ಕಾರವಾರ | ರಸ್ತೆ ಸೌಲಭ್ಯದ ಕೊರತೆ: ಕಟ್ಟಿಗೆಗೆ ಮೃತದೇಹ ಕಟ್ಟಿ ಕೊಂಡೊಯ್ದ ಗ್ರಾಮಸ್ಥರು!

Date:

ಸರಿಯಾದ ರಸ್ತೆ ಸೌಲಭ್ಯ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಮೃತಪಟ್ಟ ಗ್ರಾಮದ ವ್ಯಕ್ತಿಯೋರ್ವನ ಮೃತದೇಹವನ್ನು ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಹೆಗಲಲ್ಲಿ ಕೊಂಡೊಯ್ದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಕಾರವಾರ ನಗರಸಭೆ ವ್ಯಾಪ್ತಿಯ ಗುಡ್ಡಹಳ್ಳಿಯಲ್ಲಿ ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ರವಾನಿಸಲಾಗಿದೆ. ನಗರಕ್ಕೆ ಹೊಂದಿಕೊಂಡಿರುವ ಗುಡ್ಡದ ಮೇಲಿನ ಗ್ರಾ‌ಮ ಗುಡ್ಡಳ್ಳಿಗೆ ಮೃತ ವ್ಯಕ್ತಿಯ ಶವವನ್ನು ಕಟ್ಟಿಗೆಯ ತುಂಡಿಗೆ ಕಟ್ಟಿ, ನಾಲ್ಕು ಜನ ಹೆಗಲ ಮೇಲೆ ಹೊತ್ತು ಮನೆಗೆ ಸಾಗಿಸಿ, ನಂತರ ಅಂತಿಮ ಸಂಸ್ಕಾರ ಮಾಡಿದ್ದಾರೆ.

ರಸ್ತೆ 10

ಕಾರವಾರ ನಗರಸಭೆ 31ನೇ ವಾರ್ಡಿಗೆ ಸೇರಿದ ಗುಡ್ಡಳ್ಳಿ ಗ್ರಾಮದ ನಿವಾಸಿ ರಾಮ ಎಂ‌ ಗೌಡ ಎಂಬುವವರು ಅನಾರೋಗ್ಯದ ಕಾರಣ ಶುಕ್ರವಾರ ರಾತ್ರಿ ಕಾರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಹೃದಯಾಘಾತವಾಗಿ ಅಸುನೀಗಿದ್ದು, ಶವವನ್ನು ಗುಡ್ಡಳ್ಳಿಯ ಕೆಳಭಾಗದಲ್ಲಿ ರಸ್ತೆಯ ತನಕ ಆ್ಯಂಬುಲೆನ್ಸ್‌ನಲ್ಲಿ ತರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಕ್ ಮಾತ್ರ ಸಾಗುವ ಡಾಂಬರ್ ಇಲ್ಲದ , ಜಲ್ಲಿ ಮಾತ್ರ ಹಾಕಿದ ರಸ್ತೆಯಲ್ಲಿ ಸಾಗುವಾಗ ಗ್ರಾಮದ ಯುವಕರು ಒಂದು ಉದ್ದ ಕಟ್ಟಿಗೆಯ ತುಂಡಿಗೆ ಶವವನ್ನು ಬೆಡ್ ಶೀಟ್‌ನಲ್ಲಿ ಸುತ್ತಿ, ಹಗ್ಗದಲ್ಲಿ ಬಿಗಿದು ಮನೆಗೆ ಕೊಂಡೊಯ್ದು ಶವಸಂಸ್ಕಾರ ಮಾಡಿದ್ದಾರೆ. ಈ ರೀತಿ ಶವ ಸಾಗಿಸಿದ ದೃಶ್ಯ ಮನ ಕಲಕುವಂತಿತ್ತು.

ನಗರಸಭಾ ವ್ಯಾಪ್ತಿಯ ಗುಡ್ಡಳ್ಳಿ ಗ್ರಾಮದ ಗುಡ್ಡದ ಎತ್ತರದಲ್ಲಿದ್ದು, ಇಲ್ಲಿ 30 ರಿಂದ 40 ಕುಟುಂಬಗಳು ನೆಲೆಸಿವೆ. 250 ಜನ ಮತದಾರರಿದ್ದಾರೆ. ಗುಡ್ಡ ಪ್ರದೇಶದ ಹಾಗೂ ಅರಣ್ಯ ಇಲಾಖೆಯ ಅಧೀನದಲ್ಲಿ ರಸ್ತೆ ಇರುವ ಕಾರಣ
ರಸ್ತೆ ಡಾಂಬರೀಕರಣ ಸಾಧ್ಯವಾಗಿಲ್ಲ. ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಇದೆ. ಕಚ್ಚಾ ರಸ್ತೆ ಇದೆ. ಆದರೆ, ಅಲ್ಲಿಗೆ ಆ್ಯಂಬುಲೆನ್ಸ್‌ ತಲುಪುವ ಸ್ಥಿತಿ ಇಲ್ಲ. ಹೀಗಾಗಿ, ಜನರು, ವಿದ್ಯಾರ್ಥಿಗಳು ಕಾಲ್ನಡಿಗೆ ಅಥವಾ ಬೈಕಿನಲ್ಲಿ ಕಾರವಾರ ತಲುಪುತ್ತಾರೆ ಎಂಬ ಮಾಹಿತಿ ದೊರಕಿದೆ. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸೂಕ್ತ ರಸ್ತೆಯ ವ್ಯವಸ್ಥೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಗ್ರಾಮ
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...