ಕಾರವಾರ | ಜಿಪಿಎಸ್ ಟ್ಯಾಗ್ ಹೊಂದಿದ್ದ ಸೈಬೀರಿಯಾದ ‘ಹ್ಯೂಗ್ಲಿನ್ ಸೀಗಲ್’ ಹಕ್ಕಿ ಸಾವು

Date:

ಕಾರವಾರ: ಸಾವಿರಾರು ಮೈಲು ದೂರದ ಮಂಜುಗಡ್ಡೆ ಪ್ರದೇಶದಿಂದ ವಲಸೆ ಬಂದಿದ್ದ ಅಪರೂಪದ ‘ಹ್ಯೂಗ್ಲಿನ್ ಸೀಗಲ್’ ಹಕ್ಕಿಯ ಪ್ರಯಾಣ ಕಾರವಾರದ ಕಡಲತೀರದಲ್ಲಿ ದುರಂತ ಅಂತ್ಯ ಕಂಡಿದೆ. ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಈ ಹಕ್ಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಅದು ಫಲಿಸದೇ ಗುರುವಾರ ರಾತ್ರಿ ಮೃತಪಟ್ಟಿದೆ

ಘಟನೆಯ ಹಿನ್ನೆಲೆ: ಕೆಲ ದಿನಗಳ ಹಿಂದೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದ ಸಮೀಪವಿರುವ ತಿಮ್ಮಕ್ಕ ಗಾರ್ಡನ್ ಬಳಿ ಈ ಪಕ್ಷಿ ಅಶಕ್ತವಾಗಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದರು. ಅದರ ಬೆನ್ನಿನ ಮೇಲೆ ವಿಚಿತ್ರವಾದ ಉಪಕರಣ ಇರುವುದನ್ನು ಕಂಡು ಕುತೂಹಲಗೊಂಡ ಸಾರ್ವಜನಿಕರು ತಕ್ಷಣ ಅರಣ್ಯ ಇಲಾಖೆಯ ಮರೈನ್ ವಿಭಾಗಕ್ಕೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪಕ್ಷಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ, ಅದು ಸಂಶೋಧನೆಗಾಗಿ ಬಳಸಲಾದ ಜಿಪಿಎಸ್ ಟ್ರ್ಯಾಕರ್ ಎಂದು ತಿಳಿದುಬಂದಿದೆ. ಶ್ರೀಲಂಕಾದ ವನ್ಯಜೀವಿ ಸಂಶೋಧನಾ ಮಂಡಳಿಯು ಚೈನೀಸ್ ಅಕಾಡೆಮಿ ಆಫ್ ಸೈನ್ಸ್ ಸಹಯೋಗದೊಂದಿಗೆ ಕಳೆದ ಮಾರ್ಚ್‌ನಲ್ಲಿ ಈ ಹಕ್ಕಿಗೆ ಜಿಪಿಎಸ್ ಅಳವಡಿಸಿತ್ತು. ಪಕ್ಷಿಗಳ ವಲಸೆ ಹಾದಿ, ಹವಾಮಾನ ಮತ್ತು ಆಹಾರದ ಕ್ರಮಗಳನ್ನು ಅಧ್ಯಯನ ಮಾಡಲು ಈ ಪ್ರಯೋಗ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಲಂಕಾದಿಂದ ಸೈಬೀರಿಯಾಕ್ಕೆ ತೆರಳಿ, ಅಲ್ಲಿ ಆರ್ಕ್ಟಿಕ್ ಪ್ರದೇಶದಲ್ಲಿ ಸಂತಾನೋತ್ಪತ್ತಿ ಮುಗಿಸಿ ಪುನಃ ಶ್ರೀಲಂಕಾಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ತೀವ್ರವಾಗಿ ಗಾಯಗೊಂಡಿದ್ದ ಈ ಹಕ್ಕಿಯನ್ನು ಕೂಡಲೇ ದಾಂಡೇಲಿಯ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲಿನ ತಜ್ಞ ವೈದ್ಯರು ಹಕ್ಕಿಯ ಜೀವ ಉಳಿಸಲು ಸತತ ಪ್ರಯತ್ನ ನಡೆಸಿದರೂ, ಗಾಯದ ತೀವ್ರತೆಯಿಂದಾಗಿ ಅದು ಆಹಾರ ಸೇವಿಸಲು ಸಾಧ್ಯವಾಗದೆ ಗುರುವಾರ ರಾತ್ರಿ ಕೊನೆಯುಸಿರೆಳೆದಿದೆ.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಮರಣೋತ್ತರ ಪರೀಕ್ಷೆಯಲ್ಲಿ ಹಕ್ಕಿಯು ಗಾಯದ ನೋವು ಹಾಗೂ ಹಸಿವಿನಿಂದ ಬಳಲಿ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಹಕ್ಕಿಯ ಬೆನ್ನಿನಲ್ಲಿದ್ದ ಜಿಪಿಎಸ್ ಉಪಕರಣವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...