ಕಾರವಾರ | ಕೊಡಸಳ್ಳಿ ಬಳಿ ಗುಡ್ಡ ಕುಸಿತ; ರಸ್ತೆ ಸಂಪರ್ಕ ಕಡಿತ

Date:

ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ‌‌. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ ಸಾಹಸ ಪಟ್ಟಿದ್ದಾರೆ.

ಕೊಡಸಳ್ಳಿಯಿಂದ ಬಾಳೆಮನೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದೆ. ರಸ್ತೆಯ ಮೇಲೆ 30 ಮೀಟರ್ ಗೂ ಹೆಚ್ಚು ಪ್ರಮಾಣದ ಗುಡ್ಡ ಕುಸಿದು ಕೊಡಸಳ್ಳಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಹೋಗುವ ಮಾರ್ಗ ಬಂದ್ ಆಗಿತ್ತು. ವಿದ್ಯುತ್ ಗಾರದಲ್ಲಿ ಕಾರ್ಯ ನಿರ್ವಹಿಸುತಿದ್ದ 25 ಜನ ಸಿಬ್ಬಂದಿ ಹಾಗೂ ಕೊಡಸಳ್ಳಿಗೆ ತೆರಳಿದ್ದ ಬಸ್ ಸಹ ಸಂಚರಿಸಲಾಗದೇ ಸಿಲುಕಿಕೊಂಡಿತು.

ತಕ್ಷಣ ಕಾರ್ಯಾಚರಣೆಗೆ ಇಳಿದ ಜಿಲ್ಲಾಡಳಿತ ಹಾಗೂ ಕೆಪಿಸಿ ಇಲಾಖೆಯವರು ಇಂದು ಓರ್ವ ಕಾಲೇಜು ವಿದ್ಯಾರ್ಥಿನಿ ಸೇರಿ ಆರು ಜನರನ್ನು ರಕ್ಷಿಸಿ ಸ್ಥಳಾಂತರಿಸಿದ್ದಾರೆ. ಇನ್ನು ಇದೇ ಭಾಗದಲ್ಲಿ ಬಾಳೆಮನೆ, ಸುಳಗೇರಿ ಗ್ರಾಮವಿದ್ದು 150 ಕ್ಕೂ ಹೆಚ್ಚು ಜನರಿರುವ ಈ ಊರಿಗೆ ಸಂಪರ್ಕ ಕಡಿತವಾಗಿದ್ದು ತೊಂದರೆ ಅನುಭವಿಸುವಂತಾಗಿದೆ. ಅಲ್ಲದೇ ನದಿ ಭಾಗದಲ್ಲಿ ಕಿಲೋಮೀಟರ್ ಗಟ್ಟಲೇ ನಡೆದುಕೊಂಡು ಬಂದು ರಸ್ತೆ ಸಂಪರ್ಕ ಮಾಡಬೇಕಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಗದಗ  | ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿಧಿಯಾಗಿ ಅಮರಪ್ಪ ಎಚ್ ದೊಡ್ಡಮನಿ ಆಯ್ಕೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...