ಕಾರವಾರ | ಬಳಕೆಯಾಗದೆ ಪಾಳುಬೀಳುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ

Date:

ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸುಮಾರು 2 ಕೋಟಿ ವೆಚ್ಚದಲ್ಲಿ 2018ರಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ. ನಗರದ ಬಾಡಿಗೆ ಕಟ್ಟಡವೊಂದರಲ್ಲಿ ಬಾಲಕರ ನಿಲಯ ನಡೆಸುತ್ತಿದ್ದು ವಾರ್ಷಿಕವಾಗಿ ಲಕ್ಷಾಂತರ ರೂ. ಬಾಡಿಗೆಯನ್ನು ಕಟ್ಟಲಾಗುತ್ತಿದೆ. ಕೋಟ್ಯಂತರ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದರೂ ಈ ಸೌಲಭ್ಯ ಉಪಯೋಗಕ್ಕೆ ಇಲ್ಲದಂತಾಗಿದೆ. ಬಳಕೆಯಾಗದೆ, ಕಟ್ಟಡದ ಆವರಣದಲ್ಲಿ ಆಳೆತ್ತರದವರೆಗೆ ಗಿಡಗಂಟಿಗಳು ಬೆಳೆದು ನಿಂತಿವೆ.

ಶಿರವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಜವಾಡದಲ್ಲಿನ ಗಜನಿ ಭೂಮಿಯಲ್ಲಿ ಕಟ್ಟಡ ನಿರ್ಮಿಸಿರುವುದಕ್ಕೆ ಆರಂಭದಿಂದಲೂ ಆಕ್ಷೇಪ ವ್ಯಕ್ತವಾಗಿತ್ತು. ಮಳೆಗಾಲದಲ್ಲಿ ಈ ಪ್ರದೇಶ ಜಲಾವೃತಗೊಳ್ಳುವ ಸಮಸ್ಯೆ ಎದುರಿಸುತ್ತಿದೆ. ಅಲ್ಲದೆ ಜನವಸತಿಯಿಂದ ದೂರವಿರುವ ಜಾಗದಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದಕ್ಕೂ ಜನರ ವಿರೋಧವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಟ್ಟಡ ಪೂರ್ಣಗೊಂಡರೂ ವಿದ್ಯುತ್ ಸಂಪರ್ಕ, ರಸ್ತೆ ಸೌಕರ್ಯ ಇರಲಿಲ್ಲ. ಇತ್ತೀಚೆಗೆ ವಿದ್ಯುತ್ ಸಂಪರ್ಕ, ಕಟ್ಟಡದ ದುರಸ್ತಿಗೆ ಕೆಆರ್ಐಡಿಎಲ್‌‍ಗೆ ಕಾರ್ಯಾದೇಶ ನೀಡಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಎಫ್.ಯು.ಪೂಜಾರ ಮಾದ್ಯಮಗಳಿಗೆ ಉತ್ತರಿಸಿದ್ದು, ಮುಖ್ಯ ರಸ್ತೆಯಿಂದ ವಿದ್ಯಾರ್ಥಿ ನಿಲಯಕ್ಕೆ ರಸ್ತೆ ನಿರ್ಮಿಸಲು 47ಲಕ್ಷ ರೂ. ಪ್ರಸ್ತಾವ ಸಲ್ಲಿಸಲಾಗಿದೆ ಎಂದಿದ್ದಾರೆ.

ಕೋಟ್ಯಂತರ ರೂ. ಅನುದಾನ ಬಳಸಿ ಯೋಜನೆ ರೂಪಿಸುವ ಮೊದಲು ಮೂಲಸೌಕರ್ಯಗಳ ಬಗ್ಗೆ ಗಮನಹರಿಸಿಲ್ಲ. ರಸ್ತೆಯೇ ಇಲ್ಲದ ಜಾಗದಲ್ಲಿ ಕಟ್ಟಡ ನಿರ್ಮಿಸಲಾಗಿದೆ. ನಿರ್ಜನವಾಗಿರುವ ಮತ್ತು ಗಜನಿ ಭೂಮಿಯಲ್ಲಿ ವಿದ್ಯಾರ್ಥಿ ನಿಲಯ ನಿರ್ಮಿಸಿರುವುದು ಸರಿಯಲ್ಲ. ಕಟ್ಟಡ ನಿರ್ಮಿಸಿ ನಾಲ್ಕು ವರ್ಷ ಕಳೆದರೂ ಅಗತ್ಯ ವ್ಯವಸ್ಥೆ ಕಲ್ಪಿಸದೇ ಖಾಸಗಿ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯ ನಡೆಸುತ್ತಿದ್ದು ಸರ್ಕಾರದ ಹಣ ಪೋಲು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...