ ಕಾಮಗಾರಿಗಳು ವೇಗವಾಗಿ ನಡೆಯುತ್ತಿವೆ. ಈ ಹೊಸ ನಿರ್ವಹಣಾ ಘಟಕವು ಕೇವಲ ನೌಕಾಪಡೆಯ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಸ್ಥಳೀಯವಾಗಿ ಬಿಡಿಭಾಗಗಳ ಉತ್ಪಾದನೆ ಮತ್ತು ತಾಂತ್ರಿಕ ಉದ್ಯೋಗ ಸೃಷ್ಟಿಗೆ ದೊಡ್ಡ ಮಟ್ಟದ ಅವಕಾಶಗಳನ್ನು ಕಲ್ಪಿಸಲಿದೆ.

ಮುಂದಿನ ದಿನಗಳಲ್ಲಿ ಕಾರವಾರವು ಜಲಾಂತರ್ಗಾಮಿ ನಿರ್ವಹಣೆಯ ಜಾಗತಿಕ ಕೇಂದ್ರವಾಗಿ (Centre of Excellence) ಗುರುತಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...